ರಸ್ತೆ ಗುಂಡಿ ಮುಚ್ಚಿದ ವರದಿ ಕೊಡಿ
Team Udayavani, Jul 10, 2019, 3:04 AM IST
ಬೆಂಗಳೂರು: ನಗರದ ರಸ್ತೆ ಗುಂಡಿಗಳ ಸ್ಥಿತಿಗತಿ ಹಾಗೂ ಅವುಗಳನ್ನು ಮುಚ್ಚಲು ಕೈಗೊಂಡಿರುವ ಕ್ರಮಗಳ ಬಗ್ಗೆ ಎರಡು ವಾರದಲ್ಲಿ ವರದಿ ಸಲ್ಲಿಸುವಂತೆ ಹೈಕೋರ್ಟ್ ಮಂಗಳವಾರ ಬಿಬಿಎಂಪಿಗೆ ನಿರ್ದೇಶನ ನೀಡಿದೆ.
ಈ ಕುರಿತು ಕೋರಮಂಗಲದ ವಿಜಯ್ ಮೆನನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್. ಓಕಾ ಹಾಗೂ ನ್ಯಾ. ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬಿಬಿಎಂಪಿಗೆ ಈ ನಿರ್ದೇಶನ ನೀಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ “7 ತಿಂಗಳಿನಿಂದ ಬಿಬಿಎಂಪಿ ರಸ್ತೆ ಗುಂಡಿಗಳ ಸ್ಥಿತಿಗತಿ ಕುರಿತು ವರದಿ ಸಲ್ಲಿಸಿಲ್ಲ,. ಬೆಂಗಳೂರಿನ ರಸ್ತೆಗಳು ಗುಂಡಿಗಳಿಂದ ಹಾಳಾಗಿದ್ದು, ವಾಹನ ಸವಾರರು ಓಡಾಡಲು ಸಾಧ್ಯವಿಲ್ಲದಂತಹ ಸ್ಥಿತಿ ಇದೆ ಎಂದರು.
ಆಗ ಪಾಲಿಕೆ, ರಸ್ತೆ ಗುಂಡಿಗಳನ್ನು ಮುಚ್ಚಲು ಯಾವ ಪದ್ಧತಿ ಅನುಸರಿಸುತ್ತಿದ್ದೀರಾ? ಎಲ್ಲೆಲ್ಲಿ ಗುಂಡಿಗಳಿವೆ ಎಂದು ಗುರುತಿಸಲಾಗಿದೆ? ಆ ಬಗ್ಗೆ ವಿವರ ನೀಡಿ ಎಂದು ಕೇಳಿತು. ಗುಂಡಿ ರಹಿತ ರಸ್ತೆಗಳನ್ನು ಬಯಸುವುದು ನಾಗರೀಕರ ಹಕ್ಕು.
ಅಂತೆಯೇ ರಸ್ತೆ ಗುಂಡಿಗಳಿಂದಾಗಿ ಅಪಘಾತಗಳು ಸಂಭವಿಸಿ ತೊಂದರೆ ಸಿಲುಕಿದವರಿಗೆ ಪರಿಹಾರವನ್ನೂ ಸಹ ನೀಡಬೇಕಾಗುತ್ತದೆ ಎಂದು ನ್ಯಾಯಪೀಠ ಮೌಖೀಕವಾಗಿ ಅಭಿಪ್ರಾಯಪಟ್ಟಿತು. ಅಲ್ಲದೇ ರಸ್ತೆ ಗುಂಡಿಗಳನ್ನು ಮುಚ್ಚಲು ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ವರದಿ ಕೊಡಿ, ಎಂದು ಹೇಳಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