ಹೈನುಗಾರಿಕೆ ಮಾಹಿತಿ ನೀಡುವ ಉಚಿತ ಆ್ಯಪ್ ಬಿಡುಗಡೆ
Team Udayavani, Jul 20, 2017, 5:10 AM IST
ಬೆಂಗಳೂರು: ವೈಜ್ಞಾನಿಕವಾಗಿ ಹೈನುಗಾರಿಕೆ ಕುರಿತು ರೈತರಿಗೆ ಮಾಹಿತಿ ನೀಡುವ ಮೊಬೈಲ್ ಆ್ಯಪ್ ಅನ್ನು ಪಶು ಸಂಗೋಪನೆ ಸಚಿವ ಎ.ಮಂಜು ಬಿಡುಗಡೆ ಮಾಡಿದರು.
ಭಾರತೀಯ ಅನುಸಂಧಾನ ಪರಿಷತ್ ಯೋಜನೆಯಡಿ ಬೆಂಗಳೂರಿನ ಪಶುವೈದ್ಯಕೀಯ ವಿದ್ಯಾಲಯ ಜಯಲಕ್ಷ್ಮೀ ಅಗ್ರೊ ಟೆಕ್ ಸಂಸ್ಥೆಯ ಸಹಯೋಗದಲ್ಲಿ ಅಭಿವೃದ್ಧಿ ಪಡಿಸಿರುವ ನೂತನ ಆ್ಯಪನ್ನು ರೈತರು ಪ್ಲೇ ಸ್ಟೋರ್ನಲ್ಲಿ ಡೈರಿ ಕನ್ನಡ ಎಂದು ನಮೂದಿಸಿ ಉಚಿತವಾಗಿ ಡೌನ್ಲೋಡ್ ಮಾಡಿಕೊಳ್ಳಬಹುದು.
ಬಿಡುಗಡೆ ನಂತರ ಮಾತನಾಡಿದ ಸಚಿವ ಎ. ಮಂಜು, ಈ ಮೊಬೈಲ್ ಆಪ್ನಲ್ಲಿ ರೈತರು ವೈಜ್ಞಾನಿಕವಾಗಿ ಹೈನುಗಾರಿಕೆ ನಡೆಸಲು ಧ್ವನಿ ಮತ್ತು ಚಿತ್ರಗಳ ಮೂಲಕ ಮಾಹಿತಿ ನೀಡಲಾಗಿದೆ. ಹಸು ಮತ್ತು ಎಮ್ಮೆ ತಳಿಗಳ ಪರಿಚಯ, ಬೆದೆಯ ಲಕ್ಷಣಗಳು, ಹೈನು ರಾಸುಗಳಲ್ಲಿ ಕೃತಕ ಗರ್ಭಧಾರಣೆ, ಅಧಿಕ ಹಾಲು ಕೊಡುವ ರಾಸುಗಳ ಆಯ್ಕೆ, ವಸತಿ ವ್ಯವಸ್ಥೆ ಮತ್ತು ವೈಜ್ಞಾನಿಕ ನಿರ್ವಹಣೆ,ರಾಸುಗಳ ಆಹಾರ, ಅವುಗಳಲ್ಲಿ ಕಂಡು ಬರುವ ಮುಖ್ಯ ರೋಗಗಳು ಮತ್ತು ನಿಯಂತ್ರಣ, ಶುದ್ಧ ಹಾಲಿನ ಉತ್ಪಾದನೆ, ಹೈನುಗಾರಿಕೆಯಲ್ಲಿ ಆರ್ಥಿಕತೆ ಮುಂತಾದ ಮಾಹಿತಿ ನೀಡಲಾಗಿದೆ. ರೈತರು ಈ ಆ್ಯಪ್ ಬಳಕೆ ಮಾಡಿಕೊಳ್ಳುವ ಮೂಲಕ ಹೆಚ್ಚಿನ ಆದಾಯ ಪಡೆಯಬಹುದು ಎಂದು ಎ.ಮಂಜು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!