ಬನ್ನೇರುಘಟ್ಟ ಉದ್ಯಾನಕ್ಕೆ ಬರಲಿದೆ ಜಿರಾಫ


Team Udayavani, Mar 11, 2018, 11:18 AM IST

Giraffe.jpg

ಆನೇಕಲ್‌: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹಲವು ವರ್ಷಗಳಿಂದ ನಿರೀಕ್ಷೆಯಲ್ಲಿದ್ದ ವಿಶೇಷ ಅತಿಥಿ ಜಿರಾಫೆ ಆಗಮನವಾಗಲಿದೆ. ಇದರಿಂದ ಇಡೀ ಉದ್ಯಾನವನಕ್ಕೆ ಮತ್ತಷ್ಟು ಮೆರೆಗು ಬರಲಿದ್ದು ಪ್ರವಾಸಿಗರನ್ನು ಆಕರ್ಷಿಸಲಿದೆ.
ಇದೇ ತಿಂಗಳ 13 ರಂದು ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಿಂದ ಹೆಣ್ಣು ಜಿರಾಫೆಯನ್ನು ತರಸಿ ಕೊಳ್ಳಲಾಗುತ್ತಿದೆ.

ಮೈಸೂರು ಮೃಗಾಲಯದಲ್ಲಿನ ಮೂರು ವರ್ಷ ವಯಸ್ಸಿನ ಬಬ್ಲಿ ಉದ್ಯಾನವನಕ್ಕೆ ಆಗಮಿಸುತ್ತಿರುವ ವಿಶೇಷ ಅತಿಥಿ. ಕೃಷ್ಣರಾಜ ಮತ್ತು ಖುಷಿ ಜಿರಾಫೆಗೆ ಜನಿಸಿದ ಮರಿ ಇದಾಗಿದೆ. ಉದ್ಯಾನವನದ ಮುಖ್ಯದ್ವಾರದ ಎಡಭಾಗದಲ್ಲಿ ಸುಮಾರು ಎರಡೂವರೆ ಎಕರೆ ವಿಸ್ತೀರ್ಣದ ಬಯಲು ಆಲಯದಲ್ಲಿ ಜಿರಾಫೆ ಬಿಡಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಸುತ್ತಲು ಕಂದಕದ ಜೊತೆಗೆ ಬೇಲಿ ಹಾಕಲಾಗಿದೆ. ರಾತ್ರಿ ವೇಳೆ ವಿಶ್ರಾಂತಿ ಪಡೆಯಲು ಸುಮಾರು 40 ಅಡಿ ಎತ್ತರದ ಹೊಲ್ಡಿಂಗ್‌ ರೂಮ್‌ ಸಹ ನಿರ್ಮಾಣ ಮಾಡಿ ಶುಚಿಗೊಳಿಸಲಾಗುತ್ತಿದೆ. ಕಳೆದ ಐದು ವರ್ಷಗಳಿಂದ ನಾಲ್ಕು ಅಧಿಕಾರಿಗಳು ಜಿರಾಫೆಯನ್ನು ತರಲು ಸತತ ಪ್ರಯತ್ನ ನಡೆಸುತ್ತ ಬಂದಿದ್ದರು. ಮೈಸೂರು, ಆಂಧ್ರಪ್ರದೇಶ ಅಲ್ಲದೇ
ವಿದೇಶದಿಂದಲೂ ಜಿರಾಫೆ ತರುವ ಪ್ರಯತ್ನ ನಡೆಸಿ ವಿಫ‌ಲವಾಗಿದ್ದರು. ವಿದೇಶದಿಂದ ಜಿರಾಫೆ ತರಲು ವಿಮಾನದ ವೆಚ್ಚವೇ ಸುಮಾರು 1 ಕೋಟಿ ರೂ. ತಗಲುತಿತ್ತು. ಇದರಿಂದ ವಿದೇಶದಿಂದ ತರುವ ಪ್ರಯತ್ನ ವಿಫ‌ಲವಾಯಿತು.

