ದೃಷ್ಟಿ ವಿಕಲಚೇತನರಿಗೆ ಉಚಿತ ಟಾಕಿಂಗ್‌ ಲ್ಯಾಪ್‌ಟಾಪ್‌ ವಿತರಣೆ


Team Udayavani, Jan 5, 2018, 6:45 AM IST

Talking-Laptop.jpg

ಬೆಂಗಳೂರು: ವಿಶ್ವ ಬ್ರೈಲ್‌ ದಿನಾಚರಣೆ ಅಂಗವಾಗಿ ಬಾಲಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ನಂತರದ ಶಿಕ್ಷಣ ಮುಂದುವರಿಸಿರುವ ದೃಷ್ಟಿ ವಿಕಲಚೇತನರಿಗೆ ರಾಜ್ಯ ಸರ್ಕಾರದ ವತಿಯಿಂದ “ಟಾಕಿಂಗ್‌ ಲ್ಯಾಪ್‌ಟಾಪ್‌’ ವಿತರಿಸುವ ಮೂಲಕ ಲ್ಯಾಪ್‌ಟಾಪ್‌ ವಿತರಣೆ ಕಾರ್ಯಕ್ಕೆ ಚಾಲನೆ ದೊರೆಯಿತು.

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ನಾನಾ ಸ್ವಯಂ ಸೇವಾಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬ್ರೈಲ್‌ ದಿನಾಚರಣೆ ಸಮಾರಂಭದಲ್ಲಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್‌ ಸಾಂಕೇತಿಕವಾಗಿ 50 ಮಂದಿ ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳಿಗೆ ಟಾಕಿಂಗ್‌ ಲ್ಯಾಪ್‌ಟಾಪ್‌ ವಿತರಿಸಿದರು.

ಸಮಾರಂಭದಲ್ಲಿ ಮಾತನಾಡಿದ ಇಲಾಖೆ ನಿರ್ದೇಶಕ ಡಾ.ಸಿದ್ದರಾಜು, ವಿಕಲಚೇತನರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಅನುಕೂಲವಾಗುವಂತೆ ಸರ್ಕಾರ ಸಾಕಷ್ಟು ಸೌಲಭ್ಯ ಕಲ್ಪಿಸುತ್ತಿದೆ. ಮಾಸಾಶನ, ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನದ ಜತೆಗೆ ಎಸ್‌ಎಸ್‌ಎಲ್‌ಸಿ ನಂತರದ ಶಿಕ್ಷಣ ಮುಂದುವರಿಸಿರುವ ವಿದ್ಯಾರ್ಥಿಗಳಿಗೆ ಟಾಕಿಂಗ್‌ ಲ್ಯಾಪ್‌ಟಾಪ್‌ ನೀಡಿ ಸುಧಾರಿತ ತಂತ್ರಜ್ಞಾನ ಬಳಕೆಗೆ ಅವಕಾಶ ಕಲ್ಪಿಸುತ್ತಿದೆ. ದೃಷ್ಟಿ ವಿಕಲಚೇತನ ತಾಯಂದಿರ ಬಾಣಂತನಕ್ಕೆ ಅನುಕೂಲವಾಗಲೆಂದು ಹೆರಿಗೆ ಬಳಿಕ ಎರಡು ವರ್ಷದವರೆಗೆ ಸಹಾಯಕರ ಸೇವೆ ಬಳಸಿಕೊಳ್ಳಲು ಶಿಶುಪಾಲನಾ ಭತ್ಯೆಯನ್ನೂ ನೀಡಲಾಗುತ್ತಿದೆ ಎಂದು ಹೇಳಿದರು.

ದೃಷ್ಟಿ ವಿಕಲಚೇತನರು ತಮ್ಮಲ್ಲಿ ನ್ಯೂನತೆ ಇದೆ ಎಂದು ಮಾನಸಿಕವಾಗಿ ಕುಗ್ಗಬಾರದು. ಭೌತಿಕ ದೃಷ್ಟಿಯಿಲ್ಲದಿದ್ದರೂ ಅಂತ:ದೃಷ್ಟಿಯಿಂದಲೇ ಆತ್ಮವಿಶ್ವಾಸದಿಂದ ಜೀವನ ನಡೆಸುವುದನ್ನು ರೂಢಿಸಿಕೊಳ್ಳಬೇಕು. ಸರ್ಕಾರವು ವಿಕಲಚೇತನರನ್ನೂ ರಾಷ್ಟ್ರದ ಸಂಪತ್ತು ಎಂದು ಪರಿಗಣಿಸಿದ್ದು, ಅಗತ್ಯ ಸೌಲಭ್ಯ ಕಲ್ಪಿಸುತ್ತಿದೆ. ಸೌಲಭ್ಯ ಬಳಸಿಕೊಂಡು ಮುಂದೆ ಕೊಡುಗೆ ನೀಡುವಷ್ಟರ ಮಟ್ಟಿಗೆ ಸಬಲರಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ದೃಷ್ಟಿ ವಿಕಲಚೇತನರು ನಡೆಸಿಕೊಟ್ಟ ಗೀತ ಗಾಯನಕ್ಕೆ ಸಭಿಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಧಾರವಾಡದ ಮನಗುಂದಿಯ ಗುರುಬಸವ ಮಹಾಮನೆಯ ಬಸವಾನಂದ ಸ್ವಾಮಿ, ಮಾತೃಛಾಯ ಸಂಸ್ಥೆಯ ರಾಜ್ಯಶ್ರೀ ಸತೀಶ್‌, ಪರಶಿವಮೂರ್ತಿ, ಅಮರನಾಥ್‌ ಇತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ 1000ಕ್ಕೂ ಹೆಚ್ಚು ದೃಷ್ಟಿ ವಿಕಲಚೇತನರು ಎಸ್‌ಎಸ್‌ಎಲ್‌ಸಿ ನಂತರದ ಪದವಿಪೂರ್ವ, ಪದವಿ ಇತರೆ ಶಿಕ್ಷಣ ಪಡೆಯುತ್ತಿದ್ದು, ಈ ವಿದ್ಯಾರ್ಥಿಗಳಿಗೆ ಇಲಾಖೆಯಿಂದ 2016-17ನೇ ಸಾಲಿಗೆ ಸಂಬಂಧಪಟ್ಟಂತೆ ಉಚಿತವಾಗಿ ಟಾಕಿಂಗ್‌ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ. ಟಾಕಿಂಗ್‌ ಲ್ಯಾಪ್‌ಟಾಪ್‌ ವಿತರಣೆಗೆ ಇಲಾಖೆಯು ಬೆಂಗಳೂರಿನಲ್ಲಿ ಚಾಲನೆ ನೀಡಿದ್ದು, ಮುಂದೆ ಜಿಲ್ಲಾ ಮಟ್ಟದಲ್ಲೂ ವಿತರಿಸಲಿದೆ. ಸುಮಾರು 45,000 ರೂ. ಮೌಲ್ಯದ ಟಾಕಿಂಗ್‌ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್‌ಗೆ ಕಳುಹಿಸಿ: B.Y. ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

8

ಅಮಿತಾಭ್‌ ಟು ಶಾರುಖ್:‌ ಇಂದು ಕೋಟಿ ಕುಳರಾದ ಈ ನಟರ ಮೊದಲ ಸಂಪಾದನೆ ಎಷ್ಟಾಗಿತ್ತು ಗೊತ್ತಾ?

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.