ಉಚಿತ ಸಸಿ ವಿತರಣೆ ಯೋಜನೆಗೆ ಬ್ರೇಕ್‌?


Team Udayavani, Jan 27, 2019, 7:23 AM IST

sasi.jpg

ಬೆಂಗಳೂರು: ಪ್ರಸಕ್ತ ಸಾಲಿನಿಂದ ಸಾರ್ವಜನಿಕರಿಗೆ ಉಚಿತವಾಗಿ ಸಸಿಗಳನ್ನು ವಿತರಿಸದಿರಲು ಬಿಬಿಎಂಪಿ ಚಿಂತನೆ ನಡೆಸಿದ್ದು, ಸಾಧ್ಯವಾದಷ್ಟು ಪಾಲಿಕೆಯಿಂದಲೇ ಗಿಡಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿದೆ.

ಬೆಂಗಳೂರನ್ನು ಹಸಿರಾಗಿಸುವ ಉದ್ದೇಶದಿಂದ 2016-17ನೇ ಸಾಲಿನಲ್ಲಿ ಸಾರ್ವಜನಿಕರಿಗೆ 10 ಲಕ್ಷ ಸಸಿಗಳ ವಿತರಿಸುವ ಮಹತ್ತರ ಕಾರ್ಯಕ್ಕೆ ಪಾಲಿಕೆ ಮುಂದಾಗಿತ್ತು. ಅದಕ್ಕಾಗಿಯೇ ‘ಬಿಬಿಎಂಪಿ ಗ್ರೀನ್‌’ ಎಂಬ ವಿಶೇಷ ಆ್ಯಪ್‌ ಅಭಿವೃದ್ಧಿಪಡಿಸಲಾಗಿತ್ತು. ಜತೆಗೆ ಜನರು ಲಕ್ಷಾಂತರ ಗಿಡಗಳನ್ನು ಪಡೆದಿದ್ದರೂ, ಅವುಗಳನ್ನು ಎಲ್ಲಿ ನೆಟ್ಟಿದ್ದಾರೆಂಬ ಮಾಹಿತಿ ಈವರೆಗೆ ಲಭ್ಯವಾಗಿಲ್ಲ.

ಇದರೊಂದಿಗೆ ನಿರೀಕ್ಷಿತ ಮಟ್ಟದಲ್ಲಿ ಜನರಿಂದ ಸ್ಪಂದನೆ ವ್ಯಕ್ತವಾಗದ ಹಿನ್ನೆಲೆಯಲ್ಲಿ ಪಾಲಿಕೆಯಿಂದ ಕೋಟ್ಯಂತರ ರೂ. ವೆಚ್ಚದಲ್ಲಿ ಬೆಳೆಸಿದ 5 ಲಕ್ಷಕ್ಕೂ ಹೆಚ್ಚಿನ ಗಿಡಗಳನ್ನು ನರ್ಸರಿಗಳಲ್ಲಿಯೇ ಉಳಿಯುವಂತಾಗಿತ್ತು. ಕನಿಷ್ಠ ಪಾಲಿಕೆಯ ಅಧಿಕಾರಿಗಳು ಸಹ ಸಾರ್ವಜನಿಕರು ಗಿಡಗಳನ್ನು ಎಲ್ಲಿ ನೆಟ್ಟಿದ್ದಾರೆಂದು ಪರಿಶೀಲಿಸುವ ಗೋಜಿಗೆ ಹೋಗಲಿಲ್ಲ. ಆ ಹಿನ್ನೆಲೆಯಲ್ಲಿ ಪಾಲಿಕೆಯಿಂದ ವಿತರಣೆ ಮಾಡಿರುವಂತಹ 3.50 ಲಕ್ಷ ಸಸಿಗಳನ್ನು ಎಲ್ಲಿ ನಡೆಸಲಾಗಿದೆ. ಅವುಗಳನ್ನು ಪೋಷಿಸಲಾಗಿದೆಯೇ? ಅವುಗಳ ಸ್ಥಿತಿಗತಿಯ ಮಾಹಿತಿ ಪಾಲಿಕೆಯ ಬಳಿಯಿಲ್ಲ. ಆ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಿಂದ ಸಾರ್ವಜನಿಕರಿಂದ ಸಸಿಗಳನ್ನು ನೀಡದಿರಲು, ಒಂದೊಮ್ಮೆ ಸಾರ್ವಜನಿಕರು ಗಿಡಗಳಿಗೆ ಮನವಿ ಸಲ್ಲಿಸಿದರೆ ಸಂಪೂರ್ಣ ಮಾಹಿತಿ ಪಡೆದು ನೀಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ.

ಅದರಂತೆ ಪ್ರಸಕ್ತ ಸಾಲಿನಲ್ಲಿ ಪಾಲಿಕೆಯಿಂದ 2.50 ಲಕ್ಷ ಗಿಡಗಳನ್ನು ನೆಡಲು ಉದ್ದೇಶಿಸಲಾಗಿದ್ದು, ಈ ಬಾರಿ ಸಂಪೂರ್ಣವಾಗಿ ಪಾಲಿಕೆಯಿಂದಲೇ ಗಿಡಗಳನ್ನು ನೆಡಲು ಚಿಂತಿಸಲಾಗಿದೆ. ಅದರಂತೆ ಗಿಡಗಳನ್ನು ಬೆಳೆಸಿ, ನೆಟ್ಟು ಮೂರು ವರ್ಷ ಪೋಷಿಸಲು 50 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಿದ್ದು, ಈ ಕುರಿತಂತೆ ಈಗಾಗಲೇ ವಿಶೇಷ ಆಯುಕ್ತರಿಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ.

