ಶೇ.10 ರಿಯಾಯಿತಿಯಲ್ಲಿ ಹಣ್ಣು-ತರಕಾರಿ


Team Udayavani, Feb 11, 2022, 11:48 AM IST

ಶೇ.10 ರಿಯಾಯಿತಿಯಲ್ಲಿ ಹಣ್ಣು-ತರಕಾರಿ

ಬೆಂಗಳೂರು: ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣಾ ಸಂಘ (ಹಾಪ್‌ ಕಾಮ್ಸ್‌) ವಿವಾಹ, ನಾಮಕರಣ ಸೇರಿದಂತೆ ಶುಭ ಸಮಾರಂಭಗಳಿಗೆ ಶೇ.10 ರಿಯಾಯಿತಿ ದರದಲ್ಲಿ ಹಣ್ಣು -ತರಕಾರಿ ಮನೆ ಬಾಗಿಲಿಗೆ ಸರಬರಾಜು ಮಾಡುವ ಹೊಸ ಸೇವೆಯನ್ನು ಆರಂಭಿಸಿದೆ.

ಅಷ್ಟೇ ಅಲ್ಲದೆ ಸಾಗಣೆ ಶುಲ್ಕ ಪಡೆಯದೆ ಹಾಪ್‌ ಕಾಮ್ಸ್‌ ವಾಹನದಲ್ಲೇ ಗ್ರಾಹಕರ ಮನೆಗೆ ಹಣ್ಣು-ತರಕಾರಿ ತಲುಪಲಿದೆ. “ನೋ ಲಾಸ್‌ ನೋ ಪ್ರಾಫಿಟ್‌” ಸಂಕಲ್ಪದೊಂದಿಗೆ ಯೋಜನೆಯ ಕಾರ್ಯರೂಪಕ್ಕೆ ತರಲಾಗಿದ್ದು ತೋಟದ ಬೆಳೆಗಾರರು ಬೆಳೆದ ಉತ್ಪನ್ನಗಳಿಗೆ ಉತ್ತಮ ದರ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ಪ್ರಾರಂಭಿಸಿದೆ. ಶುಭ ಸಮಾರಂಭಗಳಿಗೆ ಅಗತ್ಯವಿರುವ ಹಣ್ಣುತರಕಾರಿ ಹಾಗೂ ಹಾಪ್‌ಕಾಮ್ಸ್‌ನಲ್ಲಿ ಲಭ್ಯವಿರುವ ಉತ್ಪನ್ನಗಳನ್ನು ಒಂದೇ ಸೂರಿನಡಿ ಖರೀದಿಸಲು ಗ್ರಾಹಕರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಹಾಪ್‌ಕಾಮ್ಸ್‌ ಅಧಿಕಾರಿಗಳು ತಿಳಿಸುತ್ತಾರೆ.

ಶುಭ ಸಮಾರಂಭಗಳಿಗೆ ತರಕಾರಿ ಸೇರಿದಂತೆ ಇನ್ನಿತರ ಪದಾರ್ಥಗಳನ್ನು ಖರೀದಿಸಲು ಜನರು ಮಾರುಕಟ್ಟೆಗಳಿಗೆ ತೆರಳಿ ಅಲೆದಾಟ ನಡೆಸಬೇಕಾಗುತ್ತದೆ. ಜತೆಗೆ ಅವರಿಗೆ ಬೇಕಾಗುವಎಲ್ಲಾ ರೀತಿಯ ಗುಣಮಟ್ಟದ ಉತ್ಪನ್ನಗಳು ಒಂದೇಸೂರಿನಡಿ ಸಿಗುವುದಿಲ್ಲ. ಆ ಹಿನ್ನೆಲೆಯಲ್ಲಿ ಜನರಿಗೆಅನಕೂಲವಾಗಲಿ ಎಂಬ ಯೋಜನೆ ಆರಂಭಿಸಲಾಗಿದೆ ಎಂದು ಹೇಳುತ್ತಾರೆ.

ಹಾಪ್‌ಕಾಮ್ಸ್‌ ಈಗಾಗಲೇ ಹಲವಾರು ಸಮಾರಂಭಗಳಿಗೆ ಉತ್ಪನ್ನಗಳನ್ನು ಪೂರೈಸಿದ್ದು ಗ್ರಾಹಕರು ಸಂತೃಪ್ತಿ ವ್ಯಕ್ತ ಪಡಿಸಿದ್ದಾರೆ. ರಿಯಾಯಿತಿ ದರದಲ್ಲಿ ಗುಣಮಟ್ಟದ ಉತ್ಪನ್ನಗಳನ್ನು ಸಮಾರಂಭನಡೆಯುವ ತಾಣಕ್ಕೇ ತಲುಪಿ ಸುವುದರಿಂದ ಗ್ರಾಹಕರ ಹಣ ಮತ್ತು ಸಮಯಗಳೆರಡೂ ಉಳಿಯಲಿದೆ ಎಂದು ತಿಳಿಸುತ್ತಾರೆ.

