ಹೆಬ್ಬಾಳದ ಕಾಮಗಾರಿಗಳಿಗೆ “ಐಡಿಯಾ’ ಕೊಡಿ
Team Udayavani, Jul 17, 2019, 3:08 AM IST
ಬೆಂಗಳೂರು: ನಗರದ ಹಲವು ಭಾಗಗಳಲ್ಲಿ ಈಗಾಗಲೇ ಕಾಮಗಾರಿಗಳು ಸ್ಪರ್ಧೆಗೆ ಇಳಿದಂತೆ ಪ್ರಾರಂಭವಾಗಿವೆ. ಹೆಬ್ಬಾಳವನ್ನು (ಹೆಬ್ಬಾಳ ಜಂಕ್ಷನ್)ಕೇಂದ್ರೀಕರಿಸಿದಂತೆ ಮೆಟ್ರೋ ಮಾರ್ಗ, ಸಬ್ಅರ್ಬನ್ ರೈಲುನಿಲ್ದಾಣ, ಬಿಎಂಟಿಸಿ ಡಿಪೋ ಘಟಕ ಮತ್ತು ರಸ್ತೆ ವಿಸ್ತೀರ್ಣದ ಸೇರಿದಂತೆ ಹಲವು ಕಾಮಗಾರಿಗಳು ಪ್ರಾರಂಭವಾಗಲಿದೆ. ಜನರ ಸಹಭಾಗಿತ್ವ, ಅಧಿಕಾರಿಗಳ ಸಮನ್ವಯ ಸಾಧಿಸಲು ಸಿಟಿಜನ್ ಫಾರ್ ಸಸ್ಟೇನೆಬಿಲಿಟಿ ಸಂಸ್ಥೆ “ಎ ಬೆಟರ್ ಹೆಬ್ಬಾಳ’ ಆಂದೋಲನದ ಮೂಲಕ ಸಾರ್ವಜನಿಕರಿಂದ “ಐಡಿಯಾ’ ಆಹ್ವಾನಿಸಿದೆ.
ಇತ್ತೀಚಿನ ದಿನಗಳಲ್ಲಿ ಇಲಾಖೆಗಳ ಅಧಿಕಾರಿಗಳ ನಡುವೆ ಸಮನ್ವಯ ಕೊರತೆಯಿಂದ ಹಲವು ಯೋಜನೆಗಳು ಹಳ್ಳ ಹಿಡಿದಿವೆ. ಈಗ ಒಂದೇ ಪ್ರದೇಶದಲ್ಲಿ ನಾಲ್ಕರಿಂದ ಐದು ಕಾಮಗಾರಿಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಇಲಾಖೆಯು ಅಧಿಕಾರಿಗಳು ಹೇಗೆ ಸಮನ್ವಯ ಸಾಧಿಸುತ್ತಾರೆ ಎನ್ನುವ ಪ್ರಶ್ನೆ ಸಹಜ. ಈ ನಿಟ್ಟಿನಲ್ಲಿ “ಸಿಟಿಜನ್ ಫಾರ್ ಸಸ್ಟೇನೆಬಿಲಿಟಿ’ ಸಂಸ್ಥೆ ಹೆಬ್ಬಾಳದಲ್ಲಿ ನಡೆಯಲಿರುವ ಯೋಜನೆಗಳಿಗೆ ಜನ ಮತ್ತು ವಿವಿಧ ಇಲಾಖೆಗಳ ನಡುವೆ ಅಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಲು, ಸ್ಪರ್ಧೆ ಮತ್ತು ಚರ್ಚೆಗಳನ್ನು ಪ್ರಾರಂಭಿಸಿದೆ.
ಸಿಟಿಜನ್ ಫಾರ್ ಸಸ್ಟೇನೆಬಿಲಿಟಿ ಸಂಸ್ಥೆ “ಎ ಬೆಟರ್ ಹೆಬ್ಬಾಳ’ ವಿನ್ಯಾಸ ಮತ್ತು ಆಲೋಚನೆ ಎನ್ನುವ ಆಂದೋಲನ ಪ್ರಾರಂಭಿಸಿದ್ದು, ಸಾರ್ವಜನಿಕರಿಂದ “ಐಡಿಯಾ’ ಆಹ್ವಾನಿಸಿದೆ. ಜು. 21ರವರೆಗೆ ಸಂಸ್ಥೆಯ ವೆಬ್ಸೈಟ್ https://www.cifos.org/events/abetterhebbal ಗೆ ನೊಂದಾಯಿಸಿಕೊಳ್ಳಬಹುದು. ನೊಂದಾಯಿಸಿಕೊಂಡವರು ಆ.18ರ ಒಳೆಗೆ ಹೆಬ್ಬಾಳದಲ್ಲಿ ನಡೆಯಲಿರುವ ಕಾಮಗಾರಿಗಳ ಬಗ್ಗೆ ತಮ್ಮ ಆಲೋಚನೆ ಮತ್ತು ಸಲಹೆಗಳನ್ನು ಹಂಚಿಕೊಳ್ಳಬಹುದು. ಉತ್ತಮ ಆಲೋಚನೆ ಕಳುಹಿಸುವ 10ಜನರನ್ನು ಸಿಟಿಜನ್ ಫಾರ್ ಸಸ್ಟೇನೆಬಿಲಿಟಿ ಸಂಸ್ಥೆ ಆಯ್ಕೆ ಮಾಡಲಿದ್ದು, ಇವರಲ್ಲಿ ಅತ್ಯುತ್ತಮ ಆಲೋಚನೆ ನೀಡಿದವರಿಗೆ ನಗರ ಭೂಸಾರಿಗೆ ನಿರ್ದೇಶನಾಲಯ 10ಲಕ್ಷ ರೂ. ಬಹುಮಾನ ನೀಡಲಿದೆ.
