BBMP: ಬಿಬಿಎಂಪಿ ಗುತ್ತಿಗೆದಾರರ ದಾಖಲೆ ಇದ್ದ ಕೊಠಡಿಯಲ್ಲಿ ಬೆಂಕಿ: 9 ಮಂದಿಗೆ ಗಾಯ
ಮುಖ್ಯ ಎಂಜಿನಿಯರ್ ಸೇರಿ 9 ಪಾಲಿಕೆ ಸಿಬ್ಬಂದಿಗೆ ಚಿಕಿತ್ಸೆ
Team Udayavani, Aug 12, 2023, 10:00 AM IST
ಬೆಂಗಳೂರು: ಬಿಬಿಎಂಪಿ ಗುತ್ತಿಗೆ ಕಾಮ ಗಾರಿಗಳ ಬಿಲ್ ಬಾಕಿ ಕುರಿತಂತೆ ಸರ್ಕಾರ ತನಿಖೆಗೆ ಆದೇಶ ನೀಡಿದ ಬೆನ್ನಲ್ಲೆ ಇದೀಗ ಗುತ್ತಿಗೆದಾರರಿಗೆ ಸಂಬಂಧಪಟ್ಟ ದಾಖಲೆ ಗಳಿದ್ದ ಪಾಲಿಕೆ ಕೊಠಡಿಯಲ್ಲೇ ಶುಕ್ರವಾರ ಬೆಂಕಿ ಅನಾಹುತ ನಡೆದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಸಂಜೆ 5 ಗಂಟೆಗೆ ಪಾಲಿಕೆಯ ಗುಣನಿಯಂತ್ರಣ ಲ್ಯಾಬ್ ಕಚೇರಿಯ ಕಟ್ಟಡದಲ್ಲಿ ಬೆಂಕಿಕಾಣಿಸಿದ್ದು, ದುರಂತ ಸಂಭವಿಸಿದ ಕೊಠಡಿಯಲ್ಲಿ ಕರ್ತವ್ಯದಲ್ಲಿದ್ದ ಬಿಬಿಎಂಪಿಯ ಚೀಫ್ ಎಂಜಿನಿಯರ್ ಸೇರಿ 9 ಮಂದಿಗೆ ಸುಟ್ಟ ಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದರಲ್ಲಿ ಇಬ್ಬರು ಮಹಿಳಾ ಸಿಬ್ಬಂದಿ ಸೇರಿದ್ದು ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದ್ದು ವೈದ್ಯರ ನಿಗಾದಲ್ಲಿದ್ದಾರೆ.
ಈ ಹಿಂದೆಯೂ ಬೆಂಕಿ ಬಿದ್ದಿತ್ತು: ಈ ಹಿಂದೆ ಕೂಡ ಬಿಬಿಎಂಪಿಯಲ್ಲಿ ಭ್ರಷ್ಟಾಚಾರದ ಕೂಗೂ ಕೇಳಿ ಬಂದಿತ್ತು. ಆ ವೇಳೆ ಕೂಡ ಪಾಲಿಕೆ ಕಡತಗಳು ಬೆಂಕಿ ಅನಾಹುತಕ್ಕೆ ನಾಶವಾಗಿದ್ದವು. ಇದೀಗ ಪಾಲಿಕೆ ವ್ಯಾಪ್ತಿ ಯಲ್ಲಿ ನಡೆದ ವಿವಿಧ ಕಾಮಗಾರಿಗಳನ್ನು ಸರ್ಕಾರ ಎಸ್ಐಟಿಗೆ ವಹಿಸಿದ್ದು, ಅದರ ಬೆನ್ನಲ್ಲೆ ಪೂರಕ ದಾಖಲೆಗಳಿರುವ ಕೊಠಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅನುಮಾನ ಹುಟ್ಟುಹಾಕಿದೆ.
ಆಸ್ಪತ್ರೆಗೆ ಸಚಿವರುಗಳ ಭೇಟಿ: ಈ ಎಲ್ಲ ಬೆಳವಣಿಗೆಗಳ ಮಧ್ಯೆ ಸಚಿವರಾದ ಕೆ.ಜೆ.ಜಾರ್ಜ್ ಮತ್ತು ಭೈರತಿ ಸುರೇಶ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದರು. ಈ ವೇಳೆ ಮಾತನಾಡಿದ ಸಚಿವ ಕೆ.ಜೆ ಜಾರ್ಜ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಅವರ ಸೂಚನೆ ಮೇರೆಗೆ ಆಸ್ಪತ್ರೆ ಭೇಟಿ ನೀಡಿದ್ದೇವೆ. ಹಲವು ಮಂದಿಗೆ ಸುಟ್ಟಗಾಯ ಗಳಾಗಿದ್ದು ಎಲ್ಲರೂ ಆರೋಗ್ಯ ವಾಗಿದ್ದಾರೆ ಎಂದು ತಿಳಿಸಿದರು.