50 ಸಾವಿರ ರೂ.ವರೆಗೂ ಮಾರಾಟ: ಕೋವಿಡ್‌ ಹಿನ್ನೆಲೆಯಲ್ಲಿ ಸುಮಾರು 2 ತಿಂಗಳುಗಳ ಕಾಲ ಶುಭಸಮಾರಂಭಗಳು ನಿಂತು ಹೋಗಿದ್ದವು ಇದೀಗಶುಭ ಸಮಾರಂಭಗಳಿಗೆ ಚಾಲನೆ ಸಿಕ್ಕಿದ್ದು, ಪ್ರತಿ ದಿನ 40 ಸಾವಿರ ರೂ. ದಿಂದ 50 ಸಾವಿರ ರೂ. ವರೆಗೆಮಾರಾಟ ನಡೆಯುತ್ತಿದೆ ಎಂದು ಹಾಪ್‌ಕಾಮ್ಸ್‌ನಮಾರ್ಕೆಟಿಂಗ್‌ ಮ್ಯಾನೇಜರ್‌ ಜಯಪ್ರಕಾಶ್‌ ಹೇಳುತ್ತಾರೆ.

ಯಾವುದೇ ರೀತಿಯ ಲಾಭಾಂಶದ ಉದ್ದೇಶವಿಲ್ಲದೆ ರೈತರಿಗೆ ಮತ್ತು ಗ್ರಾಹಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಗ್ರಾಹಕರು ಬಯಸಿದರೆಬೆಂಗಳೂರು ಗ್ರಾಮಾಂತರ ವರೆಗೂ ರಿಯಾಯ್ತಿ ದರದಲ್ಲಿ ಸೇವೆಯನ್ನು ಮನೆ ಬಾಗಿಲಿಗೆ ಕಲ್ಪಿಸಲು ಹಾಪ್‌ ಕಾಮ್ಸ್‌ ಸಿದ್ಧವಿದೆ ಎಂದು ತಿಳಿಸುತ್ತಾರೆ.

25 ಕಿ.ಮೀ. ಆಸುಪಾಸಿನಲ್ಲಿ ಮಾರಾಟ :

ಸಮಾರಂಭಗಳಿಗೆ 20 ಸಾವಿರ ರೂ.ಗೂ ಮೇಲ್ಪಟ್ಟು ಖರೀದಿಸುವವರಿಗೆ ಮಾತ್ರ ಉಚಿತವಾಗಿ ವಾಹನಗಳ ಮೂಲಕ ಉತ್ಪನ್ನಗಳನ್ನು ಸರಬರಾಜು ಮಾಡಲಾಗುವುದು. ಅಡುಗೆ ಎಣ್ಣೆ ಹೊರತು ಪಡಿಸಿ ಕುಡಿಯುವ ನೀರು, ಹಣ್ಣು, ತರಕಾರಿ ಸೇರಿದಂತೆ ಹಾಪ್‌ಕಾಮ್ಸ್‌ನಲ್ಲಿ ಲಭ್ಯ ಇರುವಉತ್ಪನ್ನಗಳಿಗೆ ರಿಯಾಯಿತಿ ದೊರೆಯಲಿದೆ. ಈಗ ಬೆಂಗಳೂರಿನ 25 ಕಿ.ಮೀ ಆಸುಪಾಸಿನಲ್ಲಿಮಾರಾಟ ಪ್ರಕ್ರಿಯೆ ನಡೆಯುತ್ತಿದೆ. ಅಧಿಕ ಪ್ರಮಾಣದಲ್ಲಿ ಖರೀದಿ ಪ್ರಕ್ರಿಯೆ ನಡೆದರೆ ಬೆಂಗಳೂರಿನಹೊರ ವಲಯಗಳಿಗೂ ಕೂಡ ಉಚಿತ ವಾಹನ ಸೇವೆ ನೀಡಲಾಗುತ್ತಿದೆ. ಮನೆಗೆ ಉತ್ಪನ್ನಗಳನ್ನು ತಲುಪಿದ ನಂತರ ಪೂರ್ಣ ಪ್ರಮಾಣದಲ್ಲಿ ಖರೀದಿದಾರರು ಬಿಲ್‌ ಪಾವತಿ ಮಾಡುವ ಅವಕಾಶ ಕೂಡ ಕಲ್ಪಿಸಲಾಗಿದೆ ಎಂದು ಹಾಪ್‌ ಕಾಮ್ಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಾಪ್‌ ಕಾಮ್ಸ್‌ಹಲವು ಯೋಜನೆಗಳನ್ನು ರೂಪಿಸಿದೆ.ಇದರಲ್ಲಿ ಶುಭ ಸಮಾರಂಭಗಳಿಗೆರಿಯಾಯಿತಿ ದರದಲ್ಲಿ ಮಾರಾಟ ಮತ್ತುಮನೆ ಬಾಗಿಲಿಗೆ ಉಚಿತವಾಗಿ ಖರೀದಿ ಉತ್ಪನ್ನಗಳನ್ನು ತಲುಪಿಸುವ ಸೇವೆ ಕೂಡ ಸೇರಿದೆ. ನೋ ಲಾಸ್‌ ನೋ ಪ್ರಾಫಿಟ್‌ ಕಲ್ಪನೆಯಡಿ ಯೋಜನೆ ರೂಪಿಸಲಾಗಿದ್ದು ಗ್ರಾಹರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.- ಉಮೇಶ್‌ ಎಸ್‌.ಮಿರ್ಜಿ , ಹಾಪ್‌ಕಾಮ್ಸ್‌ವ್ಯವಸ್ಥಾಪಕ ನಿರ್ದೇಶಕ

 

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.