ಬುದ್ಧಿಶಕ್ತಿ ಹೆಚ್ಚಿಸಿಕೊಳ್ಳಲು ಹೋಗಿ ಪ್ರಾಣಬಿಟ್ಟ ವಿದ್ಯಾರ್ಥಿ


Team Udayavani, Oct 17, 2019, 3:06 AM IST

buddishakti

ವಿಜಯವಾಡ/ಬೆಂಗಳೂರು: ಮೆದುಳಿನ ಸಾಮರ್ಥ್ಯ ಹೆಚ್ಚಳಕ್ಕಾಗಿ ವಿಶೇಷ ಚಿಕಿತ್ಸೆ ನೀಡುವುದಾಗಿ ಹೇಳಿಕೊಂಡಿದ್ದ ನಕಲಿ ನಾಟಿ ವೈದ್ಯನ ಮಾತಿಗೆ ಮರುಳಾದ ಆಂಧ್ರಪ್ರದೇಶದ ಗುಂಟೂರಿನ ಹರನಾಥ್‌ (15) ಎಂಬ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಸಾವಿಗೀಡಾಗಿರುವ ಆತಂಕಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡದ ಗವರ್ನರ್‌ ಪೇಟ್‌ ಪ್ರಾಂತ್ಯದಲ್ಲಿ ನಡೆದಿದೆ.

ಈತನ ಮಾತಿಗೆ ವಿದ್ಯಾರ್ಥಿಗಳು ಮಾತ್ರವಲ್ಲ ಅವರ ಪೋಷಕರೂ ಮರುಳಾಗಿದ್ದರು. ಹಾಗಾಗಿ, ಬೆಂಗಳೂರು, ಬಳ್ಳಾರಿ, ಕಡಪ ಹಾಗೂ ತೆಲಂಗಾಣದ ನಾನಾ ಜಿಲ್ಲೆಗಳಿಂದ ಹಲವಾರು ಪೋಷಕರು ಈತನಲ್ಲಿಗೆ ತಮ್ಮ ಮಕ್ಕಳನ್ನು ಚಿಕಿತ್ಸೆಗಾಗಿ ಕರೆ ತರುತ್ತಿದ್ದರು. ಇತ್ತೀಚೆಗೆ, 11 ಮಂದಿ ವಿದ್ಯಾರ್ಥಿಗಳು ಈತನ ಚಿಕಿತ್ಸೆಗೆ ಒಳಗಾಗಿದ್ದರು.

ಮೃತ ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಆಧಾರದಲ್ಲಿ ನಾಟಿ ವೈದ್ಯ ಎನ್ನಲಾಗಿರುವ ಭುವನೇಶ್ವರ ರಾವ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈತ ಅಸಲಿಗೆ ಯಾವುದೇ ವೈದ್ಯಕೀಯ ಪದವಿ ಪಡೆದಿಲ್ಲದಿರುವುದು ತಿಳಿದುಬಂದಿದ್ದು, ತನಿಖೆ ಮುಂದುವರಿಸಲಾಗಿದೆ.

“ಏಷ್ಯಾ ನೆಟ್‌ ತೆಲುಗು’ ಜಾಲತಾಣದ ವರದಿಯ ಪ್ರಕಾರ, ಭುವನೇಶ್ವರ ರಾವ್‌ “ಯೂ ಟ್ಯೂಬ್‌’ ವಿಡಿಯೋಗಳ ಮೂಲಕ ವಿದ್ಯಾರ್ಥಿಗಳಿಗೆ ಪರಿಚಿತನಾಗಿದ್ದ. ತನ್ನ ನಾಟಿ ವೈದ್ಯಶಾಸ್ತ್ರದಿಂದ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸುವುದರ ಜತೆಗೆ, ಬುದ್ಧಿಮಾಂದ್ಯರನ್ನೂ ಸರಿಪಡಿಸುವುದಾಗಿ ಈತ ವಿಡಿಯೋಗಳಲ್ಲಿ ಹೇಳಿಕೊಂಡಿದ್ದ.

ಚಿಕಿತ್ಸೆ ಹೇಗೆ?: ವಿಜಯವಾಡದ ಗವರ್ನರ್‌ ಪೇಟ್‌ನಲ್ಲಿನ ಲಾಡ್ಜೊಂದರಲ್ಲಿ ಬಾಡಿಗೆಗೆ ಪಡೆಯಲಾದ ಮೂರು ಕೊಠಡಿಗಳಲ್ಲಿ ಈತನ ಚಿಕಿತ್ಸೆ ನಡೆಯುತ್ತಿದ್ದವು. ಚಿಕಿತ್ಸೆಗಾಗಿ ನೋಂದಾಯಿಸಲ್ಪಟ್ಟ ವಿದ್ಯಾರ್ಥಿಗಳು 15 ದಿನ ಲಾಡ್ಜ್ನಲ್ಲಿ ತಂಗಬೇಕಿತ್ತು. ಚಿಕಿತ್ಸೆ ಆರಂಭವಾದ ದಿನದಿಂದ ಚಿಕಿತ್ಸೆ ಮುಗಿಯುವವರೆಗೆ ವಿದ್ಯಾರ್ಥಿಗಳು ಗಂಟೆಗೊಂದರಂತೆ ಭುವನೇಶ್ವರ ರಾವ್‌ ನೀಡುತ್ತಿದ್ದ ಮಾತ್ರೆಗಳನ್ನು ಸೇವಿಸಬೇಕಿತ್ತು. ಅದರ ಜತೆಗೆ, ಮಸಾಜ್‌ ಮಾಡಿಸಿಕೊಳ್ಳಬೇಕಿತ್ತು.

