ಕೆಪಿಎಸ್ಸಿ ಕೆಲಸ ಕೊಡಿಸುವುದಾಗಿ ನಂಬಿಸಿ 28 ಸಾವಿರ ರೂ. ವಂಚನೆ
Team Udayavani, Dec 10, 2019, 10:30 AM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಕೆಲಸ ಕೊಡಿಸುವುದಾಗಿ ನಂಬಿಸಿ ಪದವೀಧರ ಯುವಕನನ್ನು ವಂಚಿಸಿರುವ ಆರೋಪ ಸಂಬಂಧ ಅನಿಲ್ ಕುಮಾರ್ ಎಂಬಾತನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಜಯನಗರದ ಗಿರೀಶ್ ಎಂಬವರು ನೀಡಿದ ದೂರಿನ ಅನ್ವಯ ಅನಿಲ್ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಇನ್ನೂ ಹಲವರಿಗೆ ವಂಚಿಸಿರುವ ಸಾಧ್ಯತೆಯಿದೆ. ಈ ಕುರಿತು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನ.29ರಂದು ಬಿಸಿಎ ಪದವೀಧರ ಗಿರೀಶ್ ಅವರ ತಾಯಿಗೆ ದೂರವಾಣಿ ಕರೆ ಮಾಡಿದ್ದ ಅನಿಲ್ ಕುಮಾರ್ ಎಂಬಾತ, ತಾನು ಕೆಪಿಎಸ್ ಸಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾನೆ. ಬಳಿಕ ಆಯೋಗದಲ್ಲಿ ಟೈಪಿಸ್ಟ್ ಹುದ್ದೆಗಳು ಖಾಲಿಯಿದ್ದು, ಹಣ ನೀಡಿದರೆ ನಿಮ್ಮ ಮಗನಿಗೆ ಕೆಲಸ ಕೊಡಿಸುತ್ತೇನೆ ಎಂದು ನಂಬಿಸಿ, 28 ಸಾವಿರ ರೂ. ಕೇಳಿದ್ದಾನೆ. ಆತನ ಮಾತು ನಂಬಿದ ಫೋನ್ಪೇ ಮೂಲಕ ಎಂಟು ಸಾವಿರ ರೂ.ಗಳನ್ನು ಅನಿಲ್ಗೆ ಕಳುಹಿಸಿದ್ದಾರೆ.
ಇದಾದ ಬಳಿಕ ಡಿ.2ರಂದು ಬಹುಮಹಡಿ ಕಟ್ಟಡ (ಎಂ.ಎಸ್. ಬಿಲ್ಡಿಂಗ್) ಬಳಿ ಗಿರೀಶ್ ಅವರಿಂದ 20 ಸಾವಿರ ರೂ. ಪಡೆದು ಕೆಲ ಹೊತ್ತಿನಲ್ಲಿ ಬರುತ್ತೇನೆ ಎಂದು ಹೇಳಿ ಹೋದವ ಮತ್ತೆ ಬಂದಿಲ್ಲ. ಆತನ ಪೋನ್ ಕೂಡ ಸ್ವಿಚ್ ಆಫ್ ಆಗಿದೆ. ಇದರಿಂದ ಅನುಮಾನಗೊಂಡ ಅವರು, ಲೋಕಸೇವಾ ಆಯೋಗಕ್ಕೆ ತೆರಳಿ ಅನಿಲ್ ಎಂಬಾತನ ಬಗ್ಗೆ ವಿಚಾರಿಸಿದಾಗ, ಅಂತಹ ಹೆಸರಿನ ವ್ಯಕ್ತಿ ಇಲ್ಲಿ ಕೆಲಸ ಮಾಡುತ್ತಿಲ್ಲ. ಹಣ ಪಡೆದು ಕೆಲಸ ನೀಡುವುದೂ ಇಲ್ಲ ಎಂದು ಹೇಳಿದ್ದಾರೆ. ಕಡೆಗೆ ಮೋಸ ಹೋಗಿರುವುದು ಗೊತ್ತಾಗಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