ಮತದಾನ ಅರಿವಿಗೆ ಕೈ ಜೋಡಿಸಿದ ಭಾವಿ ಪ್ರಜೆಗಳು


Team Udayavani, Apr 5, 2019, 11:27 AM IST

vote
ಬೆಂಗಳೂರು: ಪ್ರಜಾಪ್ರಭುತ್ವ, ಚುನಾವಣೆ ಬಗ್ಗೆ “ಎಸಿ ಕೊಠಡಿ’ಗಳಲ್ಲಿ ಕುಳಿತು ಚರ್ಚೆ ಮಾಡುತ್ತಾರೆ. ಮತದಾನಕ್ಕೆ ಮಾತ್ರ ಬರಲ್ಲ ಎಂಬ ಬೆಂಗಳೂರಿಗರ ಮೇಲಿನ ಅಪವಾದ ದೂರ ಮಾಡಲು ಪಣ ತೊಟ್ಟಿರುವ ಚುನಾವಣಾ ಆಯೋಗ, ಮತದಾನದ ಬಗ್ಗೆ ಜಾಗೃತಿ ಮೂಡಿಸಲು “ಭವಿಷ್ಯದ ನಾಯಕ’ ರಾಗಿರುವ ವಿದ್ಯಾರ್ಥಿಗಳ ಸೇವೆ ಪಡೆಯುತ್ತಿದೆ.
ಇದಕ್ಕಾಗಿ ವರ್ಷಾರಂಭದಿಂದಲೇ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಶಾಲೆ, ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಂಡು 4,652ಕ್ಕೂ ಹೆಚ್ಚು “ಮತದಾರರ ಸಾಕ್ಷರತಾ ಕ್ಲಬ್‌” (ಇಎಲ್‌ಸಿ) ಚುನಾವಣಾ ಆಯೋಗದ ಜಾಗೃತಿ ತಂಡ (ಸ್ವೀಪ್‌) ಆರಂಭಸಿದೆ. ಈ ಕ್ಲಬ್‌ಗ ಒಬ್ಬ ವಿದ್ಯಾರ್ಥಿಯನ್ನು ಕ್ಯಾಂಪಸ್‌ ರಾಯಭಾರಿ ಹಾಗೂ ಸಂವಿಧಾನ ಪರಿಚಯವಿರುವ ಶಿಕ್ಷಕರನ್ನು ಸಮಾಲೋಚಕರಾಗಿ ನೇಮಕ ಮಾಡಿದ್ದಾರೆ.  ರಾಯಭಾರಿಯು ತನ್ನೊಡನೆ ನಾಲ್ಕು ಗೆಳೆಯರನ್ನು ಸೇರಿಸಿಕೊಂಡು ಮತದಾನ ಕುರಿತು ವಿವಿಧ ಜಾಗೃತಿ ಕೆಲಸ ಮಾಡುತ್ತಿದ್ದಾರೆ.
ರಾಯಭಾರಿಗಳ ಕೊಡುಗೆ ಏನು?: “ಮತದಾರರ ಸಾಕ್ಷರತಾ ಕ್ಲಬ್‌’ನಲ್ಲಿ 9ನೇ ತರಗತಿಯಿಂದ ಸ್ನಾತಕೋತ್ತರ ವಿದ್ಯಾರ್ಥಿಗಳು ಕ್ಯಾಂಪಸ್‌ ರಾಯಭಾರಿಗಳಿದ್ದಾರೆ. ಈ ರಾಯಭಾರಿಗಳು ಜನವರಿಯಿಂದ ಮತದಾರರ ಪಟ್ಟಿಗೆ ನೋಂದಣಿ ಅರ್ಜಿಗಳನ್ನು ತುಂಬಿಸಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ತಮ್ಮ ಶಾಲೆ, ಕಾಲೇಜು ಸುತ್ತ, ಮನೆ ಅಕ್ಕ ಪಕ್ಕದ ಬಡಾವಣೆಗಳಲ್ಲಿ ಜಾಥಾ, ಬೀದಿ ನಾಟಕ, ಪ್ರತಿಜ್ಞೆ ಸ್ವೀಕಾರದಂತಹ ವಿವಿಧ ಕಾರ್ಯಕ್ರಮ ನಡೆಸಿ ಮತದಾರರ ಜವಾಬ್ದಾರಿ ಹಾಗೂ ಕರ್ತವ್ಯ ತಿಳಿಸುತ್ತಿದ್ದಾರೆ. ಮುಂದೆ ಮತದಾರರ ಪಟ್ಟಿಯಲ್ಲಿ ಹೆಸರು ಹುಡುಕುವುದು ಹೇಗೆ, ಬೂತ್‌ ಯಾವುದೆಂದು ತಿಳಿಯುವ ವಿಧಾನಗಳನ್ನು ಜನರಿಗೆ ತಿಳಿಸಿಕೊಡಲಿದ್ದಾರೆ.
ನಾಲ್ಕು ಲಕ್ಷಕ್ಕೂ ಅಧಿಕ ಸಂಕಲ್ಪ ಪತ್ರಕ್ಕೆ ಸಹಿ: 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮತದಾನ ವ್ಯಾಪ್ತಿಗೆ ಒಳಪಡದ 9, 10ನೇ ತರಗತಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದಡಿ “ಮತದಾನ ಸಂಕಲ್ಪ ಪತ್ರ’ ನೀಡಿ ತಮ್ಮ ಪೋಷಕರಿಂದ ಸಹಿ ಹಾಕಿಸಿಕೊಂಡು ಬಂದು ಜಾಗೃತಿ ಕಾರ್ಯಕ್ರಮದ ಸಂಯೋಜಕ ಶಿಕ್ಷಕರಿಗೆ ನೀಡಲು ಸೂಚಿಸಲಾಗಿತ್ತು.
ಈ ಪತ್ರದಲ್ಲಿ “ಮತದಾನ ನಡೆಯುವ ದಿನದಂದು ತಪ್ಪದೇ ನಾವು ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತೇವೆ, ಜತೆಗೆ ಇತರರನ್ನು ಮತದಾನಕ್ಕೆ ಪ್ರೇರೇಪಿಸುತ್ತೇವೆ’ ಎಂಬಿತ್ಯಾದಿ ಹೇಳಿಕೆಗಳಿದ್ದು, ಅವುಗಳಿಗೆ ಒಪ್ಪಿ ಪೋಷಕರು ಸಹಿ ಹಾಕಬೇಕಾಗುತ್ತದೆ. ಮೂರೂ ಲೋಕಸಭೆ ವ್ಯಾಪ್ತಿಯಿಂದ ನಾಲ್ಕು ಲಕ್ಷಕ್ಕೂ ಅಧಿಕ ಸಂಕಲ್ಪ ಪತ್ರಗಳು ಸಂಗ್ರಹವಾಗಿವೆ ಎಂದು ಸ್ವೀಪ್‌ನ ನೋಡಲ್‌ ಅಧಿಕಾರಿಗಳು ತಿಳಿಸಿದರು.
 ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.