ರುದ್ರಭೂಮಿಗೆ ಸೌಕರ್ಯ ಕಲ್ಪಿಸಿದ ಮಿತ್ರ ಮಂಡಲ


Team Udayavani, Aug 11, 2018, 11:30 AM IST

rudrabhoomi.jpg

ಬೆಂಗಳೂರು: ಬದುಕಿನ ಅಂತಿಮ ಯಾತ್ರೆ ಮುಗಿಸಿದ ಮಾನವನ ದೇಹ ಪ್ರಕೃತಿ ಸೇರುವುದು ಸ್ಮಶಾನದಲ್ಲಿ. ಇಲ್ಲಿ ಮೃತದೇಹ ಸುಡುವುದು ಅಥವಾ ಮಣ್ಣು ಮಾಡುವುದು ಮಾತ್ರವಲ್ಲದೆ, ವರ್ಷಕ್ಕೊಮ್ಮೆ ಬಂದು ಧಾರ್ಮಿಕ ವಿಧಿ-ವಿಧಾನಗಳನ್ನೂ ನಡೆಸುತ್ತಾರೆ. ಆದರೆ, ಅಂತಹ ಜಾಗದಲ್ಲಿ ಸ್ವತ್ಛತೆ ಇಲ್ಲದಿದ್ದರೆ?

ಹೌದು, ಸ್ಮಶಾನಗಳಲ್ಲೂ ಸ್ವತ್ಛತೆ ಕಾಪಾಡಬೇಕು. ಮೂಲ ಸೌಕರ್ಯ ಒದಗಿಸಬೇಕು ಎಂದು ರಾಜಸ್ಥಾನ ಮೂಲದವರು ಮುಂದೆ ಬಂದಿದ್ದಾರೆ. ವಿಶೇಷವೆಂದರೆ ಅವರು ಈ ಕೆಲಸ ಮಾಡುತ್ತಿರುವುದು ಚಾಮರಾಜಪೇಟೆ ಟಿ.ಆರ್‌.ಮಿಲ್‌ನ ಹಿಂದೂ ರುದ್ರಭೂಮಿಯಲ್ಲಿ. ಬೆಂಗಳೂರಿನ ವಿಜಯನಗರದ ರಾಜಸ್ಥಾನಿ ಮಿತ್ರ ಮಂಡಲದವರು ಈ ಕಾರ್ಯ ಕೈಗೊಂಡಿದ್ದಾರೆ.

ಸುಮಾರು 8ರಿಂದ 10 ಲಕ್ಷ ರೂ. ವೆಚ್ಚದಲ್ಲಿ ಸ್ಮಶಾನದಲ್ಲಿ ನಾಲ್ಕು ಶೌಚಾಲಯ ನಿರ್ಮಿಸಿದ್ದಾರೆ. ಜತೆಗೆ 100 ಮಂದಿ ಕುಳಿತುಕೊಳ್ಳುವ ವ್ಯವಸ್ಥೆಯನ್ನೂ ಮಾಡಿದ್ದಾರೆ. ಕುಳಿತುಕೊಳ್ಳಲು ಕಲ್ಲು ಬೆಂಚು ಮಾತ್ರವಲ್ಲದೆ ಅದಕ್ಕೆ ಚಾವಣಿ ಹಾಗೂ ಟೈಲ್ಸ್‌ಗಳನ್ನು ಹಾಕಿ ಉತ್ತಮ ರೀತಿಯಲ್ಲಿ ವ್ಯವಸ್ಥೆ ಮಾಡಿದ್ದಾರೆ.

ಸಮಸ್ಯೆ ಅರಿತು ಸ್ಪಂದಿಸಿದರು: ಟಿ.ಆರ್‌.ಮಿಲ್‌ನಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಹಲವು ವರ್ಷಗಳಿಂದ ಶೌಚಾಲಯ ಹಾಗೂ ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಇರಲಿಲ್ಲ. ಮೂರ್ನಾಲ್ಕು ತಿಂಗಳ ಹಿಂದೆ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ನಿಧನರಾಗಿದ್ದು, ಅವರ ಅಂತ್ಯ ಸಂಸ್ಕಾರ ಟಿ.ಆರ್‌.ಮಿಲ್‌ನ ರುದ್ರಭೂಮಿಯಲ್ಲಿ ನಡೆದಿತ್ತು. ಆ ವೇಳೆ ಅಲ್ಲಿಗೆ ಬಂದಿದ್ದ ವಿಜಯನಗರ ರಾಜಸ್ಥಾನಿ ಮಿತ್ರ ಮಂಡಲ್‌ ಸದಸ್ಯರಿಗೆ ಅಂತ್ಯ ಸಂಸ್ಕಾರಕ್ಕೆ ಬಂದವರು ಸರಿಯಾದ ವ್ಯವಸ್ಥೆ ಇಲ್ಲದೆ ತೊಂದರೆ ಅನುಭವಿಸುತ್ತಿರುವುದು ಗೊತ್ತಾಯಿತು.

