ರೈಲಿನಲ್ಲಿ ಗಾಂಜಾ ಸಾಗಣೆ: ಮಾರಾಟಗಾರನ ಬಂಧನ
Team Udayavani, Feb 28, 2019, 5:44 AM IST
ಬೆಂಗಳೂರು: ರೈಲಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.ಕೇರಳದ ಕಾಸರಗೊಡು ಜಿಲ್ಲೆಯ ಇಕ್ಬಾಲ್ ಅಲಿಯಾಸ್ ಇಕ್ಕು (22) ಬಂಧಿತ. ಆತನಿಂದ 10 ಲಕ್ಷ ರೂ. ಮೌಲ್ಯದ 20 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಆರೇಳು ವರ್ಷಗಳಿಂದ ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿರುವ ಇಕ್ಬಾಲ್, ಆಂಧ್ರ ಪ್ರದೇಶದ ಮಧ್ಯವರ್ತಿಯೊಬ್ಬನಿಂದ ಗಾಂಜಾ ಖರೀದಿಸುತ್ತಿದ್ದ.
ನಂತರ ಬಾಣಸವಾಡಿಯ ರೈಲು ನಿಲ್ದಾಣದಿಂದ ಕಣ್ಣೂರು ಎಕ್ಸ್ಪ್ರೆಸ್ ರೈಲು ಮೂಲಕ ಕೇರಳಕ್ಕೆ ಕೊಂಡೊಯ್ಯುತ್ತಿದ್ದ. ಅನಂತರ ಸಣ್ಣ-ಸಣ್ಣ ಪ್ಯಾಕೆಟ್ಗಳನ್ನಾಗಿ ಮಾಡಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಎಂದು ರೈಲ್ವೆ ಪೊಲೀಸರು ಹೇಳಿದರು.ಇತ್ತೀಚೆಗೆ ಕಣ್ಣೂರು ಎಕ್ಸ್ಪ್ರೆಸ್ ರೈಲು ಮೂಲಕ ಕೇರಳಕ್ಕೆ ಗಾಂಜಾ ಸಾಗಿಸುತ್ತಿರುವ ಬಗ್ಗೆ ದೊರೆತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ರೈಲ್ವೆ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್