ಗೌರಿ ಹತ್ಯೆ ಪ್ರಕರಣ: ನಾಳೆ ಅರ್ಜಿ ವಿಚಾರಣೆ
Team Udayavani, Jun 29, 2018, 7:20 AM IST
ಬೆಂಗಳೂರು: ಗೌರಿಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮದ್ದೂರಿನ ಕೆ.ಟಿ.ನವೀನ್ ಕುಮಾರ್
ಅಲಿಯಾಸ್ ಹೊಟ್ಟೆ ಮಂಜನ ಜಾಮೀನು ಅರ್ಜಿ ವಿಚಾರಣೆಯನ್ನು 70ನೇ ಸಿಸಿಎಚ್ ನ್ಯಾಯಾಲಯ ಜೂ.30ಕ್ಕೆ ಮುಂದೂಡಿದೆ.
ಆರೋಪಿಗೆ ಜಾಮೀನು ನೀಡದಂತೆ ಲಿಖೀತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಿದ ಸರ್ಕಾರಿ ಅಭಿಯೋಜಕ ಟಿ.ಎಂ.ನರೇಂದ್ರ ಅವರು, ನವೀನ್ ಕುಮಾರ್ ಪ್ರಕರಣದಲ್ಲಿ ಭಾಗಿಯಾಗಿರುವುದು ಪ್ರಾಥಮಿಕ ಮಾಹಿತಿ ಮತ್ತು ಮೇಲ್ನೋಟಕ್ಕೆ ಸಾಬೀತಾಗಿದೆ. ಅಲ್ಲದೆ,ನವೀನ್ ಕುಮಾರ್ ಬಳಿಯಿದ್ದ ಗುಂಡುಗಳಿಗೂ ಗೌರಿ ಲಂಕೇಶ್ ದೇಹದಲ್ಲಿ ಪತ್ತೆಯಾದ ಗುಂಡುಗಳಿಗೂ ಸಾಮ್ಯತೆ ಇದೆ ಎಂದು ತಿಳಿದು ಬಂದಿದ್ದು, ಈ ಕುರಿತು ವಿಧಿ ವಿಜ್ಞಾನ ಪರೀಕ್ಷಾ ಕೇಂದ್ರದ ಅಧಿಕಾರಿಗಳು ವರದಿ ನೀಡಿದ್ದಾರೆ.
ದಾಖಲೆಗಳೆಲ್ಲವನ್ನೂ ಹಾಜರು ಪಡಿಸಲು ಕಾಲವಕಾಶ ನೀಡಬೇಕು ಎಂದು ಮನವಿ ಮಾಡಿದರು. ನ್ಯಾಯಾಲಯ
ಕಾಲಾವಕಾಶ ನೀಡಿ ಜೂ.30ಕ್ಕೆ ವಿಚಾರಣೆ ಮುಂದೂಡಿದೆ. ಈ ಮಧ್ಯೆ ಆರೋಪಿ ಪರ ವಕೀಲ ವೇದಮೂರ್ತಿ, ನವೀನ್ ಕುಮಾರ್ ಮಂಪರು ಪರೀಕ್ಷೆಗೆ ಒಪ್ಪಿದ್ದು, ತನಿಖಾಧಿಕಾರಿಗಳು ದಿನಾಂಕ ನಿಗದಿ ಮಾಡಿದರೆ ಅವರೊಟ್ಟಿಗೆ ಹೋಗಲು ಸಿದ್ಧವಾಗಿದ್ದಾನೆ ಎಂದು ಕೋರ್ಟ್ ಗಮನಕ್ಕೆ ತಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