ನಗರ ಜಿ.ಪಂ ಆಸ್ತಿಗೂ ಜಿಐಎಸ್‌


Team Udayavani, Jun 28, 2018, 3:16 PM IST

blore-1.jpg

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಎಲ್ಲ ಆಸ್ತಿಗಳನ್ನು ಭೌಗೋಳಿಕ ಮಾಹಿತಿ ಪದ್ಧತಿ (ಜಿಐಎಸ್‌) ಅಡಿಯಲ್ಲಿ ತರುವ ಬಿಬಿಎಂಪಿ ಕ್ರಮ ಯಶಸ್ವಿಯಾಗಿ ರುವ ಬೆನ್ನಲ್ಲೇ, ಬೆಂಗಳೂರು ನಗರ ಜಿಲ್ಲಾ
ಪಂಚಾಯಿತಿ ಕೂಡ ಇದೇ ಮಾದರಿ ಅನುಸರಿಸಲು ಸಿದ್ಧತೆ ನಡೆಸಿದೆ.

ಜಿಐಎಸ್‌ ಅನುಷ್ಠಾನದ ನಂತರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಾಗಿತ್ತು. ಹೀಗಾಗಿ ತೆರಿಗೆ ಸಂಗ್ರಹದಲ್ಲಿ ತೀರಾ ಕಳಪೆ ಪ್ರದರ್ಶನ ತೋರುತ್ತಿರುವ ನಗರ ಜಿಲ್ಲೆಯ ತಾಲೂಕುಗಳ ಆಯ್ದ ಗ್ರಾಮ ಪಂಚಾಯಿತಿಗಳನ್ನು ಈ ಪದ್ಧತಿ ವ್ಯಾಪ್ತಿಗೆ ತರಲು ಜಿ.ಪಂ ನಿರ್ಧರಿಸಿದೆ. 

ನಗರ ಜಿ.ಪಂ ವ್ಯಾಪ್ತಿಯಲ್ಲಿ 96 ಗ್ರಾ.ಪಂಗಳಿದ್ದು, ದಾಖಲೆಗಳ ಪ್ರಕಾರ 5,64,926 ಆಸ್ತಿಗಳಿವೆ. ಆದರೆ ಈ ಪೈಕಿ ತೆರಿಗೆ ಪಾವತಿ ಆಗುತ್ತಿರುವುದು 1,35,803 ಆಸ್ತಿಗಳಿಂದ ಮಾತ್ರ. ಅಂದರೆ, ಆಸ್ತಿ ತೆರಿಗೆ ಸಂಗ್ರಹ ಶೇ.25ರಷ್ಟೂ ಇಲ್ಲ. ಕಾರಣ, ತೆರಿಗೆ ಜಾಲದಿಂದ ತಪ್ಪಿ ಹೋಗಿರುವ ಭೂಮಿ ಅಥವಾ ಆಸ್ತಿಗಳನ್ನು ಜಿಐಎಸ್‌ ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ.
 
ಮೊದಲ ಹಂತದಲ್ಲಿ ಬೆಂಗಳೂರು ಉತ್ತರ, ದಕ್ಷಿಣ, ಪೂರ್ವ ಹಾಗೂ ಆನೇಕಲ್‌ ತಾಲೂಕಿನ 25 ಗ್ರಾ.ಪಂಗಳನ್ನು ಜಿಐಎಸ್‌ ವ್ಯಾಪ್ತಿಗೆ ತರಲಾಗುತ್ತಿದೆ. ಈ ಪ್ರಯತ್ನ ಯಶಸ್ವಿ ಯಾದರೆ ಎಲ್ಲ ಪಂಚಾಯಿತಿಗಳಲ್ಲೂ ವ್ಯವಸ್ಥೆ ಜಾರಿಗೊಳಿಸುವುದಾಗಿ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

ವ್ಯವಸ್ಥೆ ಜಾರಿಗೆ ಮೊದಲು ಗ್ರಾ.ಪಂ ವ್ಯಾಪ್ತಿಯ ಗಣಕೀಕೃತ ಆಸ್ತಿ ನಕ್ಷೆ ರೂಪಿಸಿ, ಅದರಂತೆ ಪ್ರತಿಯೊಂದು ಆಸ್ತಿಯ ಮಾಹಿತಿಯನ್ನೂ ಡಿಜಿಟಲೀಕರಣ ಮಾಡಲಾಗುತ್ತದೆ. ಜತೆಗೆ ಜಿಪಿಎಸ್‌ ಆಧಾರಿತ ಭಾವಚಿತ್ರದೊಂದಿಗೆ ಆಸ್ತಿ ಗುರುತಿಸಲಾಗುತ್ತದೆ. ಹಾಗೇ, ಸರ್ಕಾರದಿಂದ ಮಂಜೂರಾದ ನಿವೇಶನಗಳ ವಿವರ, ಒಂದೊಮ್ಮೆ ಅಲ್ಲಿ ಕಟ್ಟಡ ನಿರ್ಮಾಣವಾಗಿದ್ದರೆ ನಿರ್ಮಾಣದ ದಿನಾಂಕ, ಆಸ್ತಿ ಮಾಲೀಕರ ಮತ್ತು ಪರಿವರ್ತಿತ ಕೃಷಿ ಭೂಮಿ ಮಾಹಿತಿ, ಕಟ್ಟಡದ ಚೆಕ್‌ಬಂದಿಗಳ ಸಂಪೂರ್ಣ ವಿವರ ಕೂಡ ದೊರೆಯಲಿದೆ. ಅಷ್ಟೇ ಅಲ್ಲ, ಭೂ ಮಾಲೀಕರು ಪಾವತಿಸಬೇಕಿರುವ ಬಾಕಿ
ತೆರಿಗೆ ವಿವರ ಕೂಡ ಲಭ್ಯವಾಗಲಿದೆ. 