“ಹೆಬ್ಬಾಳದಲ್ಲಿ ಎಲಿವೇಟರ್ ಕಾರಿಡಾರ್ ಸೇರಿದಂತೆ ಹಲವು ಪ್ರಮುಖ ಯೋಜನೆಗಳು ಬರಲಿವೆ. ಹೀಗಾಗಿ, ಈ ಭಾಗದಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಅಂದಾಜು 8ಲಕ್ಷ ಜನ ಸಂದಣಿ ಮತ್ತು ವಾಹನಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಹಲವು ಕಾಮಗಾರಿಗಳು ಪ್ರಾರಂಭವಾಗುವುದರಿಂದ ಸಾರ್ವಜನಿಕರಿಗೂ ಕಿರಿಕಿರಿ ಉಂಟಾಗಲಿದೆ. ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸುವುದು ಮುಖ್ಯ. ಈ ನಿಟ್ಟಿನಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ನಡುವೆ ಚರ್ಚೆಗೆ ವೇದಿಕೆ ಸಿದ್ಧಪಡಿಸಲಾಗುತ್ತಿದೆ’ ಎನ್ನುತ್ತಾರೆ ಸಿಟಿಜನ್ ಫಾರ್ ಸಸ್ಟೇನೆಬಿಲಿಟಿ ಸಂಸ್ಥೆಯ ಸಹ ಸಂಸ್ಥಾಪಕ ಸುಬ್ಬಯ್ಯ.
” ಯೋಜನೆ ಪೂರ್ಣಗೊಂಡ ಮೇಲೆ ಸಾರ್ವಜನಿಕರಿಂದ ಆಕ್ಷೇಪವ್ಯಕ್ತವಾಗುತ್ತವೆ ಮತ್ತು ಈ ಯೋಜನೆಗಳಿಗೆ ಸಾರ್ವಜನಿಕರಲ್ಲಿ ಇನ್ನೂ ಉತ್ತಮವಾದ ಆಲೋಚನೆಗಳಿರಬಹುದು. ಅದನ್ನು ಗುರುತಿಸಿ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ವೆಬ್ಸೈಟ್ನಲ್ಲಿ ನೊಂದಾಯಿಸಿಕೊಳ್ಳುವವರಿಗೆ ವಿವಿಧ ಕಾಮಗಾರಿಗಳ ವಿವಿರವನ್ನೂ ನೀಡಲಾಗುವುದು’ ಎಂದು ಅವರು ವಿವರಿಸಿದರು.
ನೀವೂ ಭಾಗವಹಿಸಿ: ಆಂದೋಲನದಲ್ಲಿ ನೀವೂ ಭಾಗವಹಿಸಬಹುದು. ನಿಮ್ಮ ಸಲಹೆ ಮತ್ತು ಆಲೋಚನೆಗಳನ್ನು ಇಲ್ಲಿ ಹಂಚಿಕೊಳ್ಳಬಹುದು. ಇದರಲ್ಲಿ ಭಾಗವಹಿಸುವುದಕ್ಕೆ ತಾಂತ್ರಿಕ ನೈಪುಣ್ಯತೆಯ ಅಗತ್ಯತೆ ಇಲ್ಲ ಎಂದು ಸಿಟಿಜನ್ ಫಾರ್ ಸಸ್ಟೇನೆಬಿಲಿಟಿ ಸ್ಪಷ್ಟಪಡಿಸಿದೆ. ವೆಬ್ಸೈಟ್ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಲಭ್ಯವಿದೆ https://www.cifos.org/events/abetterhebbal ಮಾಹಿತಿಗೆ ಸಂರ್ಪಕಿಸಬಹುದು.
ಉತ್ತಮ ಆಲೋಚನೆಗೆ ಬಹುಮಾನ: ಸಿಟಿಜನ್ ಫಾರ್ ಸಸ್ಟೇನೆಬಿಲಿಟಿ ಆಯ್ಕೆ ಮಾಡುವ 10 ಜನರಲ್ಲಿ ಅತ್ಯುತ್ತಮ ಆಲೋಚನೆಯುಳ್ಳವರಿಗೆ ಪ್ರಶಸ್ತಿಯೂ ಸಿಗಲಿದೆ. ತೀರ್ಪುಗಾರರಾಗಿ ವಿವಿಧ ಇಲಾಖೆಯ ಅಧಿಕಾರಿಗಳೇ ಭಾಗವಹಿಸಲಿದ್ದು, ಇದಕ್ಕಾಗಿ ನಗರ ಭೂಸಾರಿಗೆ ನಿರ್ದೇಶನಾಲಯ 10ಲಕ್ಷರೂ. ಮೀಸಲಿರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