ಪೊಲೀಸ್‌ ಸರ್ಪಗಾವಲಲ್ಲಿ ಸಾರ್ವತ್ರಿಕ ಮುಷ್ಕರ


Team Udayavani, Jan 9, 2019, 9:02 AM IST

polioce.jpg

ಬೆಂಗಳೂರು: ಕಾರ್ಮಿಕರ ಸಾರ್ವತ್ರಿಕ ಮುಷ್ಕರದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಗರಾದ್ಯಂತ ಪೊಲೀಸ್‌ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು. ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ನೇತೃತ್ವದಲ್ಲಿ ನಾಲ್ವರು ಹೆಚ್ಚುವರಿ ಪೊಲೀಸ್‌ ಆಯುಕ್ತರು, 11 ಮಂದಿ ಡಿಸಿಪಿಗಳು, 60 ಕೆಎಸ್‌ಆರ್‌ಪಿ ಹಾಗೂ ಸಿಎಆರ್‌ ತುಕಡಿಗಳು, 900 ಮಂದಿ ಗೃಹ ರಕ್ಷಕ ದಳ, 270 ಹೊಯ್ಸಳ, 1,300 ಚೀತಾ ವಾಹನಗಳು ಸೇರಿ 15 ಸಾವಿರಕ್ಕೂ ಹೆಚ್ಚು ಮಂದಿ ಪೊಲೀಸರು ನಗರಾದ್ಯಂತ ಕರ್ತವ್ಯ ನಿರ್ವಹಿಸಿದರು.

ಮಂಗಳವಾರ ಮುಂಜಾನೆ 5.30ರಿಂದಲೇ ಎಲ್ಲ ವಲಯಗಳ ಡಿಸಿಪಿ, ಎಸಿಪಿ ಹಾಗೂ ಇನ್‌ಸ್ಪೆಕ್ಟರ್‌ಗಳು, ಹೊಯ್ಸಳ, ಚಿತಾ ವಾಹನಗಳ ಸಿಬ್ಬಂದಿ ಆಯಾ ಠಾಣಾ ವ್ಯಾಪ್ತಿಗಳಲ್ಲಿ ಗಸ್ತು ತಿರುಗಿ, ಸಾರ್ವಜನಿಕರಲ್ಲಿ ಧೈರ್ಯ ತುಂಬಿದರು. ಅಲ್ಲದೆ, ಬಲವಂತವಾಗಿ ಅಂಗಡಿ ಮುಂಗಟ್ಟು, ಖಾಸಗಿ ಸಂಸ್ಥೆಗಳನ್ನು ಮುಚ್ಚಿಸಲು ಯತ್ನಿಸಿದ ಕೆಲ ಕಿಡಿಗೇಡಿಗಳನ್ನು ವಶಕ್ಕೆ ಪಡೆದ ಪೊಲೀಸರು, ಬಳಿಕ ಎಚ್ಚರಿಕೆ ನೀಡಿ ಕಳುಹಿಸಿದರು.

ನಗರದ ಎಲ್ಲ ಎಟಿಎಂ ಕೇಂದ್ರಗಳು, ಬ್ಯಾಂಕ್‌ಗಳು, ಪೆಟ್ರೋಲ್‌ ಬಂಕ್‌ಗಳು, ಖಾಸಗಿ ಕಂಪನಿಗಳ ಮುಂದೆ ನಾಲ್ಕೈದು ಮಂದಿ ಪೊಲೀಸರು ಗಸ್ತಿನಲ್ಲಿದ್ದರು. ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳ ಸುತ್ತ-ಮುತ್ತ ಹತ್ತಾರು ಪೊಲೀಸರು ಗಸ್ತು ತಿರುಗುತ್ತಿದ್ದುದ್ದು ಕಂಡುಬಂತು. ವಿಧಾನಸೌಧ, ಸ್ವಾತಂತ್ರ್ಯ ಉದ್ಯಾನವನ, ಪುರಭವನ, ಕೆ.ಆರ್‌.ಮಾರುಕಟ್ಟೆ, ಶಾಂತಿನಗರ, ಸದಾಶಿವನಗರ, ಶೇಷಾದ್ರಿಪುರ, ಜೆ.ಸಿ.ರಸ್ತೆ, ಮಲ್ಲೇಶ್ವರ, ಯಶವಂತಪುರ ಸೇರಿ ನಗರದ ಪ್ರಮುಖ ಸ್ಥಳಗಳಲ್ಲಿ ರಸ್ತೆಯೂದಕ್ಕೂ ಪೊಲೀಸರ ಕಾವಲು ಕಂಡುಬಂತು.

ಮಾಲ್‍ಗೆ ಬರುವ ಪ್ರತಿ ಸಿಬ್ಬಂದಿಯ ಗುರುತಿನ ಚೀಟಿ ಪರಿಶೀಲಿಸಿ, ಪ್ರವೇಶ ಕಲ್ಪಿಸಲಾಗಿತ್ತು. ಗ್ರಾಹಕರ ಮೇಲೂ ನಿಗಾ ವಹಿಸಲಾಗಿತ್ತು. ಪ್ರತಿಭಟನಾನಿರತರು ಕಲ್ಲು ತೂರಾಟ ಮಾಡಬಹುದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಮಾಲ್‌ಗ‌ಳ ಮುಂಭಾಗ ನೆಟ್‌ ಕಟ್ಟಲಾಗಿತ್ತು.