ಸದ್ಯ ಮೃಗಾಲಯ ಪ್ರಾಧಿಕಾರಕ್ಕೆ ರವಿ ಸದಸ್ಯ ಕಾರ್ಯದರ್ಶಿಯಾದ ಬಳಿಕ ಜಿರಾಫೆ ತರುವ ಹಾದಿ ಸುಲಭವಾಯಿತು. ಕಳೆದ ಮೂರು ತಿಂಗಳ ಹಿಂದೆಯೇ ಮೈಸೂರು ಮೃಗಾಲಯದಿಂದ ಜಿರಾಫೆ ನೀಡುವ ಹಸಿರು ನಿಶಾನೆ ಸಿಕ್ಕ ಬಳಿಕ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿನ ಇಬ್ಬರ ಸಿಬ್ಬಂದಿಯನ್ನು ಮೈಸೂರು ಮೈಗಾಲಯಕ್ಕೆ ಕಳುಹಿಸಿ ಅವರಿಗೆ ತರಬೇತಿ ನೀಡಿ ಪ್ರಾಣಿ ಜೊತೆ ಬೆರೆಯುವಂತೆ ಮಾಡಲಾಗಿದೆ. 

ಬನ್ನೇರುಘಟ್ಟ ಉದ್ಯಾನವನದ ಕಾರ್ಯನಿರ್ವಾಹಕ ನಿದೇರ್ಶಕ ಗೋಕುಲ್‌ ಉದಯವಾಣಿ ಯೊಂದಿಗೆ ಮಾತನಾಡಿ, ಜಿರಾಫೆ ತರಿಸಿಕೊಳ್ಳುವ ಪ್ರಯತ್ನ ಹಲವು ವರ್ಷಗಳಿಂದ ಇತ್ತು. ಸದ್ಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರ ಸಹಕಾರದಿಂದ ಒಂದು ಜಿರಾಫೆಯನ್ನು ಇದೇ 13 ರಂದು ತರಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
 
ಬಬ್ಲಿ ಮತ್ತು ಮೇರಿ ಎಂಬ ಎರಡು ಜಿರಾಫೆಗಳನ್ನು ಮೈಸೂರಿನಿಂದ ಬನ್ನೇರುಘಟ್ಟಕ್ಕೆ ನೀಡಲು ಅನುಮತಿ ನೀಡಲಾಗಿದೆ. ಸದ್ಯ ಬಬ್ಬಿ ಜಿರಾಫೆ ತರಿಸಿಕೊಳ್ಳಲಾಗುತ್ತಿದೆ. ನಂತರ ಕೆಲ ದಿನಗಳ ಬಳಿಕ ಮೇರಿಯನ್ನು ತರಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಉದ್ಯಾನವನದ ವೈದ್ಯಾಧಿಕಾರಿ ಉಮಾಶಂಕರ್‌ ಮಾತನಾಡಿ, ನಮ್ಮಲ್ಲಿದ್ದ ಶಂಕರ ಮತ್ತು ಬಸವ ಎಂಬ ಇಬ್ಬರನ್ನು ಮೈಸೂರಿಗೆ ಕಳುಹಿಸಿ ತರಬೇತಿ ಕೊಡಿಸಲಾಗಿದೆ. ಹಾಗೆ ಇಲ್ಲಿಗೆ ಬರುತ್ತಿರುವ ಪ್ರಾಣಿಗಳೊಂದಿಗೆ ಅವರು ಹೊಂದಿಕೊಂಡಿದ್ದಾರೆ. ಇದರಿಂದ ಪ್ರಾಣಿಗೆ ಹೊಸ ಜಾಗವಾದರೂ ಜಿರಾಫೆ ಪಾಲಕರು ಮಾತ್ರ ಹಳಬರಾಗಿರುತ್ತಾರೆ ಎಂದರು. 

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.