ಗಾಂಧೀಜಿಗೆ ಪ್ರಜಾಪ್ರಭುತ್ವದಲ್ಲಿ ಸಂಪೂರ್ಣ ನಂಬಿಕೆ ಇರಲಿಲ್ಲ


Team Udayavani, Jul 9, 2018, 12:12 PM IST

gandhiji.jpg

ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಪೂರ್ಣ ನಂಬಿಕೆ ಹೊಂದಿರಲಿಲ್ಲ ಎನಿಸುತ್ತದೆ ಎಂದು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎನ್‌.ಕುಮಾರ್‌ ಅಭಿಪ್ರಾಯಪಟ್ಟರು. 

ವಿದ್ಯಾಶ್ರೀ ಪ್ರಕಾಶನದ ವತಿಯಿಂದ ನಗರದ ಗಾಯನ ಸಮಾಜದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮ.ಸು.ಮನ್ನಾರ್‌ ಕೃಷ್ಣರಾವ್‌ ಅವರ “ಸರ್ದಾರ್‌ ವಲ್ಲಭಭಾಯ್‌ ಪಟೇಲ್‌’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ಕಾಂಗ್ರೆಸ್‌ನಲ್ಲಿ ಗಾಂಧೀಜಿ ಉನ್ನತ ನಾಯಕರಾಗಿದ್ದರಿಂದ ಯಾರೂ ಅವರಿಗೆ ಎದುರು ಹೇಳುತ್ತಿರಲಿಲ್ಲ. ಹೀಗಾಗಿ, ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆ ವೇಳೆ ತಮಗೆ ಇಷ್ಟವಿಲ್ಲದ ವ್ಯಕ್ತಿಯನ್ನು ಗಾಂಧೀಜಿ ಎಂದೂ ಸ್ಪರ್ಧಿಸಲು ಬಿಡುತ್ತಿರಲಿಲ್ಲ. ಅವರ ಬದಲಿಗೆ ಮತ್ತೂಬ್ಬರನ್ನು ಆ ಸ್ಥಾನಕ್ಕೆ ಆಯ್ಕೆ ಮಾಡುತ್ತಿದ್ದರು ಎಂದು ಹೇಳಿದರು.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರು ಸ್ಪರ್ಧಿಸಿದಾಗ ಗಾಂಧೀಜಿ ಅಡ್ಡಿಪಡಿಸಿದರು. ನೇತಾಜಿ ಸುಭಾಷ್‌ ಚಂದ್ರಬೋಸ್‌ ಅವರು ಅಧ್ಯಕ್ಷರಾಗಿ ಆಯ್ಕೆಯಾದರೂ ಅವರಿಂದ ರಾಜೀನಾಮೆ ಕೊಡಿಸಿದ್ದರು. ಇನ್ನು ರಾಜಾಜಿ ಅವರಿಗೆ ನಾಮಪತ್ರ ಸಲ್ಲಿಸಲು ಕೂಡ ಅವಕಾಶ ನೀಡಿರಲಿಲ್ಲ ಎಂಬುದೂ ಇತಿಹಾಸದಿಂದ ತಿಳಿಯುತ್ತದೆ. ಹೀಗಾಗಿ, ಗಾಂಧೀಜಿಯವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಪೂರ್ಣ ನಂಬಿಕೆ ಹೊಂದಿರಲಿಲ್ಲ ಅನಿಸುತ್ತದೆ ಎಂದು ಹೇಳಿದರು.

ಸರ್ದಾರ್‌ ವಲ್ಲಭಭಾಯ್‌ ಪಟೇಲ್‌ ಅವರು ಅಧ್ಯಕ್ಷರಾಗಬೇಕೆಂದು ಸಮಿತಿಯಲ್ಲಿದ್ದ 15 ಜನರ ಪೈಕಿ 12 ಜನ ಹೇಳಿದ್ದರು. ಆದರೆ, ನೆಹರೂ ಅವರ ಹೆಸರನ್ನು ಯಾರೂ ಹೇಳಿರಲಿಲ್ಲ. ಆದರೂ, ಗಾಂಧೀಜಿಯವರು ನೆಹರೂ ಅವರನ್ನೇ ಆಯ್ಕೆ ಮಾಡಿದ್ದರು. ನಂತರದಲ್ಲಿ ಎಲ್ಲರೂ ಅವರ ಮಾತಿಗೆ ಬೆಲೆ ಕೊಟ್ಟು ನೆಹರೂ ಅವರನ್ನು ಆಯ್ಕೆ ಮಾಡುತ್ತಾರೆ. ಕೃಷ್ಣರಾವ್‌ ಅವರ ಪುಸ್ತಕ ಓದಿದ ನಂತರ ಗಾಂಧೀಜಿಯವರ ಮೇಲಿದ್ದ ನಂಬಿಕೆ ಕಡಿಮೆಯಾಗಿದೆ ಎಂದು ಹೇಳಿದರು.