ಈ ಸಮಸ್ಯೆಗಳನ್ನು ಸ್ಥಳೀಯ ಆಡಳಿತ ಸಂಸ್ಥೆಗಳ ಗಮನಕ್ಕೆ ಅಥವಾ ಶಾಸಕರ ಗಮನಕ್ಕೆ ತಂದರೆ ಭರವಸೆ ಸಿಗಬಹುದೇ ಹೊರತು ಪ್ರಯೋಜನ ಆಗುವುದಿಲ್ಲ ಎಂದರಿತ ಮಿತ್ರ ಮಂಡಲ್‌ ಪದಾಧಿಕಾರಿಗಳು, ಮಂಡಲ್‌ ವತಿಯಿಂದಲೇ ಸ್ಮಶಾನದಲ್ಲಿ ಶೌಚಾಲಯ ಮತ್ತು ಕುಳಿತುಕೊಳ್ಳುವ ವ್ಯವಸ್ಥೆ ಮಾಡಲು ತೀರ್ಮಾನಿಸಿದರು.

ಅದರಂತೆ ಚಾಮರಾಜಪೇಟೆ ವಾರ್ಡ್‌ನ ಪಾಲಿಕೆ ಸದಸ್ಯೆ ಕೊಕಿಲಾ ಚಂದ್ರಶೇಖರ್‌ ಅವರನ್ನು ಭೇಟಿಯಾಗಿ ತಮ್ಮ ಯೋಜನೆ ಬಗ್ಗೆ ವಿವರಿಸಿದರು. ಇದಕ್ಕೆ ಸದಸ್ಯೆ ಸಮ್ಮತಿಸಿದ ಕೂಡಲೇ ಕಾರ್ಯಪ್ರವೃತ್ತರಾದ ಪದಾಧಿಕಾರಿಗಳು, ಕೆಲವೇ ತಿಂಗಳಲ್ಲಿ ನಾಲ್ಕು ಶೌಚಾಲಯ ಹಾಗೂ 100 ಜನ ಕುಳಿತುಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ. ಇದು ಸ್ಮಶಾನದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಮಾತ್ರವಲ್ಲದೆ ಅಲ್ಲಿ ಬರುವವರ ಮೆಚ್ಚುಗೆಗೆ ಪಾತ್ರವಾಗಿದೆ.

ವಿಜಯನಗರದ ರಾಜಸ್ಥಾನಿ ಮಿತ್ರ ಮಂಡಳಿ ಟಿ.ಆರ್‌.ಮಿಲ್‌ ಸ್ಮಶಾನದಲ್ಲಿ ಕಲ್ಪಿಸಿರುವ ಸೌಲಭ್ಯಗಳಿಗೆ ಪಾಲಿಕೆ ಸದಸ್ಯೆ ಕೊಕಿಲಾ ಚಂದ್ರಶೇಖರ್‌ ಶುಕ್ರವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಅನ್ಯ ರಾಜ್ಯದವರು ಇಲ್ಲಿಗೆ ಬಂದು ನೆಲೆಸಿ ನಮ್ಮ ನಾಡಿಗೆ ಮೂಲ ಸೌಕರ್ಯ ಕಲ್ಪಿಸುತ್ತಿರುವುದು ಸಂತಸದ ವಿಚಾರ ಎಂದರು. ರಾಜಸ್ಥಾನಿ ಮಿತ್ರ ಮಂಡಳಿ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.

ಮುಂದಿನ ಯೋಜನೆ?: ಇಷ್ಟಕ್ಕೇ ಮಿತ್ರ ಮಂಡಲದವರು ಸುಮ್ಮನಾಗಿಲ್ಲ. ರಾಜಸ್ಥಾನಿ ಮಿತ್ರ ಮಂಡಲ್‌ 25ನೇ ವರ್ಷಕ್ಕೆ ಕಾಲಿಡುತ್ತಿದ್ದು, ಬೆಳ್ಳಿ ಹಬ್ಬ ಆಚರಣೆ ಅಂಗವಾಗಿ ಮುಂದೆ ಮರಿಯಪ್ಪನ ಪಾಳ್ಯದಲ್ಲಿರುವ ಸ್ಮಶಾನದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸುವ ಯೋಜನೆ ಹಾಕಿಕೊಳ್ಳಲಾಗಿದೆ.

ಇತರೆ ಸ್ಮಶಾನಗಳಲ್ಲೂ ಮೂಲ ಸೌಕರ್ಯ ಕಲ್ಪಿಸುವ ಚಿಂತನೆ ಇದೆ ಎನ್ನುತ್ತಾರೆ ಮಂಡಲ್‌ ಉಪಾಧ್ಯಕ್ಷ ನೇಮಿಚಂದ್‌ ದಲಾಲ್‌. ಈಗಾಗಲೇ ವಿಜಯನಗರದ ಸುತ್ತಮುತ್ತ ಇರುವ ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಅದನ್ನು ಮುಂದುವರಿಸಲಾಗುವುದು. ಜತೆಗೆ ಬೆಳ್ಳಿ ಹಬ್ಬದ ಅಂಗವಾಗಿ ಒಂದು ವರ್ಷ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.

* ಶ್ರುತಿ ಮಲೆನಾಡತಿ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.