ಅಪಾರ್ಟ್‌ಮೆಂಟ್‌ ಬಾಗಿಲಿಗೇ ಹಣ್ಣು ತರಕಾರಿ?


Team Udayavani, Apr 3, 2020, 10:21 AM IST

ಅಪಾರ್ಟ್‌ಮೆಂಟ್‌ ಬಾಗಿಲಿಗೇ ಹಣ್ಣು ತರಕಾರಿ?

ಬೆಂಗಳೂರು: ಒಂದೆಡೆ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬೆಳೆದುನಿಂತ ತೋಟಗಾರಿಕೆ ಉತ್ಪನ್ನಗಳು ಖರೀದಿಸುವವರಿಲ್ಲದೆ ರಸ್ತೆ ಪಾಲಾಗುತ್ತಿದೆ. ಮತ್ತೂಂದೆಡೆ ಮಹಾನಗರಗಳಲ್ಲಿ ಅದೇ ಉತ್ಪನ್ನಗಳು ತತ್ವಾರ ಪ್ರಾರಂಭವಾಗಿದೆ. ಈ ಎರಡೂ ವರ್ಗಗಳ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಲು ಸರ್ಕಾರ ಮುಂದಾಗಿದೆ.

ಹೌದು, ಮಣ್ಣುಪಾಲಾಗುತ್ತಿರುವ ರೈತರ ಉತ್ಪನ್ನಗಳನ್ನು ನಗರದಲ್ಲಿರುವ ಹಾಪ್‌ಕಾಮ್ಸ್‌ಗಳ ಮೂಲಕ ನೇರವಾಗಿ ಬೆಂಗಳೂರು ಗ್ರಾಹಕರ ಮನೆ ಬಾಗಿಲಿಗೇ ಕೊಂಡೊಯ್ಯಲು ಚಿಂತನೆ ನಡೆದಿದೆ. ಅಂದುಕೊಂಡಂತೆ ಎಲ್ಲವೂ ನಡೆದರೆ, ರೈತರಿಗೆ ಇದು ನೇರ ಮಾರುಕಟ್ಟೆಗೆ ರಹದಾರಿ ಆಗುವುದರ ಜತೆಗೆ ಗ್ರಾಹಕರಿಗೆ ತಾಜಾ ಹಣ್ಣು-ತರಕಾರಿ ಲಭ್ಯವಾಗಲಿದೆ. ಅಲ್ಲದೆ, ಈ ನೇರ ಖರೀದಿಯಿಂದ ಉಂಟಾಗುವ ಸ್ಪರ್ಧೆಯು ಮಾರುಕಟ್ಟೆ ಮತ್ತೆ ಯಥಾಸ್ಥಿತಿಗೆ ಮರಳಲು ಕಾರಣವಾಗಬಹುದು.

