- Monday 16 Dec 2019
ಹೋಟೆಲ್ ಸಿಬ್ಬಂದಿಯಿಂದ ಮಹಿಳೆ ಮೇಲೆ ಅತ್ಯಾಚಾರ
Team Udayavani, Aug 14, 2018, 4:05 PM IST
ಬೆಂಗಳೂರು: ನಗರದ ಪ್ರತಿಷ್ಠಿತ ಹೋಟೆಲ್ನಲ್ಲಿ ತಂಗಿದ್ದ ಮಹಿಳೆ ಮೇಲೆ ಅಲ್ಲಿನ ಸಿಬ್ಬಂದಿಯೇ ಅತ್ಯಾಚಾರ
ಎಸಗಿರುವ ಘಟನೆ ಅಶೋಕನಗರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಈ ಸಂಬಂಧ ಬಿಹಾರ ಮೂಲದ ಮನೀಷ್ ಕುಮಾರ್ ಸಿಂಗ್(26)ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ
ಮನೀಷ್ ಅಶೋಕ್ನಗರದ ರಿಚ್ ಮಂಡ್ ಸರ್ಕಲ್ ಬಳಿ ಇರುವ ತಾರಾ ಹೋಟೆಲ್ನಲ್ಲಿ ಡ್ನೂಟಿ ಮ್ಯಾನೇಜರ್
ಆಗಿ ಕೆಲಸ ಮಾಡುತ್ತಿದ್ದ. ಭಾನುವಾರ ರಾತ್ರಿ 8.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಹೋಟೆಲ್ ತನ್ನ
ಕೊಠಡಿಗೆ ಮಲಗಲು ಹೋಗುವಾಗ, ಇದೇ ವೇಳೆ ಹೋಟೆಲ್ನಲ್ಲಿ ತಂಗಿದ್ದ ಮಧ್ಯ ಪ್ರದೇಶದ ಸಂತ್ರಸ್ತೆ ಎದುರಿಗೆ
ಬಂದಿದ್ದಾರೆ.
ಇಬ್ಬರು ಲಿಫ್ಟ್ನಲ್ಲಿ ಒಟ್ಟಿಗೆ ಹೋಗಿದ್ದು, ಈ ವೇಳೆ ಆರೋಪಿ ಹಿಂದಿಯಲ್ಲಿ ಮಾತನಾಡಿ ಆಕೆಯನ್ನು ಪರಿಚಯಿಸಿಕೊಂಡಿದ್ದಾನೆ. ಬಳಿಕ ನಿಮಗೆ ಏನಾದರು ಬೇಕಿದ್ದರೆ ನನಗೆ ಕಾಲ್ ಮಾಡಿ ಎಂದು ಸಂತ್ರಸ್ತೆಗೆ ತನ್ನ ಮೊಬೈಲ್ ನಂಬರ್ ಕೊಟ್ಟಿದ್ದ. ನಂತರ ರಾತ್ರಿ 10ಗಂಟೆ ಸುಮಾರಿಗೆ ಸಂತ್ರಸ್ತೆಗೆ ಕರೆ ಮಾಡಿದ ಆರೋಪಿ, ಮಾತನಾಡುವುದಿದೆ ತನ್ನ ಕೊಠಡಿಗೆ ಬನ್ನಿ ಎಂದಿದ್ದ.
ಪರಿಚಯವಿದ್ದ ಹಿನ್ನೆಲೆಯಲ್ಲಿ ಸಂತ್ರಸ್ತೆ ಆರೋಪಿ ಕೊಠಡಿಗೆ ಹೋಗಿದ್ದಾರೆ. ಈ ವೇಳೆ ಆರೋಪಿ ಆಕೆ ಮೇಲೆ ಅತ್ಯಾಚಾರ
ಎಸಗಿದ್ದಾನೆ. ನೊಂದ ಮಹಿಳೆ ಪೊಲೀಸ್ ಸಹಾಯವಾಣಿ ನಮ್ಮ-100ಕ್ಕೆ ಕರೆ ಮಾಡಿ ದೂರು ನೀಡಿದ್ದಾರೆ. ಅನಂತರ ಸ್ಥಳಕ್ಕೆ ತೆರಳಿದ ಅಶೋಕ್ನಗರ ಪೊಲೀಸರು ಸಂತ್ರಸ್ತೆ ಮೂಲಕ ಲಿಖೀತ ದೂರು ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಹೈದರಾಬಾದ್ ಮತ್ತು ಉತ್ತರ ಪ್ರದೇಶದ ಉನ್ನಾವ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳು ದೇಶವನ್ನು ತಲ್ಲಣಗೊಳಿಸಿವೆ. ಮಹಾನಗರಗಳಲ್ಲಿ...
