ಬೆಂಗಳೂರು: ಸಿನಿಮೀಯ ರೀತಿ ಚಿನ್ನದಂಗಡಿ ದರೋಡೆಕೋರರ ಸೆರೆ


Team Udayavani, Jul 9, 2022, 3:05 PM IST

tdy-19

ಬೆಂಗಳೂರು: ಮೈಲಸಂದ್ರದಲ್ಲಿರುವ ರಾಮ್‌ದೇವ್‌ ಜ್ಯುವೆಲ್ಲರ್ ಆ್ಯಂಡ್‌ ಬ್ರೋಕರ್ಸ್‌ ಅಂಗಡಿಗೆ ನುಗ್ಗಿ ಮಾಲೀಕನನ್ನು ದರೋಡೆ ಮಾಡಿ ಪರಾರಿಯಾಗಿದ್ದ ನಾಲ್ವರನ್ನು ಸಿನಿಮೀಯ ಶೈಲಿಯಲ್ಲಿ ಎಲೆ ಕ್ಟ್ರಾನಿಕ್‌ ಸಿಟಿ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿ ನಗರಕ್ಕೆ ಕರೆ ತಂದಿದ್ದಾರೆ.

ರಾಜಸ್ಥಾನದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ವಾಹನ ದಲ್ಲಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು 3 ಕಿ.ಮೀ. ವರೆಗೆ ಚೇಸ್‌ ಮಾಡಿ ಬಂಧಿಸಲಾಗಿದೆ. ರಾಜಸ್ಥಾನ ಮೂಲದ ದೇವಾರಾಮ್‌, ರಾಹುಲ್‌ ಸೋಲಂಕಿ, ಅನಿಲ್‌, ರಾಮ್‌ಸಿಂಗ್‌ ಬಂಧಿತರು.

ತಲೆಮರೆಸಿಕೊಂಡಿರುವ ಮತ್ತೂಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಬಂಧಿತರಿಂದ 2 ಪಿಸ್ತೂಲ್‌, 3 ಸಜೀವ ಗುಂಡುಗಳು, ಸ್ಥಳದಲ್ಲಿ ಫೈಯರಿಂಗ್‌ ಆಗಿರುವ 3 ಖಾಲಿ ಕೋಕ ಜಪ್ತಿ ಮಾಡಲಾಗಿದೆ. ಭವರ್‌ಲಾಲ್‌ ಮೈಲಸಂದ್ರದಲ್ಲಿ ರಾಮ್‌ದೇವ್‌ ಜ್ಯುವೆಲ್ಲರ್ ಅಂಗಡಿ ಹೊಂದಿದ್ದರು. ಜು.4ರಂದು ಬೆಳಗ್ಗೆ 7.15ಕ್ಕೆ ಇವರ ಅಳಿಯ ಧರ್ಮೆಂದ್ರ ಲತನ್‌ಲಾಲ್‌ ಅಂಗಡಿಯನ್ನು ತೆರೆಯುತ್ತಿದ್ದಾಗ ಗ್ರಾಹಕರ ಸೋಗಿನಲ್ಲಿ ಆರೋಪಿಗಳು ಇವರ ಅಂಗಡಿಗೆ ಆಗಮಿಸಿದ್ದರು. ಕತ್ತಿನ ಬೆಳ್ಳಿ ಸರ ತೋರಿಸುವಂತೆ ಸೂಚಿಸಿದ್ದರು. ಧರ್ಮೇಂದ್ರ ಜ್ಯುವೆಲರ್ ಒಳ ಹೋಗುತ್ತಿ ದ್ದಂತೆ ತಮ್ಮ ಬಳಿಯಿದ್ದ ಪಿಸ್ತೂಲ್‌ ಅನ್ನು ನೌಕರನಿಗೆ ತೋರಿಸಿ, ಹೆದರಿಸಿ ಆತನನ್ನು ಲಾಕರ್‌ ಇರುವ ರೂಂಗೆ ತಳ್ಳಿಕೊಂಡು ಹೋಗಿ ಕೈ-ಕಾಲುಗಳನ್ನು ಕಟ್ಟಿದ್ದರು. ನಂತರ ಜ್ಯುವೆಲ್ಲರ್ ನ ಲಾಕರ್‌ ನಲ್ಲಿ ಇಟ್ಟಿದ್ದ 1.58 ಕೋಟಿ ರೂ. ಮೌಲ್ಯದ ಚಿನ್ನಾಭರಣ, 80 ಸಾವಿರ ರೂ. ನಗದು, ಅಂಗಡಿಯಲ್ಲಿ ಅಳವಡಿಸಿದ್ದ ಡಿವಿಆರ್‌ ಅನ್ನು ದೋಚಿದ್ದರು.