ಮೃತ ಹರನಾಥ್‌, ಹೊಟ್ಟೆ ನೋವು ಹಾಗೂ ಆ ಹಿನ್ನೆಲೆಯಲ್ಲಿ ಓದಿನ ಮೇಲೆ ಆಸಕ್ತಿ ಬರುತ್ತಿಲ್ಲ ಎಂಬ ಕಾರಣಕ್ಕಾಗಿ ಈತನಲ್ಲಿಗೆ ಚಿಕಿತ್ಸೆಗಾಗಿ ಬಂದಿದ್ದ. ಈತನಿಗೂ ಗಂಟೆಗೊಂದು ಮಾತ್ರೆ ಹಾಗೂ ಮಸಾಜ್‌ ಚಿಕಿತ್ಸೆ ನೀಡಲಾಗುತ್ತಿತ್ತು.  ಚಿಕಿತ್ಸೆಯ ಎರಡನೇ ದಿನ, ಭುವನೇಶ್ವರ ರಾವ್‌ ಮಸಾಜ್‌ ಮಾಡುತ್ತಿದ್ದಾಗಲೇ ಹರನಾಥ್‌ ಕುರ್ಚಿಯ ಮೇಲೆ ಕುಸಿದುಬಿದ್ದು ಸಾವನ್ನಪ್ಪಿದ್ದಾನೆ.

ಅಲ್ಲೇ ಇದ್ದ ಆತನ ಹೆತ್ತವರು ಅದನ್ನು ಗಮನಿಸಿ, ವೈದ್ಯರಿಗೆ ತಿಳಿಸಿದರೂ ಆತ ಏನೂ ಆಗಿಲ್ಲ ಬಿಡಿ ಎನ್ನುತ್ತಾ ಮಸಾಜ್‌ ಮುಂದುವರಿಸಿದ್ದನೆಂದು ಹೇಳಲಾಗಿದೆ. ಅದೇ ಹೊತ್ತಿಗೆ, ಹರನಾಥ್‌ ಜತೆಗೆ ಚಿಕಿತ್ಸೆ ಪಡೆಯುತ್ತಿದ್ದ ಇತರ 4 ಮಂದಿಯ ಪರಿಸ್ಥಿತಿ ಗಂಭೀರವಾಗಿದೆ. ಹಾಗಾಗಿ, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಹರನಾಥ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಚಿಕಿತ್ಸೆಯಿಂದ ಬುದ್ಧಿಮತ್ತೆ ಹೆಚ್ಚಾಗುತ್ತಾ?: ವೈಜ್ಞಾನಿಕವಾಗಿ ನಿರೂಪಿಸಲ್ಪಟ್ಟ ಯೋಗ, ಧ್ಯಾನದಂಥ ಮಾನಸಿಕ, ದೈಹಿಕ ತರಬೇತಿಗಳಿಂದ ಮೆದುಳಿನ ಕಾರ್ಯಕ್ಷಮತೆಯನ್ನು ಹಂತಹಂತವಾಗಿ ಹೆಚ್ಚಿಸಬಹುದು. ಇದಕ್ಕೆ ನಮ್ಮ ನಿತ್ಯ ಜೀವನ ಕ್ರಮ, ಉತ್ತಮ ಅಭ್ಯಾಸಗಳು, ಆಹಾರ ಪ್ರಮುಖ ಪಾತ್ರ ವಹಿಸುತ್ತವೆ.

ಆಧುನಿಕ ಚಿಕಿತ್ಸಾ ವಿಧಾನಗಳೂ ಚಾಲ್ತಿಯಲ್ಲಿವೆಯಾದರೂ ತಜ್ಞ ವೈದ್ಯರ ಸಲಹೆಯಿದ್ದಲ್ಲಿ ಮಾತ್ರ ಅವನ್ನು ಪಡೆಯಬಹುದು. ಆದರೆ, ಮಾತ್ರೆಗಳು, ಟಾನಿಕ್‌ನಿಂದ ಕೆಲವೇ ದಿನಗಳಲ್ಲಿ ಸೂಪರ್‌ ಕಂಪ್ಯೂಟರ್‌ ಮಾದರಿಯಲ್ಲಿ ಬುದ್ಧಿ ಹೆಚ್ಚುತ್ತದೆ ಎಂಬಂಥ ಜಾಹೀರಾತುಗಳು ಇಂದಿನ ಯುವಕರ ದಾರಿ ತಪ್ಪಿಸುತ್ತಿವೆ ಎನ್ನುತ್ತಾರೆ ವೈದ್ಯರು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.