ಕಾಮುಕ ಪ್ರಿನ್ಸಿಪಾಲ್! ಕೌನ್ಸಲಿಂಗ್ ನೆಪದಲ್ಲಿ ಲೈಂಗಿಕ ಕಿರುಕುಳ
Team Udayavani, Feb 3, 2017, 11:46 AM IST
ಬೆಂಗಳೂರು: ಸದಾಶಿವನಗರದ ಪ್ರತಿಷ್ಠಿತ ಕಾಲೇಜೊಂದರ ಪ್ರಿನ್ಸಿಪಾಲ್ ಹಲವು ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಪ್ರಕರಣ ದಾಖಲಾಗಿದೆ.
ಕುಮಾರ್ ಠಾಕೂರ್ ಎಂಬ ಪ್ರಾಂಶುಪಾಲ ಕೌನ್ಸಲಿಂಗ್ ನೆಪದಲ್ಲಿ ವಿದ್ಯಾರ್ಥಿನಿಯರನ್ನು ಕೋಣೆಗೆ ಕರೆಸಿಕೊಂಡು ಗಂಟೆಗಳ ಕಾಲ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಕಳೆದ 5 ವರ್ಷಗಳಿಂದ ಈತ ಪ್ರಾಂಶುಪಾಲನಾಗಿದ್ದು, ಹಲವು ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ್ದು, ಶಿಕ್ಷಕಿಯರಿಗೂ ವಾಟ್ಸಾಪ್ನಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಹೆಂಡತಿ ನನ್ನೊಂದಿಗೆ ಸಹಕರಿಸುತ್ತಿಲ್ಲ ಹಾಗಾಗಿ ನಾನು ವಿವಾಹೇತರ ಸಂಬಂಧ ಹೊಂದಬಹುದು ಎಂದು ಶಿಕ್ಷಕಿಯರ ಬಳಿ ಹೇಳಿಕೊಂಡಿದ್ದ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.
ತಾಯಿಯನ್ನು ಕಳೆದುಕೊಂಡ ಪಿಯುಸಿ ವಿದ್ಯಾರ್ಥಿನಿಯೊಬ್ಬಳಿಗೆ ಸಾಂತ್ವನ ಹೇಳುವ ನೆಪದಲ್ಲಿ ಖಾಸಗಿಯಾಗಿ ಕರೆಸಿಕೊಂಡು ಕಾಮುಕ ತನ ತೋರಿದ್ದ ಎಂಬ ಆರೋಪವೂ ಕುಮಾರ್ ವಿರುದ್ದ ಕೇಳಿ ಬಂದಿದೆ.
ಅಧಿಕಾರ ದುರ್ಬಳಕೆ ಮಾಡಿಕೊಂಡು ತನ್ನ ವಿರುದ್ಧ ಧ್ವನಿ ಎತ್ತಿದರೆ ಅವರ ಇನ್ಕ್ರಿಮೆಂಟ್ ,ಸಂಬಳಕ್ಕೆ ಕತ್ತರಿ ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ.
ಈತನ ಕಿರುಕುಳದಿಂದ ಬೇಸತ್ತ ಶಿಕ್ಷಕಿಯರು ಮತ್ತು ವಿದ್ಯಾರ್ಥಿನಿಯರು ಜೊತೆಯಾಗಿ ಡಿಸೆಂಬರ್ನಲ್ಲಿ ಚೈಲ್ಡ್ಲೈನ್ಗೆ ದೂರು ನೀಡಿದ್ದು, ನೊಡೇಲ್ ಡೈರೆಕ್ಟರ್ ವಾಸುದೇವ ಶರ್ಮಾ ವಿದ್ಯಾರ್ಥಿನಿಯರ ಹೇಳಿಕೆಗಳನ್ನು ಪಡೆದು ಪೊಲೀಸ್ ಕಮಿಷನರ್ ಪ್ರವೀಣ್ ಸೂದ್ ಅವರನ್ನು ಭೇಟಿ ಮಾಡಿ ಪ್ರಕರಣದ ಬಗ್ಗೆ ವಿವರ ನೀಡಿದ್ದಾರೆ.
ಡಿಸಿಪಿ ಚಂದ್ರಗುಪ್ತ ಅವರ ಬಳಿ ದೂರು ನೀಡಲಾಗಿದ್ದು, POCSO ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಜನವರಿ 31 ರಂದು ಆರೋಪಿ ಕುಮಾರ್ ಠಾಕೂರ್ನನ್ನು ಬಂಧಿಸಿ ಒಂದೇ ದಿನಗಳಲ್ಲಿ ಅಂದರೆ ಫೆಬ್ರವರಿ 1 ರಂದು ಬಿಡುಗಡೆ ಮಾಡಲಾಗಿದೆ.
ಕುಮಾರ್ ರಾಜಕಾರಣಿಗಳ ಬಲವಾದ ನಂಟು ಹೊಂದಿದ್ದಾನೆ ಎನ್ನಲಾಗಿದ್ದು ಪೊಲೀಸ್ ಇಲಾಖೆ ಈತನ ವಿರುದ್ಧ ಬಲವಾದ ತನಿಖೆ ನಡೆಸಲು ಹಿಂದೇಟು ಹಾಕುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಗಂಭೀರ ಆರೋಪ ಹೊತ್ತಿದ್ದರೂ ಇದುವರೆಗೆ ಶಿಕ್ಷಣ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್