Bangalore: ಗ್ಯಾಸ್‌ ವೆಲ್ಡಿಂಗ್‌ ಟ್ಯಾಂಕ್‌ ಸ್ಫೋಟ: ಭಾರೀ ಬೆಂಕಿ!


Team Udayavani, Mar 10, 2024, 11:42 AM IST

Bangalore: ಗ್ಯಾಸ್‌ ವೆಲ್ಡಿಂಗ್‌ ಟ್ಯಾಂಕ್‌ ಸ್ಫೋಟ: ಭಾರೀ ಬೆಂಕಿ!

ಬೆಂಗಳೂರು: ಗ್ಯಾರೇಜ್‌ವೊಂದರಲ್ಲಿ ವೆಲ್ಡಿಂಗ್‌ ಟ್ಯಾಂಕ್‌ ಸ್ಫೋಟಗೊಂಡು ಗ್ಯಾರೇಜ್‌ ಮಾಲೀಕ ಸೇರಿ ನಾಲ್ವರು ಗಾಯಗೊಂಡಿರುವ ಘಟನೆ ಬಸವೇಶ್ವರನಗರದಲ್ಲಿ ಶನಿವಾರ ನಡೆದಿದೆ.

ಬಸವೇಶ್ವರನಗರದ ವೆಸ್ಟ್‌ ಆಫ್ ಕಾರ್ಡ್‌ ರಸ್ತೆಯ ಪೈ ಶೋ ರೂಮ್‌ ಬಳಿಯ ಗ್ಯಾರೇಜ್‌ನಲ್ಲಿ ಸಂಜೆ 6 ಗಂಟೆಗೆ ಘಟನೆ ನಡೆದಿದೆ. ಗ್ಯಾರೇಜ್‌ ಮಾಲೀಕ ಜಾರ್ಜ್‌, ಕೆಲಸಗಾರ ಶಿವು, ಇಬ್ಬರು ಪಾದಚಾರಿ ಸೇರಿ ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರೊಂದನ್ನು ವೆಲ್ಡಿಂಗ್‌ ಮಾಡುತ್ತಿದ್ದಾಗ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೆಲ ಕ್ಷಣಗಳಲ್ಲೇ ಬೆಂಕಿ ಕಿನ್ನಾಲಿಗೆ ಗ್ಯಾಸ್‌ ವೆಲ್ಡಿಂಗ್‌ ಟ್ಯಾಂಕ್‌ಗೆ ತಗುಲಿ ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಗ್ಯಾರೇಜ್‌ ಸೇರಿ ಸುತ್ತ-ಮುತ್ತಲ ಹಲವು ಮನೆಗಳು, ನಿರ್ಮಾಣ ಹಂತದ ಕಟ್ಟಡಕ್ಕೆ ಹಾನಿಯಾಗಿದೆ.

ಗ್ಯಾರೇಜ್‌ನಲ್ಲಿ ದಟ್ಟ ಹೊಗೆ ಸಹಿತ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಎರಡು ವಾಹನಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿ : ಕೆಲ ದಿನಗಳ ಹಿಂದಷ್ಟೇ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟಗೊಂಡಿತ್ತು. ಈ ಘಟನೆ ಜನಮಾನಸದಲ್ಲಿ ಆಂತಕ ಮೂಡಿಸಿತ್ತು. ಇದೇ ಮಾದರಿಯಲ್ಲಿ ಗ್ಯಾರೇಜ್‌ ವೆಲ್ಡಿಂಗ್‌ ಟ್ಯಾಂಕ್‌ ದೊಡ್ಡ ಮಟ್ಟದಲ್ಲಿ ಸ್ಫೋಟಗೊಳ್ಳುತ್ತಿದ್ದಂತೆ ಸ್ಥಳದಲ್ಲಿದ್ದವರು ಬೆಚ್ಚಿಬಿದ್ದಿದ್ದಾರೆ. ಪ್ರತ್ಯಕ್ಷದರ್ಶಿ ಮಹಿಳೆಯೊಬ್ಬರು ಹೇಳುವ ಪ್ರಕಾರ, ಸಂಜೆ 6 ಗಂಟೆಗೆ ಗ್ಯಾರೇಜ್‌ನಲ್ಲಿ ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೆಲ ಕ್ಷಣಗಳ ಬಳಿಕ ಬೆಂಕಿ ಜೋರಾಗಿತ್ತು. ಆ ನಂತರ ದೊಡ್ಡ ಮಟ್ಟದಲ್ಲಿ ಸ್ಫೋಟಗೊಂಡಿತ್ತು. ಅದರಿಂದ ಅಕ್ಕ-ಪಕ್ಕದ ಮನೆಗಳ ಕಿಟಕಿ ಗಾಜುಗಳು ಹಾನಿಯಾಯಿತು. ಆರಂಭದಲ್ಲಿ ಗ್ಯಾರೇಜ್‌ನಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿತ್ತು ಎಂದು ಕೊಂಡೆವು. ಆದರೆ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿ ವೆಲ್ಡಿಂಗ್‌ ಟ್ಯಾಂಕ್‌ ಸ್ಫೋಟಗೊಂಡಿದೆ ಎಂದು ಹೇಳಿದಾಗ ನಿರಾಳವಾಯಿತು. ಗ್ಯಾ

ರೇಜ್‌ನಲ್ಲಿ ಗ್ಯಾಸ್‌ ವೆಲ್ಡಿಂಗ್‌ ಟ್ಯಾಂಕ್‌ ಸ್ಫೋಟಗೊಂಡು ಗ್ಯಾರೇಜ್‌ ಮಾಲೀಕ, ಕೆಲಸಗಾರ ಸೇರಿ ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ಮಾಗಡಿ ರಸ್ತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಿರೀಶ್‌, ಪಶ್ಚಿಮ ವಿಭಾಗದ ಡಿಸಿಪಿ.

 

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.