ಕೃತ್ಯ ಇದೇ ಮೊದಲಲ್ಲ: ರಾಜಸ್ಥಾನ ಮೂಲದ ಬಂಧಿತ ನಾಲ್ವರು ಹಾಗೂ ಮತ್ತೋರ್ವ ಆರೋಪಿಯು ಕುಖ್ಯಾತ ದರೋಡೆಕೋರನಾಗಿದ್ದು, ವಿವಿ ಧೆಡೆ ಮನೆಗೆ ಕನ್ನ, ಸುಲಿಗೆ, ದರೋಡೆ ಮಾಡುತ್ತಿ ದ್ದರು. ದೇವಾರಾಮ್‌ ಹುಳಿಮಾವಿನಲ್ಲಿ ಈ ಹಿಂದೆ ಎಲೆಕ್ಟ್ರಿಕಲ್‌ ಅಂಗಡಿ ಇಟ್ಟುಕೊಂಡಿದ್ದ. ಇದರಲ್ಲಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಆರೋಪಿಗಳು ಸುಲಭವಾಗಿ ಹಣ ಸಂಪಾದಿಸುವ ಉದ್ದೇಶದಿಂದ ಕೃತ್ಯ ಎಸಗಿದ್ದರು. ಕೃತ್ಯ ಎಸ ಗುವ 15 ದಿನ ಮುನ್ನ ರಾಜಸ್ಥಾನದಿಂದ ಬೆಂಗಳೂ ರಿಗೆ ಬಂದು ಸಂಬಂಧಿಕರ ಮನೆಯಲ್ಲಿ ಉಳಿದು ಕೊಂಡಿದ್ದರು. ಬೆಂಗಳೂರಿನ ವಿವಿಧೆಡೆ ಸುತ್ತಾಡಿ ದರೋಡೆಗೆ ಸಂಚು ರೂಪಿಸುತ್ತಿದ್ದರು ಎಂದು ತಿಳಿದು ಬಂದಿದೆ.

ರಾಜಸ್ಥಾನದಲ್ಲಿ ಕಾರ್ಯಾಚರಣೆ ಹೇಗಿತ್ತು?: ಪ್ರಕರಣ ದಾಖಲಿಸಿಕೊಂಡ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸರು, ರಾಜಸ್ಥಾನದ ಪೊಲೀಸರನ್ನು ಸಂಪರ್ಕಿಸಿ ಪ್ರಕರಣದ ವಿವರ ನೀಡಿದ್ದರು. ಕರ್ನಾಟಕ ಮೂಲದ ರಾಜಸ್ಥಾನ ಐಪಿಎಸ್‌ ಅಧಿಕಾರಿ ಎಂ.ಎನ್‌.ದಿನೇಶ್‌ ಸಹಕಾರದೊಂದಿಗೆ ಆರೊಪಿಗಳಿ ಗಾಗಿ ಪತ್ತೆ ಕಾರ್ಯ ನಡೆಸಿದ್ದರು. ಆ ವೇಳೆ ಚಿತ್ತೂರ್‌ಘರ್‌ ಜಿಲ್ಲೆಯ, ಬೇಗೂಮ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಗಳು ಇರುವ ಸುಳಿವು ಸಿಕ್ಕಿತ್ತು. ಇನ್ನೇನು ಆರೋಪಿಗಳನ್ನು ಬಂಧಿಸಬೇಕು ಎನ್ನುವಷ್ಟರಲ್ಲಿ ಪೊಲೀಸರ ಮೇಲೆಯೇ ಆರೋಪಿಗಳು ತಮ್ಮ ಬಳಿಯಿದ್ದ ಪಿಸ್ತೂಲ್‌ನಿಂದ ಗುಂಡಿನ ದಾಳಿ ನಡೆಸಿ ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ್ದರು. ಇಷ್ಟಕ್ಕೆ ಸುಮ್ಮನಾಗದ ಕರ್ನಾಟಕ ಪೊಲೀಸರು, ಸಿನಿಮೀಯ ಶೈಲಿಯಲ್ಲಿ 3 ಕಿ.ಮೀ.ವರೆಗೆ ಆರೋಪಿಗಳ ವಾಹನವನ್ನು ತಮ್ಮ ಜೀಪ್‌ನಲ್ಲಿ ಹಿಂಬಾಲಿಸಿಕೊಂಡು ಹೋಗಿದ್ದರು. ನಂತರ ಆರೋಪಿಗಳ ವಾಹನವನ್ನು ತಡೆದು ನಾಲ್ವರನ್ನು ಬಂಧಿಸಿದ್ದರು

ಟಾಪ್ ನ್ಯೂಸ್

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

ಚಿನ್ನದ ನಾಡಿನ ಕಲಾವಿದೆ ವಿದ್ಯಾಶ್ರೀ ಪ್ರತಿಭೆ ಅನಾವರಣ-ನೃತ್ಯಗಂಗಾ ಪ್ರದರ್ಶನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.