ಗಾಂಜಾ, ಚರಸ್‌ ಮಾರುತ್ತಿದ್ದ ಟೆಕ್ಕಿ ಸೇರಿ ನಾಲ್ವರು ಪೊಲೀಸರ ಬಲೆಗೆ


Team Udayavani, Mar 1, 2017, 11:51 AM IST

MICO-LAYOUT.jpg

ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸಾಫ್ಟ್ವೇರ್‌ ಉದ್ಯೋಗಿ ಸೇರಿದಂತೆ ನಾಲ್ವರನ್ನು ಮೈಕೋ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ. ಹೊಸಪಾಳ್ಯದ ಸಾಫ್ಟ್ವೇರ್‌ ಇಂಜಿನಿಯಾರ್‌ ಅವಿಶೇಕ್‌ ಸಿಂಗ್‌(34), ನೇಪಾಳದ ಅಶೋಕ್‌ ಬಹದ್ದೂರ್‌ (21), ಎಚ್‌ಎಸ್‌ಆರ್‌ ಲೇಔಟ್‌ನ ಬಿಜಯ್‌ ಸಿಂಗ್‌ (30), ಬಿಟಿಎಂ ಲೇಔಟ್‌ನ ನಿಸಾ­ಮು­ದ್ದೀನ್‌ (25) ಬಂಧಿತರು. ಆರೋಪಿಗಳಿಂದ 27 ಲಕ್ಷ ರೂ. ಮೌಲ್ಯದ 2.7 ಕೆ.ಜಿ. ಚರಸ್‌ ಮತ್ತು 5.3 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ. 

ನಗರದಲ್ಲಿ ಭದ್ರತಾ ಸಿಬ್ಬಂದಿಯಾಗಿರುವ ಅಶೋಕ್‌ ಬಹದ್ದೂರ್‌ ತನ್ನ ಸ್ನೇಹಿತ ಬಿಜಯ್‌ಸಿಂಗ್‌ ಜತೆ ಸೇರಿ ಚರಸ್‌ ಮಾರಾಟ ದಂಧೆಯಲ್ಲಿ ತೊಡಗಿದ್ದ. ನೇಪಾಳದ ಬಜಾಂಗ್‌ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಗಾಂಜಾ ಗಿಡಗಳನ್ನು ಬೆಳೆಸುತ್ತಿದ್ದ. ಅಲ್ಲಿಂದ ಬಸ್‌ನಲ್ಲಿ ಕಾಂಚಾನಪುರಕ್ಕೆ ಚರಸ್‌ ಮತ್ತು ಗಾಂಜಾ ತರುತ್ತಿದ್ದ ಆತ ನಂತರ ಟಾಂಗದಲ್ಲಿ ಉತ್ತರಾಖಂಡ ರಾಜ್ಯದ ಗಡಿಗೆ ಬಂದು ಅಲ್ಲಿಂದ ಗಡಿ ದಾಟಿ ಬಸ್‌ನಲ್ಲಿ ದೆಹಲಿಗೆ ಬರುತ್ತಿದ್ದ. ದೆಹಲಿಯಿಂದ ರೈಲಿನ ಮೂಲಕ ನಗರಕ್ಕೆ ಅದನ್ನು ತೆಗೆದುಕೊಂಡು ಬರುತ್ತಿದ್ದ ಎನ್ನಲಾಗಿದೆ.

ಜೋಳದ ರೀತಿ ಪ್ಲಾಸ್ಟಿಕ್‌ನಲ್ಲಿ ಸಾಗಾಟ: ಚರಸ್‌ ಹೆಚ್ಚು ವಾಸನೆ ಬರುತ್ತಿದ್ದುದ್ದರಿಂದ ಅದನ್ನು ಜೋಳದ ಆಕಾರದಲ್ಲಿ ಪ್ಲಾಸ್ಟಿಕ್‌ನಲ್ಲಿ ಕಟ್ಟಿ ಯಾರಿಗೂ ಗೊತ್ತಾಗದಂತೆ ತರುತ್ತಿದ್ದ. ಜೋಳದ ಆಕಾರದ ಪ್ಲಾಸ್ಟಿಕ್‌ನೊಳಗೆ ಮೂರು ರೀತಿಯ ಪದರ ಇರುತ್ತಿದ್ದುದರಿಂದ  ವಾಸನೆ ಬರುತ್ತಿರಲಿಲ್ಲ ಎಂದು ತನಿಖಾಧಿಕಾರಿ ತಿಳಿಸಿದ್ದಾರೆ.

