ಇಂದಿನಿಂದ ರಾಜಕಾಲುವೆ ಒತ್ತುವರಿ ತೆರವು
Team Udayavani, Oct 29, 2018, 12:06 PM IST
ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಲು ಸಿದ್ಧತೆ ನಡೆಸಿರುವ ಬಿಬಿಎಂಪಿ, ಸೋಮವಾರದಿಂದ (ಅ.29) ಹಂತ ಹಂತವಾಗಿ ಕಾರ್ಯಾಚರಣೆ ನಡೆಸಲು ಸಜ್ಜಾಗಿದೆ.
ಸುಮಾರು ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಪುನಾರಾಂಭಿಸಲು ಪಾಲಿಕೆ ವ್ಯವಸ್ಥೆ ಮಾಡಿಕೊಂಡಿದೆ. ಅದರಂತೆ ಸೋಮವಾರದಿಂದ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಪಾಲಿಕೆ ಅಧಿಕಾರಿಗಳು ಕಾಲುವೆ ಒತ್ತುವರಿ ಸ್ಥಳಕ್ಕೆ ಭೇಟಿ ನೀಡಲಿದ್ದು, ಸ್ಥಳದಲ್ಲಿಯೇ ಒತ್ತುವರಿ ಭಾಗವನ್ನು ಗುರುತಿಸಿ ತೆರವು ಕಾರ್ಯವನ್ನು ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.
ಇತ್ತೀಚೆಗೆ ಸರ್ವೆ ನಡೆಸಿದ ಕಂದಾಯ ಇಲಾಖೆಯ ಭೂಮಾಪನ ಅಧಿಕಾರಿಗಳು 450 ಪ್ರಕರಣಗಳಲ್ಲಿ ರಾಜಕಾಲುವೆ ಒತ್ತುವರಿಯಾಗಿರುವ ಬಗ್ಗೆ ಪಾಲಿಕೆ ವರದಿ ನೀಡಿತ್ತು. ಅದರಂತೆ ತೆರವು ಕಾರ್ಯಾಚರಣೆ ನಡೆಸಲು ಅಧಿಕಾರಿಗಳು ಮುಂದಾಗಿದ್ದು, ಮೊದಲ ಹಂತದಲ್ಲಿ ಒತ್ತುವರಿಯಾಗಿರುವ ಭಾಗದಲ್ಲಿನ ಖಾಲಿ ನಿವೇಶನ, ಕಾಂಪೌಂಡ್ ತೆರವು ಹಾಗೂ ಕಾಲುವೆ ಮುಚ್ಚಿರುವ ಭಾಗಗಳಲ್ಲಿ ಕಾರ್ಯಾಚರಣೆ ಆರಂಭಿಸಲು ತೀರ್ಮಾನಿಸಿದ್ದಾರೆ.
ವಾರಕ್ಕೆ 50 ಪ್ರಕರಣಗಳಲ್ಲಿ ತೆರವು: ನಗರದಲ್ಲಿ ಒಟ್ಟು 450 ಪ್ರಕರಣಗಳಲ್ಲಿ ಒತ್ತುವರಿಯಾಗಿದ್ದು, ವಾರಕ್ಕೆ 50 ಪ್ರಕರಣಗಳಲ್ಲಿ ತೆರವು ಕಾರ್ಯಾಚರಣೆ ನಡೆಸಲು ರೂಪುರೇಷೆ ಸಿದ್ಧಪಡಿಸಿದೆ. ಅದರಂತೆ ಸೋಮವಾರದಿಂದ ನಾಲ್ಕು ವಲಯಗಳಲ್ಲಿ ಕಾರ್ಯಾಚರಣೆ ಆರಂಭವಾಗಲಿದ್ದು, ವಾರಕ್ಕೆ 50 ಪ್ರಕರಣಗಳ ತೆರವಿನಂತೆ 9 ವಾರಗಳಲ್ಲಿ ಎಲ್ಲ 450 ಪ್ರಕರಣಗಳಲ್ಲಿ ಒತ್ತುವರಿ ತೆರವುಗೊಳಿಸಲು ಪಾಲಿಕೆ ಚಿಂತಿಸಿದೆ.
ಮಳೆ ಸುರಿದಾಗ ಅನಾಹುತ ಸಂಭವಿಸಬಹುದಾದ ಪ್ರದೇಶಗಳಲ್ಲಿ ಕೂಡಲೇ ತೆರವು ಕಾರ್ಯಾಚರಣೆ ಆರಂಭಿಸಲಾಗುವುದು. ವಾರಕ್ಕೆ 50 ಪ್ರಕರಣಗಳಂತೆ ತೆರವು ಕಾರ್ಯಾಚರಣೆ ನಡೆಸಲಾಗುವುದು.
-ಪ್ರಹ್ಲಾದ್, ಮುಖ್ಯ ಎಂಜಿನಿಯರ್, ಬೃಹತ್ ಮಳೆನೀರು ಕಾಲುವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.