-
ಬೆಂಗಳೂರು: ನಗರದ ತ್ಯಾಜ್ಯ ಸಂಗ್ರಹದಲ್ಲಿ "ಪರಿಸರ ಸ್ನೇಹಿ' ವಾಹನಗಳನ್ನು ಪರಿಚಯಿಸಲು ಮುಂದಾಗಿರುವ ಬಿಬಿಎಂಪಿ, ಈ ನಿಟ್ಟಿನಲ್ಲಿ ಸಿಎನ್ಜಿ ಆಧಾರಿತ ವಾಹನಗಳನ್ನು...
-
ಬೆಂಗಳೂರು: ಕಬ್ಬನ್ ಉದ್ಯಾನವನದಲ್ಲಿ ರಾತ್ರಿ ಹಾಗೂ ಹಗಲು ವೇಳೆ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅಂತಹ ಚಟುವಟಿಕೆಗಳ ನಿಯಂತ್ರಣಕ್ಕೆ...
-
ಬೆಂಗಳೂರು: ನಗರದ ಪ್ರಮುಖ ಸಂಚಾರ ದಟ್ಟಣೆ ಇರುವ ಮಾರ್ಗ "ಸಿರ್ಸಿ ಫ್ಲೈಓವರ್' (ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆ)ನಲ್ಲಿ ವಾಹನ ಸಂಚಾರ ಸೋಮವಾರದಿಂದ ಸುಮಾರು...
-
ಬೆಂಗಳೂರು: "ನಮ್ಮ ಮೆಟ್ರೋ' ಸೇವಾವಧಿ ಮಧ್ಯರಾತ್ರಿವರೆಗೆ ವಿಸ್ತರಣೆ ಮಾಡಲಾಗುತ್ತಿದೆ. ಇದರ ಬೆನ್ನಲ್ಲೇ ಮಾರ್ಗಗಳ ವಿಸ್ತರಣೆ ಹಾಗೂ ಅದಕ್ಕೆ ತಕ್ಕಂತೆ ರೈಲುಗಳ...
ಹೊಸ ಸೇರ್ಪಡೆ
-
ನಾಗರಾಜ ತೇಲ್ಕರ್ ದೇವದುರ್ಗ: ಪಟ್ಟಣದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಸ್ತರಣಾ ಕೇಂದ್ರದ ಕಟ್ಟಡಕ್ಕಾಗಿ 20 ಎಕರೆ ಭೂಮಿ ಕಾಯ್ದಿರಿಸಿದ್ದರೂ, ಕಟ್ಟಡಕ್ಕೆ...
-
ಹೈದರಾಬಾದ್ ಮತ್ತು ಉತ್ತರ ಪ್ರದೇಶದ ಉನ್ನಾವ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಗಳು ದೇಶವನ್ನು ತಲ್ಲಣಗೊಳಿಸಿವೆ. ಮಹಾನಗರಗಳಲ್ಲಿ...
-
ಬಾಗಲಕೋಟೆ: ದೇಶದ ಅತ್ಯುನ್ನತ ಭದ್ರತಾ ಪಡೆ, ಗಣ್ಯಾತಿಗಣ್ಯರಿಗೆ ಭದ್ರತೆ ಒದಗಿಸುವ ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್ಗೆ (ರಾಷ್ಟ್ರೀಯ ಭದ್ರತಾ ಪಡೆ) ಮುಧೋಳ ನಾಯಿ...
-
ಶಿವಯ್ಯ ಮಠಪತಿ ಚಡಚಣ: ಕರ್ನಾಟಕ-ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಕಟ್ಟಕಡೆಯ ಶಿರನಾಳ ಗ್ರಾಮದ ಬಡ ಜನರು ಸ್ವಂತ ಜಾಗವಿಲ್ಲದೇ ಸರಕಾರಿ ಗೋಮಾಳಿನ ಕತ್ತಲಿನಲ್ಲೇ...
-
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಜಾಮೀಯಾ ಮಿಲ್ಲಿಯಾ ಇಸ್ಲಾಮಿಯಾ ಯೂನಿರ್ವಸಿಟಿ ವಿದ್ಯಾರ್ಥಿಗಳು ಮತ್ತು ಪೊಲೀಸರ...