ಕಲ್ಲು ತೂರಿದ ನಾಲ್ವರ ಬಂಧನ: ಯಶವಂತಪುರ, ಮಲ್ಲೇಶ್ವರ, ಶೇಷಾದ್ರಿಪುರ, ಬ್ಯಾಟರಾಯನಪುರ, ಚಿಕ್ಕಜಾಲ ಠಾಣೆಗಳ ವ್ಯಾಪ್ತಿಯಲ್ಲಿ ಕೆಲ ಕಿಡಿಗೇಡಿಗಳು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಬಸ್‌ಗಳ ಗಾಜುಗಳು ಸಂಪೂರ್ಣ ಹಾನಿಗಿಡಾದವು. ಈ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

ಕೆಂಪೇಗೌಡ ಬಸ್‌ ನಿಲ್ದಾಣ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ, ನಗರ ಬಸ್‌ ನಿಲ್ದಾಣಗಳು, ಎಪಿಎಂಸಿಯಲ್ಲಿ ಹೆಚ್ಚಿನ ಸಂಖ್ಯೆಯ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ಪೊಲೀಸರನ್ನು ನಿಯೋಜಿಸಲಾಗಿತ್ತು. ಮುಂಜಾನೆಯಿಂದಲೇ ಬಿಎಂಟಿಸಿ ಬಸ್‌ಗಳ ಸಂಚಾರ ವಿರಳವಾಗಿತ್ತು. ಪರಿಣಾಮ ಕೆಲ ಪ್ರಯಾಣಿಕರು ನಿಲ್ದಾಣಗಳಲ್ಲೇ ಕಾಲ ಕಳೆದರು. ಅಂತಹ ಸಂದರ್ಭದಲ್ಲಿ ಪೊಲೀಸರೇ ತಮ್ಮ ವಾಹನಗಳ ಮೂಲಕ ಪ್ರಯಾಣಿಕರನ್ನು ಕರೆದೊಯ್ಯುವ ಮೂಲಕ ನೆರವಾದರು.

ಸೆಲ್ಫಿ ಕ್ಲಿಕಿಸಿಕೊಂಡರು: ಸದಾ ಪ್ರಯಾಣಿಕರಿಂದ ತುಂಬಿರುತ್ತಿದ್ದ ಮೆಜೆಸ್ಟಿಕ್‌ನ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳು ಮಂಗಳವಾರ ಖಾಲಿ ಖಾಲಿಯಾಗಿದ್ದವು. ಹೀಗಾಗಿ ಬಸ್‌ಗಾಗಿ ಕಾಯುತ್ತಿದ್ದ ಯುವಕ, ಯುವತಿಯರು, ಕೆಲ ಪ್ರಯಾಣಿಕರು ಖಾಲಿ ನಿಲ್ದಾಣಗಳಲ್ಲಿ ಸೆಲ್ಫಿà ಕ್ಲಿಕಿಸಿಕೊಂಡು ಸಂಭ್ರಮಿಸಿದರು.

ವಾಟಾಳ್‌ ನಾಗರಾಜ್‌ ಬಂಧನ, ಬಿಡುಗಡೆ: ಕಾರ್ಮಿಕ ಸಂಘಟನೆಗಳ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಮೆಜೆಸ್ಟಿಕ್‌ನಲ್ಲಿ ಚಾಪೆ ಹಾಸಿಕೊಂಡು ಮಲಗಿ ಪ್ರತಿಭಟನೆ ನಡೆಸಿದರು. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ವಾಟಾಳ್‌ ನಾಗರಾಜ್‌ ಹಾಗೂ ಇತರರನ್ನು ವಶಕ್ಕೆ ಪಡೆದು ಕರೆದೊಯ್ದರು. ಈ ವೇಳೆ ಬುಧವಾರ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ನಡೆಯುವ ಮುಷ್ಕರದಲ್ಲಿ ಪಾಲ್ಗೊಳ್ಳುವುದಾಗಿ ವಾಟಾಳ್‌ ನಾಗರಾಜ್‌ ಹೇಳಿದರು.

