![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಅಪಾರ್ಟ್ಮೆಂಟ್ನಲ್ಲಿ ಚಿನ್ನ ದೋಚುತ್ತಿದ್ದವಳ ಸೆರೆ
Team Udayavani, Nov 3, 2018, 12:17 PM IST
![arrest2.jpg](https://www.udayavani.com/wp-content/uploads/2018/11/3/arrest2.jpg)
ಬೆಂಗಳೂರು: ವಿಲಾಸಿ ಜೀವನ ನಡೆಸಲು ಅಪಾರ್ಟ್ಮೆಂಟ್ಗಳಲ್ಲಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಶಿವಾಜಿನಗರದ ತಿಮ್ಮಯ್ಯ ರಸ್ತೆ ನಿವಾಸಿ ಶಾಂತಿ (38) ಬಂಧಿತೆ. ಈಕೆಯಿಂದ 5 ಲಕ್ಷ ರೂ. ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಕಳವು ಮಾಡಿದ್ದ ಚಿನ್ನಾಭರಣ ಮಾರಾಟ ಮಾಡಿ ಶಾಪಿಂಗ್, ಪಬ್, ವಸ್ತುಗಳ ಖರೀದಿಸಿ ವಿಲಾಸಿ ಜೀವನ ನಡೆಸುತ್ತಿದ್ದಳು. ಈ ಹಿಂದೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಸೇರಿದ್ದಳು. ಬಿಡುಗಡೆ ಬಳಿಕವೂ ಕೃತ್ಯ ಮುಂದುವರಿಸಿದ್ದಳು ಎಂದು ಪೊಲೀಸರು ಹೇಳಿದರು.
ಅಪಾರ್ಟ್ಮೆಂಟ್ಗಳೇ ಟಾರ್ಗೆಟ್: ಕೆಲಸ ಕೇಳುವ ನೆಪದಲ್ಲಿ ಅಪಾರ್ಟ್ಮೆಂಟ್ಗೆ ಹೋಗುತ್ತಿದ್ದಳು. ಯಾವುದಾದರೂ ಮನೆ ಬಾಗಿಲು ತೆಗೆದಿದ್ದರೆ ಕೈಗೆ ಸಿಕ್ಕ ವಸ್ತುಗಳನ್ನು ದೋಚುತ್ತಿದ್ದಳು. ಒಂದು ವೇಳೆ ಮನೆ ಮಾಲಿಕರು ಬಾಗಿಲು ತೆರೆದರೆ ಮನೆ ಕೆಲಸಕ್ಕೆ ಬಂದಿರುವುದಾಗಿ ಹೇಳಿ ವಾಪಸ್ ಆಗುತ್ತಿದ್ದಳು.
ನಕಲಿ ಚಿನ್ನಾಭರಣ!: ಕೆಲ ತಿಂಗಳ ಹಿಂದೆ ಈಕೆ, ಕೋರಮಂಗಲದ ಅಪಾರ್ಟ್ಮೆಂಟ್ವೊಂದರಲ್ಲಿ ಮನೆ ಕೆಲಸಕ್ಕೆ ಸೇರಿಕೊಂಡಿದ್ದಳು. ಮನೆ ಮಾಲಿಕರ ಬಳಿ ನಂಬಿಕೆಗಳಿಸುವ ನಾಟಕವಾಡಿದ್ದ ಶಾಂತಿ, ಮನೆಯಲ್ಲಿನ ಚಿನ್ನಾಭರಣ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಳು.
ಬಳಿಕ ಯಾರು ಇಲ್ಲದ ವೇಳೆ ಆ ಆಭರಣ ಕಳವು ಮಾಡಿ ಅದೇ ಸ್ಥಳದಲ್ಲಿ ನಕಲಿ ಆಭರಣ ಇಡುತ್ತಿದ್ದಳು. ಈ ಮಧ್ಯೆ ಕಬೋರ್ಡ್ನಲ್ಲಿದ್ದ ಮಾಂಗಲ್ಯ ಸರ ಕದ್ದು, ಅದೇ ಮಾದರಿಯ ಮಾಂಗಲ್ಯ ಸರವನ್ನು ಶಿವಾಜಿನಗರದಲ್ಲಿ ಮಾಡಿಸಿ ಕಬೋರ್ಡ್ನಲ್ಲಿ ಇಟ್ಟಿದ್ದಳು. ಈ ಸಂಬಂಧ ಮನೆ ಮಾಲಿಕರು ಕೋರಮಂಗಲ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.