ನಿಮ್ಮ ವಾಹನ ಫ್ಯಾನ್ಸಿ ನಂಬರ್ ಪ್ಲೇಟ್ ಹೊಂದಿದೆಯೇ? ಹಾಗಾದರೆ ಇದನ್ನು ಓದಿ

ನೂತನ ಕೇಂದ್ರ ಮೋಟಾರು ವಾಹನಗಳ ನಿಯಮಾನುಸಾರ ಫ್ಯಾನ್ಸಿ ನಂಬರ್‌ ಪ್ಲೇಟ್‌ ಅಲವಡಿಸಿದ್ದರೆ ದಂಡ

Team Udayavani, Dec 24, 2019, 11:27 PM IST

Fancy-Number-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೆಲ ತಿಂಗಳುಗಳ ಹಿಂದೆಯಷ್ಟೇ ಪರಿಷ್ಕೃತ ಮೋಟಾರು ವಾಹನ ನಿಯಮ ಜಾರಿ ಮಾಡಿದ್ದ ಕೇಂದ್ರ ಸರಕಾರ ಇದೀಗ ಮತ್ತೊಂದು ನೂತನ ನಿಯಮ ಜಾರಿ ಮಾಡಿದೆ. ಈ ನಿಯಮಗಳ ಅನುಸಾರ ವಾಹನಗಳಲ್ಲಿ ಫ್ಯಾನ್ಸಿ ನಂಬರ್‌ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಲು ಅವಕಾಶ ಇಲ್ಲ.

ತಮ್ಮ ವಾಹನಗಳಲ್ಲಿ ಫ್ಯಾನ್ಸಿ ನಂಬರ್‌ ಪ್ಲೇಟ್ ಗಳನ್ನು ಹಾಕಿಕೊಂಡಿರುವವರಿಗೆ 500 ರೂ. ದಂಡ ವಿಧಿಸಲಾಗುತ್ತದೆ. ಆರ್.ಟಿ.ಒ. ನಿಯಮಗಳಿಗೆ ವಿರುದ್ಧವಾಗಿರುವ ಈ ರೀತಿಯ ಫ್ಯಾನ್ಸಿ ನಂಬರ್ ಪ್ಲೇಟ್ ಗಳ ತೆರವು ಕಾರ್ಯಾಚರಣೆಯನ್ನು ಡಿ. 27ರಿಂದ ತೀವ್ರಗೊಳಿಸಲಾಗುವುದು ಎಂದು ಸಾರಿಗೆ ಇಲಾಖೆ ಆಯುಕ್ತ ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿನ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಿಯಮಗಳ ಪ್ರಕಾರವೇ ನೋಂದಣಿ ಫ‌ಲಕಗಳಲ್ಲಿ ನಿಗದಿತ ಅಳತೆಯ ಅಕ್ಷರಗಳು ಮತ್ತು ಅಂಕಿಗಳನ್ನು ಬರೆಸುವುದು ಕಡ್ಡಾಯವಾಗಿದೆ. ಆದರೆ, ಕೆಲವರು ನಂಬರ್‌ ಪ್ಲೇಟ್‌ಗಳಲ್ಲಿ  ಮನಸೋ ಇಚ್ಛೆ ಸಂಘ-ಸಂಸ್ಥೆಗಳ ಹೆಸರು, ಲಾಂಛನ, ಚಿಹ್ನೆಗಳನ್ನು ಹಾಕಿಕೊಂಡು ನಿಯಮ ಉಲ್ಲಂಘಿಸುತ್ತಿದ್ದಾರೆ.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗದ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ದೂರುಗಳಿವೆ. ಅನಧಿಕೃತ ನಂಬರ್‌ ಪ್ಲೇಟ್‌ಗಳ ತೆರವು ಕಾರ್ಯಾಚರಣೆಗೆ ಹೈಕೋರ್ಟ್‌ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.” ಎಂದು ಅವರು ಹೇಳಿದರು.

‘ಕೆಲ ವಾಹನ ಮಾಲಕರು ಅನುಮತಿ ಪಡೆಯದೆಯೇ ನಂಬರ್‌ ಪ್ಲೇಟ್‌ಗಳಲ್ಲಿ ಸರಕಾರಿ ಲಾಂಛನ ಬಳಸುತ್ತಿರುವುದು ಕಂಡು ಬಂದಿದೆ. ಸರಕಾರದ ಲಾಂಛನ ಅಳವಡಿಸಲು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಬೇಕಿದೆ. ಕೆಲ ಸರಕಾರಿ ವಾಹನಗಳು ಮತ್ತು ಅತಿ ಗಣ್ಯರ ವಾಹನಗಳ ನಂಬರ್‌ ಪ್ಲೇಟ್‌ಗಳಲ್ಲಿ ಪದನಾಮ, ಲಾಂಛನ ಬಳಸಲು ಅನುಮತಿ ಇದೆ,” ಎಂದು ತಿಳಿಸಿದರು.

‘’ಹಲವು ವಾಹನ ಮಾಲೀಕರು ನೋಂದಣಿ ಸಂಖ್ಯೆಗಳನ್ನು ನಿಯಮಾನುಸಾರ ಅಳವಡಿಸಿಕೊಳ್ಳದೇ, ಕೆ.ಎ. ಬದಲು ಕರ್ನಾಟಕ, ಆಲಂಕಾರಿಕ ಅಕ್ಷರಗಳನ್ನು ನಾನಾ ಬಣ್ಣ, ಶೈಲಿಯಲ್ಲಿ ಬರೆಸುವುದು, ಚಿತ್ರಗಳನ್ನು ಅಂಟಿಸುವುದು, ಫ‌ಲಕಗಳ ಮೇಲೆ ಮತ್ತು ಕೆಳಗೆ ಹಸಿರು, ಕೆಂಪು ಪಟ್ಟಿಯನ್ನು ಹಾಕಿಸುವ ಮೂಲಕ ನಿಯಮ ಉಲ್ಲಂಘಿಸಲಾಗುತ್ತಿದೆ.

ಇಂಥ ವಾಹನಗಳ ಫ‌ಲಕಗಳ ತೆರವಿಗೆ ವಿಶೇಷ ತಂಡಗಳನ್ನು ರಚಿಸಲಾಗುತ್ತಿದೆ. ವಾಹನಗಳ ಗಾಜು ಮತ್ತು ಕವಚದ ಮೇಲೆಯೂ ಸಂಘ-ಸಂಸ್ಥೆಗಳ ಹೆಸರು, ಪದನಾಮ ಬರೆಸಿಕೊಳ್ಳುವುದು ಜಾಹೀರಾತು ಎನಿಸಿಕೊಳ್ಳುತ್ತದೆ. ಈ ರೀತಿ ಪ್ರದರ್ಶನಕ್ಕೆ ಸಂಬಂಧಪಟ್ಟ ಇಲಾಖೆಗಳಿಗೆ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.” ಎಂದು ಅವರು ವಿವರಿಸಿದರು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.