ದುಬಾರಿ ಪ್ರಯಾಣ ದರ – ಪ್ರಕರಣ ದಾಖಲು: ಬಿಎಂಟಿಸಿ ಬಸ್‌ಗಳ ಸಂಚಾರ ವಿರಳವಾಗಿದ್ದರಿಂದ ಪ್ರಯಾಣಿಕರು ಖಾಸಗಿ ವಾಹನಗಳ ಮೊರೆ ಹೋದರು. ಇದನ್ನೇ ದುರುಪಯೋಗ ಪಡಿಸಿಕೊಂಡ ಖಾಸಗಿ ವಾಹನ ಚಾಲಕರು, ದುಬಾರಿ ಪ್ರಯಾಣ ದರ ವಸೂಲಿ ಮಾಡುತ್ತಿದ್ದರು. ಈ ಸಂಬಂಧ ಮೆಜೆಸ್ಟಿಕ್‌, ರೈಲು ನಿಲ್ದಾಣ ಸೇರಿ ಕೆಲ ಆಟೋ ನಿಲ್ದಾಣಗಳಲ್ಲಿ ಸಂಚಾರ ಪೊಲೀಸರನ್ನು ನಿಯೋಜಿಸಲಾಗಿತ್ತು. ನಿಗದಿತ ಪ್ರಯಾಣ ದರಕ್ಕಿಂತ ಹೆಚ್ಚು ಹಣ ಕೇಳುವ, ವಸೂಲಿ ಮಾಡುವ ಆಟೋ, ಕ್ಯಾಬ್‌ ಚಾಲಕರ ವಿರುದ್ಧ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದರು.

ಎಪಿಎಂಸಿ ಖಾಲಿ ಖಾಲಿ: ಕಾರ್ಮಿಕರ ಮುಷ್ಕರದ ಬಿಸಿ ಎಪಿಎಂಸಿಗೂ ತಟ್ಟಿತ್ತು. ಮುಂಜಾನೆ 4 ಗಂಟೆಗೆ ಆರಂಭವಾಗುತ್ತಿದ್ದ ಮಾರುಕಟ್ಟೆ ಮಂಗಳವಾರ ಅಪರಾಹ್ನ 12 ಗಂಟೆಯಾದರೂ ಗ್ರಾಹಕರಿಲ್ಲದೆ ಬಣಗುಡುತ್ತಿತ್ತು. ಕೂಲಿ ಕಾರ್ಮಿಕರು ಕೂಡ ಕೆಲಸಕ್ಕೆ ಗೈರಾಗಿದ್ದು, ವ್ಯಾಪಾರಿಗಳ ವಹಿವಾಟಿಗೆ ಭಾರೀ ಪೆಟ್ಟು ಬಿದ್ದಿತ್ತು. ಬೇರೆ ಜಿಲ್ಲೆಗಳಿಂದ ಹತ್ತಾರು ಲಾರಿಗಳಲ್ಲಿ ಬಂದಿದ್ದ ತರಕಾರಿ ಹಾಗೂ ದಿನಸಿ ವಸ್ತುಗಳನ್ನು ಕೆಳಗಿಳಿಸಲು ಕೂಲಿ ಕಾರ್ಮಿಕರಿಲ್ಲದೆ, ಲಾರಿಗಳು ನಿಂತಲ್ಲೇ ನಿಂತಿದ್ದು ಕಂಡು ಬಂತು.

ಓಂ ಶಕ್ತಿ ಭಕ್ತರಿಗೆ ಸಂಕಷ್ಟ: ಸಾರ್ವತ್ರಿಕ ಮುಷ್ಕರದ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಿಂದ ಹೊರಡಬೇಕಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದರ ಪರಿಣಾಮ ನೆರೆ ಜಿಲ್ಲೆಗಳಿಗೆ ಹೊರಡಬೇಕಿದ್ದ ಪ್ರಯಾಣಿಕರ ಜತೆಗೆ ತಮಿಳುನಾಡಿನ ಓಂ ಶಕ್ತಿ ದೇವಾಲಯಕ್ಕೆ ಹೋಗಬೇಕಿದ್ದ ಭಕ್ತಾಧಿಗಳು ನಿಲ್ದಾಣದಲ್ಲೇ ಕಾಲ ಕಳೆಯುವಂತಾಯಿತು.

ಉಚಿತ ಕ್ಯಾಬ್‌ ಸೇವೆ ಕಲ್ಪಿಸಿದ ಬಟ್ಟೆ ವ್ಯಾಪಾರಿ: ವಿಜಯಪುರದಿಂದ ಬೆಂಗಳೂರಿಗೆ ಮಗುವಿನ ಕಣ್ಣಿನ ಚಿಕಿತ್ಸೆಗಾಗಿ ಬಂದಿದ್ದ ಕುಟುಂಬವೊಂದು ಸರಿಯಾದ ಸಮಯಕ್ಕೆ ಬಸ್‌ ಸಿಗದೆ ಪರದಾಡಬೇಕಾಯಿತು. ಮುಷ್ಕರದ ಮಾಹಿತಿ ತಿಳಿಯದ ಕುಟುಂಬ ಬಣಗುಡುತ್ತಿದ್ದ ಬಸ್‌ ನಿಲ್ದಾಣ ಕಂಡು ಆತಂಕಗೊಂಡಿತ್ತು. ಇದನ್ನು ಗಮನಿಸಿದ ಬಟ್ಟೆ ವ್ಯಾಪಾರಿ ಸಭಾಪತಿ ಎಂಬುವವರು ಕೂಡಲೇ ಉಚಿತ ಕ್ಯಾಬ್‌ ಸೇವೆ ಒದಗಿಸಿ ಮಾನವೀಯತೆ ಮೆರೆದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.