ಜಯದೇವದಿಂದ 200 ಬಡರೋಗಿಗಳಿಗೆ ಉಚಿತ ಚಿಕಿತ್ಸೆ


Team Udayavani, Oct 19, 2018, 1:13 PM IST

jayadeva.png

ಬೆಂಗಳೂರು: ನಗರದ ಖ್ಯಾತ ಜಯದೇವ ಹೃದ್ರೋಗ ವಿಜಾnನ ಮತ್ತು ಸಂಶೋಧನಾ ಸಂಸ್ಥೆ (ಎಸ್‌ಜೆಐಸಿಆರ್‌) ಆಯೋಜಿಸಿದ್ದ ಆಂಜಿಯೋಪ್ಲಾಸ್ಟಿ ಕಾರ್ಯಾಗಾರದಲ್ಲಿ ಸುಮಾರು 200 ಬಡರೋಗಿಗಳಿಗೆ ಯಶಸ್ವಿಯಾಗಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನಡೆಸಿ ಉಚಿತವಾಗಿ ಸ್ಟಂಟ್‌ ಅಳವಡಿಸಲಾಗಿದೆ.

ಸೋಮವಾರ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್‌. ಮಂಜುನಾಥ್‌ ಮಾತನಾಡಿ, 200 ಆಂಜಿಯೋಪ್ಲಾಸ್ಟಿ ಚಿಕಿತ್ಸೆಗಳನ್ನು ಕೇವಲ 4 ದಿವಸಗಳಲ್ಲಿ ಮಾಡುವುದು ಒಂದು ಬೃಹತ್‌ ಸಾಧನೆ. ಈ ಅಸಾಧಾರಣ ಕಾರ್ಯಾಗಾರವನ್ನು ಯಶಸ್ವಿಯಾಗಿ ನಿರ್ವಹಿಸುವಲ್ಲಿ ನಮ್ಮಲ್ಲಿರುವ ಏಳು ಕ್ಯಾತ್‌ಲ್ಯಾಬ್‌ಗಳು, 75 ನುರಿತ ವೈದ್ಯರು, ತಂತ್ರಜ್ಞರು, ಶುಶ್ರೂಷಕರು ಹಾಗೂ ನೌಕರರರು ಕಾರಣ.

ಅವರ ಕುಶಲತೆ, ಕಾರ್ಯದಕ್ಷತೆ ಮತ್ತು ಸಮರ್ಪಣಾ ಭಾವದ ಸೇವೆಯ ಜತೆ ಗುಣಮಟ್ಟದ ಮೂಲಭೂತ ಸೌಕರ್ಯಗಳ ಪೂರೈಕೆಯಿಂದ ಇದು ಸಾಧ್ಯವಾಗಿದೆ. ಚಿಕಿತ್ಸೆ ಪಡೆದವರೆಲ್ಲರೂ ಬಡರೈತರು, ದಿನಗೂಲಿ ನೌಕರರು, ಆಟೋರಿûಾ ಚಾಲಕರು, ಬೀದಿಬದಿ ಕಾರ್ಮಿಕರು ಹಾಗೂ ನಿಸ್ಸಹಾಯಕ ಹಿರಿಯ ನಾಗರಿಕರರಾಗಿದ್ದಾರೆ. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳ, ಆಂಧ್ರ ಮತ್ತು ತೆಲಂಗಾಣದ ಹೃದ್ರೋಗಿಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದರು.

ಡಾ. ಗೋವಿಂದರಾಜು ಸುಬ್ರಮಣಿ ಹಾರ್ಟ್‌ ಫೌಂಡೇಷನ್‌, ಇಲಿನಾಯಿಸ್‌, ಅಮೆರಿಕ ಮತ್ತು ಮೆಡಾóನಿಕ್‌ ವ್ಯಾಸ್ಕಾಲರ್‌ ಡಿವಿಷನ್‌ ಕಾರ್ಯಾಗಾರಕ್ಕೆ ಸ್ಟಂಟ್‌ಗಳನ್ನು ಉದಾರವಾಗಿ ನೀಡಿರುವುದು ಶ್ಲಾಘನೀಯ. ಡಾ. ಜಿ. ಸುಬ್ರಮಣಿರವರ ದೇಶಾಭಿಮಾನ, ಸಾಮಾಜಿಕ ಕಳಕಳಿ, ಉದಾರ ಕೊಡುಗೆ ಹಾಗೂ ಕಳೆದ ಒಂಬತ್ತು ವರ್ಷಗಳಿಂದ ಬಡರೋಗಿಗಳ ಚಿಕಿತ್ಸೆಯಲ್ಲಿ ಭಾಗವಹಿಸುತ್ತಿರುವುದು,

ಇತರೆ ಅನಿವಾಸಿ ಭಾರತೀಯ ವೈದ್ಯರುಗಳಿಗೆ ಮಾದರಿಯಾಗಿದೆ. ಮೆಡಾóನಿಕ್‌ ಕಂಪನಿ ಸತತವಾಗಿ 11 ವರ್ಷಗಳಿಂದ ಸಹಾಯಹಸ್ತವನ್ನು ಮುಂದುವರಿಸಿರುವುದು ಹಾಗೂ ನಮ್ಮ ಜನರಿಗೆ ಸಹಾಯ ಮಾಡುವ ಅವಕಾಶ ನನಗೆ ದೊರೆತದ್ದು ನನ್ನ ಅದೃಷ್ಟ ಎಂದು ಡಾ. ಮಂಜುನಾಥ್‌ ತಿಳಿಸಿದರು.

ಶೇ. 35 ರಷ್ಟು ಮಹಿಳಾ ರೋಗಿಗಳು: ಕಾರ್ಯಾಗಾರದಲ್ಲಿ ಶೇ. 25 ರೋಗಿಗಳು 50ವರ್ಷಕ್ಕೂ ಕಡಿಮೆ ವಯಸ್ಕರಾಗಿದ್ದು, 28 ವರ್ಷದ ಕಿರಿಯ ಹಾಗೂ 81 ವರ್ಷದ ಹಿರಿಯ ನಾಗರಿಕರಿಗೆ ಚಿಕಿತ್ಸೆ ಮಾಡಲಾಯಿತು. ಹೆಚ್ಚಿನ ರೋಗಿಗಳಲ್ಲಿ ಧೂಮಪಾನ, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಮಿತಿಮೀರಿದ ಕೊಬ್ಬಿನಾಂಶ ಕಂಡುಬಂದಿದೆ. ಚಿಕಿತ್ಸೆ ಪಡೆದ 200 ರೋಗಿಗಳಲ್ಲಿ ಶೇ. 35 ರಷ್ಟು ಮಹಿಳಾ ರೋಗಿಗಳಾಗಿದ್ದು ವಿಶೇಷ.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.