ಸರ್ದಾರ್‌ ಪಟೇಲ್‌ ಅವರ ಜೀವನದ ಕುರಿತು ಪುಸ್ತಕ ಓದಿದರೆ ಹಲವಾರು ವ್ಯಕ್ತಿಗಳ ಜೀವನ ಚರಿತ್ರೆಯ ಚಿತ್ರಣ ದೊರೆಯುತ್ತದೆ.  ತ್ಯಾಗ್ಯ ಎಂದರೆ ಅದು ಪಟೇಲರು ಎಂಬುದು ಸ್ಪಷ್ಟವಾಗುತ್ತದೆ. ತಮಗೆ ಸ್ಥಾನ ತಪ್ಪಿದರೂ ಎಂದೂ ಅವರು ನೆಹರೂ ಅವರಿಗೆ ಅಸಹಕಾರ ನೀಡಲಿಲ್ಲ. ಬದಲಿಗೆ ಅವರಿಗೆ ಬೆಂಬಲವಾಗಿ ನಿಂತು ಸಹಾಯ ಮಾಡಿದ್ದಾರೆ ಎಂದರು.

ಚಿತ್ರ ನಿರ್ದೇಶಕ ಟಿ.ಎಸ್‌.ನಾಗಾಭರಣ ಮಾತನಾಡಿ, ಯುವಕರಿಗೆ ಸ್ಫೂರ್ತಿಯಾಗುವಂತಹ ಮಾದರಿ ವ್ಯಕ್ತಿಗಳು ಪ್ರಸ್ತುತ ಸಂದರ್ಭದಲ್ಲಿ ಯಾರು ಇಲ್ಲ. ಜಾತಿ, ಮತ, ಧರ್ಮಗಳನ್ನು ಮೀರಿ ಮನುಷ್ಯನನ್ನು ಮನುಷ್ಯನಾಗಿ ಕಾಣುವ ವಾತಾವರಣ ನಿರ್ಮಾಣವಾಗಬೇಕಾದರೆ, ಸರ್ದಾರ್‌ ಪಟೇಲ್‌ರಂತಹವರು ಇಂದಿಗೂ ಪ್ರಸ್ತುತ ಎನಿಸುತ್ತಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಲೇಖಕ ಮ.ಸು.ಮನ್ನಾರ್‌ ಕೃಷ್ಣ ರಾವ್‌, ಅಕಾಡೆಮಿ ಫಾರ್‌ ಕ್ರಿಯೇಟಿವ್‌ ಟೀಚಿಂಗ್‌ನ ಮುಖ್ಯಸ್ಥ ಡಾ.ಗುರುರಾಜ ಕರಜಗಿ ಸೇರಿದಂತೆ ಪ್ರಮುಖರು ಹಾಜರಿದ್ದರು. 

ಭಾರತ ರತ್ನ ನೀಡಲು 41 ವರ್ಷ ಬೇಕಾಯಿತು: ಪ್ರಧಾನಮಂತ್ರಿ ಸ್ಥಾನ ಬಿಟ್ಟುಕೊಟ್ಟ ಸರ್ದಾರ್‌ ಪಟೇಲರಿಗೆ ನೆಹರೂ ಅವರು ಪ್ರಧಾನಿಯಾಗಿದ್ದ 17 ವರ್ಷಗಳು, ಅವರ ಮಗಳು ಪ್ರಧಾನಿಯಾಗಿದ್ದ 16 ವರ್ಷ ಹಾಗೂ ಮೊಮ್ಮಗ ಪ್ರಧಾನಿಯಾಗಿದ್ದ 5 ವರ್ಷಗಳಲ್ಲಿ ಭಾರತ ರತ್ನ ಪ್ರಶಸ್ತಿ ದೊರೆಯಲಿಲ್ಲ.

41 ವರ್ಷಗಳ ಕಾಲ ಅವರಿಗೆ ಪ್ರಶಸ್ತಿ ನೀಡಲು ಸಮಸ್ಯೆ ಉಂಟು ಮಾಡಿದರು. ಕೊನೆಗೆ ರಾಜೀವ್‌ ಗಾಂಧಿ, ಮುರಾರ್ಜಿ ದೇಸಾಯಿ ಅವರೊಂದಿಗೆ ಪ್ರಶಸ್ತಿ ನೀಡಲಾಯಿತು. ಇದು ನಮ್ಮ ಭಾರತ ದೇಶದ ದೌಭಾಗ್ಯ ಎಂದು ನಿವೃತ್ತ ನ್ಯಾಯಮೂರ್ತಿ ಎನ್‌.ಕುಮಾರ್‌ ಅವರು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.