ಜಿಐಎಸ್‌ ವ್ಯಾಪ್ತಿಗೆ ಬರಲಿರುವ ಗ್ರಾ.ಪಂಗಳು
ಬೆಂಗಳೂರು ಉತ್ತರ: ಚಿಕ್ಕಬಾಣಾವಾರ, ದಾಸನಪುರ, ದೊಡ್ಡಜಾಲ, ಚಿಕ್ಕಜಾಲ, ಸಾತನೂರು, ಕಡಬಗೆರೆ, ರಾಜಾನುಕುಂಟೆ, ಸಿಂಗನಾಯಕನಹಳ್ಳಿ, ಚಿಕ್ಕಬಿದರಕಲ್ಲು
ಬೆಂಗಳೂರು ದಕ್ಷಿಣ: ಸೋಮನಹಳ್ಳಿ, ರಾಮೋಹಳ್ಳಿ, ಚೋಳನಾಯಕನಹಳ್ಳಿ, ಕುಂಬಳಗೋಡು 
ಬೆಂಗಳೂರು ಪೂರ್ವ: ಅವಲಹಳ್ಳಿ, ಶೀಗೆಹಳ್ಳಿ, ಕಣ್ಣೂರು, ಬಿದರಹಳ್ಳಿ, ದೊಡ್ಡಗುಬ್ಬಿ ಆನೇಕಲ್‌ ತಾಲೂಕು: ಮಂಟಪ, ಹೆನ್ನಾಗರ, ಬಿದರಗುಪ್ಪೆ, ಶಾಂತಿಪುರ, ಹುಸ್ಕೂರು, ನೆರಳೂರು ಮತ್ತು ದೊಮ್ಮಸಂದ್ರ

ಭೌಗೋಳಿಕ ಮಾಹಿತಿ ಪದ್ಧತಿ ಜಾರಿಯಿಂದ ಪಂಚಾಯತಿ ವ್ಯಾಪ್ತಿಯ ಸರ್ಕಾರಿ ಆಸ್ತಿಗಳು ಒತ್ತುವರಿ ಯಾಗದಂತೆ ತಡೆಯಲು ಸಾಧ್ಯವಿದೆ. ಜಿ.ಪಂ ಆಸ್ತಿ ಕಬಳಿಕೆಯಾಗಿರುವುದು ಸಹ ಇದರಿಂದ ತಿಳಿಯಲಿದೆ. ಅಲ್ಲದೆ, ಜಿ.ಪಂ ಆಸ್ತಿ, ಕಟ್ಟಡಗಳು, ಸೇರಿ ಇನ್ನಿತರ ಮಾಹಿತಿ ಸುಲಭವಾಗಿ ಲಭ್ಯವಾಗಲಿದೆ. ತೆರಿಗೆ ಸಂಗ್ರಹ ವೃದ್ಧಿಗೂ ಜಿಐಎಸ್‌ ಸಹಕಾರಿ.
ಎಂ.ಎಸ್‌.ಅರ್ಚನಾ, ಬೆಂಗಳೂರು ನಗರ ಜಿ.ಪಂ ಸಿಇಒ

ಐದು ವರ್ಷಗಳಲ್ಲಿ ಗ್ರಾಮ ಪಂಚಾಯಿತಿಗಳಿಂದ ಶೇ.24ರಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದೆ. ಇನ್ನೂ ಶೇ.76ರಷ್ಟು ಆಸ್ತಿಗಳ ಮಾಲೀಕರು ತೆರಿಗೆ ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಜಿಐಎಸ್‌ ಆಧಾರಿತ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆ ಜಾರಿಗೊಳಿಸಲು ಮುಂದಾಗಿದ್ದೇವೆ.
ಕೆ.ಜಿ.ಜಗದೀಶ್‌, ಸಹಾಯಕ ಯೋಜನಾಧಿಕಾರಿ

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.