ನಗರದಲ್ಲಿ ಸೂಪರ್‌ ಮಾರ್ಕೆಟ್‌ನಂಥ ದೊಡ್ಡ ಮಳಿಗೆಗಳು ಮತ್ತು ಬೀದಿ ಬದಿಯಲ್ಲಿ ಹಣ್ಣು-ತರಕಾರಿ ಮಾರಾಟ ಆಗುತ್ತಿದೆ. ಆದರೆ, ಜನ ನಿಗದಿತ ಅವಧಿಯಲ್ಲಿ ಮಾತ್ರ ಲಭ್ಯವಿದ್ದು, ಜನ ಹೊರಬರಲಿಕ್ಕೂ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಮುಂದೆ ಬಂದರೆ, ಹಾಪ್‌ಕಾಮ್ಸ್‌ಗಳಿಂದ ರೈತರ ಉತ್ಪನ್ನಗಳನ್ನು ಆಯಾ ಅಪಾರ್ಟ್‌ಮೆಂಟ್‌ಗಳ ಆವರಣಕ್ಕೇ ಪೂರೈಸಬಹುದು. ಅಲ್ಲಿ ಮಾರಾಟ ವ್ಯವಸ್ಥೆಯನ್ನು ಸಂಘಗಳೇ ಸ್ವಯಂಪ್ರೇರಿತವಾಗಿ ಮಾಡಿ ಕೊಳ್ಳಬೇಕಾಗುತ್ತದೆ. ವ್ಯಾಪಾರದಿಂದ ಬಂದ ಹಣ ವನ್ನು ರೈತರ ಖಾತೆಗೆ ಜಮೆ ಮಾಡಬೇಕು ಎಂಬುದು ಸರ್ಕಾರ ಪರಿಕಲ್ಪನೆಯಾಗಿದೆ. ಆದರೆ, ಇದೆಲ್ಲವೂ ನಗರದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಗಳು, ಅಪಾರ್ಟ್‌ಮೆಂಟ್‌ ನಿವಾಸಿಗಳ ಸ್ಪಂದನೆಯನ್ನು ಅವಲಂಬಿಸಿದೆ ಎಂದು ಹೆಸರು ಹೇಳಲಿಚ್ಛಿಸದ ತೋಟ ಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಪ್ರಾಥಮಿಕ ಸಭೆ: ಪ್ರಾಥಮಿಕವಾಗಿ ಕಲ್ಲಂಗಡಿ, ಕರಬೂಜದಂತಹ ವಾರಗಟ್ಟಲೆ ಸಂಗ್ರಹಿಸಿಡಬಹುದಾದ ಹಣ್ಣುಗಳನ್ನು ಈ ಮಾದರಿಯಲ್ಲಿ ಮಾರಾಟ ಮಾಡಲು ಚಿಂತನೆ ನಡೆದಿದೆ. ಇದರಲ್ಲಿ ಮುಖ್ಯವಾಗಿ ವಸತಿ ಸಮುಚ್ಛಯಗಳನ್ನು ಗುರಿ ಯಾಗಿಟ್ಟುಕೊಳ್ಳಲಾಗಿದೆ. ಏಕೆಂದರೆ, ಒಂದೇ ಕಡೆಗೆ ಅನ್‌ಲೋಡ್‌ ಮಾಡಿದರೆ, ಸಾವಿರಾರು ಗ್ರಾಹಕರಿಗೆ ಅನುಕೂಲ ಎಂಬುದು ಲೆಕ್ಕಾಚಾರ. ಉದಾಹರಣೆಗೆ 500 ಫ್ಲ್ಯಾಟ್‌ಗಳಿರುವ ಮನೆಗಳಲ್ಲಿ 400 ಗ್ರಾಹಕರು ಖರೀದಿಸಿದರೂ ವಾರದಲ್ಲಿ 3-4 ಟನ್‌ ಮಾರಾಟ ಆಗುತ್ತದೆ. 300 ಅಪಾರ್ಟ್‌ಮೆಂಟ್‌ಗಳನ್ನು ತೆಗೆದುಕೊಂಡರೆ, ವಾರದಲ್ಲಿ ಅನಾಯಾಸವಾಗಿ 600-700 ಟನ್‌ ಬಿಕರಿ ಆಗಲಿದೆ. ಇದರಿಂದ ರೈತರಿಗೂ ಲಾಭ ಆಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಇದು ಇನ್ನೂ ಪ್ರಾಥಮಿಕ ಹಂತದಲ್ಲಿದ್ದು, ಈ ಸಂಬಂಧ ಉನ್ನತ ಮಟ್ಟದಲ್ಲಿ ಒಂದು ಸುತ್ತಿನ ಮಾತುಕತೆ ನಡೆದಿದೆ. ಸರ್ಕಾರದ ಹಂತದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹಾಪ್‌ ಕಾಮ್ಸ್‌ ವ್ಯವಸ್ಥಾಪಕ ನಿರ್ದೇಶಕ ಬಿ.ಎನ್‌. ಪ್ರಸಾದ್‌ “ಉದಯವಾಣಿ’ಗೆ ತಿಳಿಸಿದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.