ದೊರೆಯದ ಸ್ಪಂದನೆ: ಕಳೆದ ವರ್ಷ ಮೇ 21ರಂದು ಚಿತ್ರನಟ ಯಶ್‌ ಅವರು ಬಿಬಿಎಂಪಿ ಗ್ರೀನ್‌ ಆ್ಯಪ್‌ಗೆ ಚಾಲನೆ ನೀಡುವ ಮೂಲಕ ಗಿಡ ನೆಡಲು ಸಾರ್ವಜನಿಕರು ಮುಂದಾಗಬೇಕೆಂದು ಜಾಗೃತಿ ಮೂಡಿಸಿದ್ದರು. ಆರಂಭದಲ್ಲಿ ಸಸಿಗಳಿಗಾಗಿ ನಾಗರಿಕರಿಂದ ಮನವಿಗಳು ಬಂದರೂ, ನಂತರದಲ್ಲಿ ತಾವು ಮನವಿ ಮಾಡಿದ ಗಿಡಗಳನ್ನು ಪಡೆಯಲು ಜನರು ಮುಂದಾಗಲಿಲ್ಲ. ಸುಮಾರು ಒಂದು ಕೋಟಿಗೂ ಅಧಿಕ ಜನಸಂಖ್ಯೆಯಿರುವ ಬೆಂಗಳೂರಿನಲ್ಲಿ ಸಸಿಗಳಿಗಾಗಿ ಪಾಲಿಕೆಯ ಆ್ಯಪ್‌ ಮೂಲಕ ಮನವಿ ಸಲ್ಲಿಸಿದವರ ಸಂಖ್ಯೆ 10 ಸಾವಿರ ಸಹ ಮೀರಲಿಲ್ಲ. ಆ ಹಿನ್ನೆಲೆಯಲ್ಲಿ ಪಾಲಿಕೆಯ ಅಧಿಕಾರಿಗಳು ಗ್ರೀನ್‌ ಆ್ಯಪ್‌ನ್ನು ಸ್ಥಗಿತಗೊಳಿಸಿದ್ದರು. ಆನಂತರದಲ್ಲಿ ಮೇಯರ್‌ ಮರುಚಾಲನೆ ನೀಡುವುದಾಗಿ ತಿಳಿಸಿದರೂ ಪ್ರಯೋಜನವಾಗಿಲ್ಲ.

ಅಂಕಿ-ಅಂಶಗಳ ಬಗ್ಗೆ ಅನುಮಾನ!?: 2016-17ನೇ ಸಾಲಿನಲ್ಲಿ ಸಸಿಗಳಿಗಾಗಿ ಪಾಲಿಕೆಗೆ 9,670 ಜನರು ಮಾತ್ರ ಮನವಿ ಸಲ್ಲಿಸಿ ಒಟ್ಟು 2,68,873 ಸಸಿಗಳನ್ನು ಪಡೆದಿದ್ದರು. ಇನ್ನು ಬಿಬಿಎಂಪಿ ಪಾಲಿಕೆ ಸದಸ್ಯರು 90 ಸಾವಿರ ಸಸಿಗಳನ್ನು ಪಡೆದಿದ್ದು, ಪಾಲಿಕೆಯಿಂದ ನಗರದ ವಿವಿಧೆಡೆ 1 ಲಕ್ಷ ಗಿಡಗಳನ್ನು ನೆಡಲಾಗಿದೆ. ಅದರಂತೆ ಒಟ್ಟು 4.58 ಲಕ್ಷ ಸಸಿಗಳನ್ನು ವಿತರಿಸಿ, 5.42 ಲಕ್ಷ ಸಸಿಗಳು ಪಾಲಿಕೆಯ ನರ್ಸರಿಗಳಲ್ಲಿಯೇ ಇರಿಸಲಾಗಿದೆ ಎಂದು ಮಾಹಿತಿ ನೀಡಲಾಗಿತ್ತು. ಆದರೆ, ಸದ್ಯದ ಮಾಹಿತಿಯಂತೆ ನರ್ಸರಿಗಳಲ್ಲಿ 3 ಲಕ್ಷ ಸಸಿಗಳಿರುವುದು ತಿಳಿದುಬಂದಿದ್ದು, ಉಳಿದ 2.52 ಲಕ್ಷ ಸಸಿಗಳ ಮಾಹಿತಿಯ ಬಗ್ಗೆ ಅಧಿಕಾರಿಗಳಲ್ಲಿ ಗೊಂದಲಗಳಿವೆ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

Bangalore: ರಾಜಧಾನಿ 14 ಕೆರೆಗಳಿಗೆ ಕೆ.ಸಿ.ವ್ಯಾಲಿ ನೀರು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.