ಮಹಾಬಲೇಶ್ವರ ದೇಗುಲದಲ್ಲಿ ಚಿನ್ನಾಭರಣ ಕಳವು
Team Udayavani, Jan 20, 2018, 11:32 AM IST
ಕೆ.ಆರ್.ಪುರ: ಇತಿಹಾಸ ಪ್ರಸಿದ್ಧ ಮಹಾಬಲೇಶ್ವರ ಸ್ವಾಮಿ ದೇವಾಲಯದ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಚಿನ್ನಾ¸ರಣ, ನಗದು ದೋಚಿರುವ ಘಟನೆ ಕೆಆರ್ ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ವೆಂಗಯ್ಯನ ಕೆರೆ ಸಮೀಪವಿರುವ ಮುಜರಾಯಿ ಇಲಾಖೆಗೆ ಸೇರಿದ ಮಹಾಬಲೇಶ್ವರ ಸ್ವಾಮಿ ದೇಗುಲದಲ್ಲಿ ಈ ಘಟನೆ ಜರುಗಿದ್ದು, 6ಕೆಜಿ ತೂಕದ 2 ಬೆಳ್ಳಿ ಮುಖವಾಡ, ನಾಗಾಭರಣಕ್ಕೆ ಜೋಡಿಸಿರುವ 2 ಮುಖವಾಡ, ಪಾರ್ವತಿ ದೇವಿಯ ಬಂಗಾರದ ಮಾಂಗಲ್ಯ ಸರ ಹಾಗೂ ಹುಂಡಿ ಸಮೇತ ಕಳವು ಮಾಡಿದ್ದಾರೆ ಎಂದು ಅರ್ಚಕ ವೆಂಕಟೇಶ್ ತಿಳಿಸಿದರು.
ರಾತ್ರಿ 8.30ಕ್ಕೆ ಪೂಜೆ ಮುಗಿದ ನಂತರ ದೇಗುಲಕ್ಕೆ ಬೀಗ ಹಾಕಲಾಗಿತ್ತು, ಮುಜರಾಯಿ ಇಲಾಖೆಯಿಂದ ನೇಮಕಗೊಂಡಿರುವ ಭದ್ರತಾ ಸಿಬ್ಬಂದಿ ರಾತ್ರಿ ಇಲ್ಲದಿರುವುದನ್ನು ಖಚಿತಪಡಿಸಿಕೊಂಡಿದ್ದ ದುಷ್ಕರ್ಮಿಗಳ ಕಳ್ಳತನ ಮಾಡಿದ್ದಾರೆ. ಎಂದಿನಂತೆ ಅರ್ಚಕರು ಬೆಳಗ್ಗೆ ಪೂಜೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