ಹೀಗೆ ನಗರಕ್ಕೆ ತಂದ ಚರಸ್‌ಅನ್ನು ಆರೋಪಿಗಳು ಪ್ರತಿಷ್ಠಿತ ಕಾಲೇಜುಗಳ ಬಳಿ ವಿದ್ಯಾರ್ಥಿಗಳು ಮತ್ತು ಸಾಫ್ಟ್ವೇರ್‌ ಉದ್ಯೋಗಿಗಳಿಗೆ ಹಾಗೂ ವಿದೇಶಿಯರಿಗೆ 10 ಗ್ರಾಂಗೆ 7ರಿಂದ 10 ಸಾವಿರ ರೂ.ತನಕ ಮಾರಾಟ ಮಾಡುತ್ತಿದ್ದರು. ಹೆಣ್ಣೂರು, ಬಾಣಸವಾಡಿ, ಮೈಕೋಲೇಔಟ್‌ ಇನ್ನಿತರ ಪ್ರದೇಶಗಳಲ್ಲಿ ಗ್ರಾಹಕರನ್ನು ಹೊಂದಿದ್ದರು. ಅಲ್ಲದೆ, ಹೊಸಕೋಟೆಯಿಂದ ಗಾಂಜಾ ತಂದು ಅದನ್ನು ಸಣ್ಣ ಪ್ಯಾಕೇಟ್‌ಗಳಲ್ಲಿ ಮಾರಾಟ ಮಾಡುತ್ತಿದ್ದರು.

ಈ ದಂಧೆ ವೇಳೆ ಬಹದ್ದೂರ್‌ಗೆ, ನಿಜಾಮುದ್ದೀನ್‌ ಮತ್ತು ಅವಿಶೇಕ್‌ ಸಿಂಗ್‌ ಪರಿಚಯವಾಗಿದೆ. ಸಾಫ್ಟ್ವೇರ್‌ ಎಂಜಿನಿಯರ್‌ ಆಗಿದ್ದರೂ ಅವಿಶೇಕ್‌ ಸಿಂಗ್‌ ಆ ಕೆಲಸ ಬಿಟ್ಟು ಹೆಚ್ಚಿನ ಹಣದಾಸೆಗೆ ಈ ದಂಧೆಯಲ್ಲಿ ಭಾಗಿಯಾಗಿದ್ದ.  ದೆಹಲಿ ಮೂಲದ ಅವಿಶೇಕ್‌ ಸಿಂಗ್‌ ಕಳೆದ ಒಂದು ವರ್ಷದ ಹಿಂದೆ ನಗರಕ್ಕೆ ಬಂದಿದ್ದು, ಎರಡು ಕಂಪನಿಗಳಲ್ಲಿ ಸಾಫ್ಟ್ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡಿದ್ದ.

ಕೆಲಸ ಬಿಟ್ಟು ಸುಲಭವಾಗಿ ಹಣ ಮಾಡಬಹುದೆಂದು ಕೃತ್ಯಕ್ಕೆ ಇಳಿದಿದ್ದ. ಆತನ ಪೋಷಕರು ದೆಹಲಿಯಲ್ಲಿ ನೆಲೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೈಕೋಲೇಔಟ್‌ ಎನ್‌.ಎಸ್‌.ಪಾಳ್ಯದ ನಿಸಾಮುದ್ದೀನ್‌ ಮನೆಯಲ್ಲಿ ಮಾದಕ ವಸ್ತು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಇನ್ಸ್‌ಪೆಕ್ಟರ್‌ ಬಿ.ಕೆ.ಶೇಖರ್‌ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.