ವೈದ್ಯರು ಕೂಡ ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಸರ್ಕಾರವೇ ಎಲ್ಲ ವೆಚ್ಚವನ್ನು ಭರಿಸಲಿದೆ ಎಂದರು. ಪ್ರಯೋಗಾಲಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಲಯ ಅಧಿಕಾರಿಗಳು ಸ್ಥಳ ಭೇಟಿ ನೀಡಿದ್ದು ತನಿಖೆ ನಂತರ ಸಂಪೂರ್ಣ ಮಾಹಿತಿ ತಿಳಿಯಲಿದೆ ಎಂದರು.
ಘಟನಾ ಸ್ಥಳಕ್ಕೂ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ ಸಿಎಂ
ಸಿಎಂ ಸಿದ್ದರಾಮಯ್ಯ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬೆಂಕಿ ಅವಘಡ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಯ ಕುರಿತು ವಿವರವನ್ನು ಅಧಿಕಾರಿಗಳಿಂದ ಪಡೆದುಕೊಂಡರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಚಿವರಾದ ರಾಮಲಿಂಗಾರೆಡ್ಡಿ. ಭೈರತಿ ಸುರೇಶ್ ಅವರುಗಳು ಜತೆಗಿದ್ದರು.
3 ತಂಡಗಳಿಂದ ಪ್ರತ್ಯೇಕ ತನಿಖೆ
ಬೆಂಗಳೂರು: ಅಗ್ನಿ ಅನಾಹುತ ನಡೆದ ಗುಣಮಟ್ಟ ಪರಿಶೀಲನೆ ಪ್ರಯೋಗಾಲಯ ಇರುವ ಜಾಗವೇ ಇದಲ್ಲ. ಮುಖ್ಯಮಂತ್ರಿಗಳು ಕೂಡ ಅದನ್ನೇ ಗಮನಿಸಿದ್ದಾರೆ. ಇಂತಹ ಪ್ರಯೋಗಾಲಯ ಸುರಕ್ಷಿತ ಜಾಗದಲ್ಲಿ ಇಡಬೇಕು. ಹೀಗಾಗಿ ಇದನ್ನು ಸ್ಥಳಾಂತರ ಮಾಡಲಾಗುವುದು ಎಂದು ಉಪಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ಅವಘಡದ ಕುರಿತು ಬಿಬಿಎಂಪಿ ಅಧಿಕಾರಿಗಳು, ಪೊಲೀಸರು ಸೇರಿದಂತೆ ಮೂರು ತಂಡಗಳು ಪ್ರತ್ಯೇಕ ತನಿಖೆ ಮಾಡಲಿವೆ ಎಂದು ಹೇಳಿದರು.
ಈ ಅವಘಡದಲ್ಲಿ ಗಾಯಾ ಳುಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಸಿಬ್ಬಂದಿಗೆ ಸರ್ಕಾರ ಸೂಚನೆ ನೀಡಿದೆ. ಗಾಯಾಳುಗಳನ್ನು ಐಸಿಯುನಲ್ಲಿ ಇರಿಸಿ ವಿಶೇಷ ಕಾಳಜಿ ವಹಿಸಲಾಗುತ್ತಿದೆ. ಅವರ ಶೀಘ್ರ ಗುಣಮುಖಕ್ಕೆ ಎಲ್ಲಾ ನೆರವು ನೀಡುತ್ತೇವೆ. ಅದೃಷ್ಟವಶಾತ್ ಯಾರಿಗೂ ದೃಷ್ಟಿಗೆ ತೊಂದರೆ ಆಗಿಲ್ಲ ಎಂದು ತಿಳಿಸಿದರು.
ಮುಖ್ಯ ಎಂಜಿನಿಯರ್ಗಳಿಂದ ಗಾಯಗೊಂಡವರು ಯುವಕರಾಗಿದ್ದು, ಅವರಿಗೆ ಉಜ್ವಲ ಭವಿಷ್ಯವಿದೆ. ಅವರಿಗೆ ಈ ರೀತಿ ಆಗಬಾರದಿತ್ತು. ಈ ಅವಘಡಕ್ಕೆ ಸಂಬಂಧಿಸಿದಂತೆ ನಾನು ಯಾರ ಮೇಲೂ ದೂರಲು ಹೋಗುವುದಿಲ್ಲ. ಉಳಿದಂತೆ ನಾನು ತನಿಖೆ ಮುಗಿಯುವವರೆಗೂ ಯಾವುದರ ಬಗ್ಗೆ ಹೇಳಿಕೆ ನೀಡುವುದಿಲ್ಲ. ಇದು ಪೂರ್ವನಿಯೋಜಿತ ಎಂಬ ವಿರೋಧ ಪಕ್ಷದ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಮಾತಾಡಬೇಕು ಮಾತನಾಡಲಿ ಬಿಡಿ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