ಹಿಂದುತ್ವ ಸಿದ್ಧಾಂತದಿಂದ ಗಾಂಧಿ ಹತ್ಯೆ
Team Udayavani, Jan 31, 2019, 6:54 AM IST
ಬೆಂಗಳೂರು: ಗಾಂಧೀಜಿಯವರು ತಮ್ಮ ತತ್ವ ಸಿದ್ದಾಂತಗಳನ್ನು ಯಾವುದೇ ರಾಜಕೀ ಯ ಉದ್ದೇಶಕ್ಕೆ ಬಳಸಿಕೊಂಡಿರಲಿಲ್ಲ. ಹಿಂದುತ್ವದ ಸಿದ್ಧಾಂತದಿಂದ ಅವರನ್ನು ಹತ್ಯೆ ಮಾಡಲಾಯಿತು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರ ಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗಾಂಧೀಜಿಯವರನ್ನು ಕೊಂದಿರುವ ಬಗ್ಗೆ ಇನ್ನೂ ಪ್ರಶ್ನೆ ಉಳಿದು ಕೊಂಡಿದೆ. ಇತ್ತೀಚೆಗೆ ಧರ್ಮದ ಹೆಸರಿನಲ್ಲಿ ಮಾಡುವ ಕುತಂತ್ರ ಹೆಚ್ಚಾಗು ತ್ತಿದೆ. ಸಮಾಜದಲ್ಲಿ ಭಯ ಸೃಷ್ಟಿಸುವುದೇ ಅವರ ಕೆಲಸ. ಅಂತಹ ಶಕ್ತಿಗಳೇ ಹಿಂದೆ ಗಾಂಧೀಜಿಯವರನ್ನು ಕೊಂದಿದ್ದು, ಆರ್ಎಸ್ಎಸ್ ಹಿಂಸಾವಾದಿ ಸಂಘಟನೆ. ಬಿಜೆಪಿ ಅದನ್ನು ಮುಂದುವರೆಸಿದೆ ಎಂದು ದೂರಿದರು. ಬಿಜೆಪಿಯವರು ಹೆಸರಿಗೆ ಮಾತ್ರ ಗಾಂಧೀಜಿಯನ್ನು ನೆನೆಸಿಕೊಳ್ಳುತ್ತಾರೆ. ಗಾಂಧೀ ಜಿಯ ಜನ್ಮ ದಿನಾಚರಣೆಯನ್ನು ಬಿಜೆಪಿಯವರು ಸ್ವಚ್ಛತೆಗೆ ಸೀಮಿತಗೊಳಿಸಿದ್ದಾರೆ ಎಂದರು.
ಮೌನಾಚರಣೆ ಮರೆತು ಭಾಷಣ: ಹುತಾತ್ಮರ ದಿನದ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧೀಜಿಯವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆ ಮಾಡದೆ ಭಾಷಣ ಆರಂಭಿಸಲಾಯಿತು. ಮಾಜಿ ಸಚಿವೆ ರಾಣಿ ಸತೀಶ್ ಅವರ ಸಲಹೆಯಂತೆ ಕಾರ್ಯಕ್ರಮದ ಮಧ್ಯ 1 ನಿಮಿಷ ಮೌನಾಚರಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…