ಚಿನ್ನದ ಗಟ್ಟಿಯೊಂದಿಗೆ ಪರಾರಿಯಾಗಿದ್ದವನ ಸೆರೆ
Team Udayavani, Feb 26, 2022, 10:00 AM IST
ಬೆಂಗಳೂರು: ಚಿನ್ನಾಭರಣ ಮಳಿಗೆಯಿಂದ ಆಭರಣ ಮಾಡಿಕೊಡುವುದಾಗಿ ಚಿನ್ನದ ಗಟ್ಟಿ ತೆಗೆದುಕೊಂಡು ಹೋಗಿ ಆಭರಣ ಮಾಡಿಕೊಡದೆ ವಂಚಿಸಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.
ಆತನಿಂದ 50 ಲಕ್ಷ ರೂ. ಮೌಲ್ಯದ ಒಂದು ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ. ಜಯನಗರದ ಅಮರ್ ಮೊಹಂತ್ (33) ಬಂಧಿತ. ಜಯನಗರದ 3ನೇ ಬ್ಲಾಕ್ನಲ್ಲಿರುವ ತಿರುಮಲ ಜ್ಯುವೆಲ್ಲರ್ಸ್ನಲ್ಲಿ ಕಳೆದ ನಾಲ್ಕು ವರ್ಷಗಳಿಂದ ಆಭರಣ ತಯಾರಿಕನಾಗಿ ಅಮರ್ ಕೆಲಸ ಮಾಡಿಕೊಂಡಿದ್ದ. ಜು.1ರಂದು ಒಡವೆಗಳನ್ನು ಮಾಡಿಕೊಡುವುದಾಗಿ ಜ್ಯುವೆಲ್ಲರ್ಸ್ನಿಂದ 1,304 ಗ್ರಾಂ ಚಿನ್ನದ ಗಟ್ಟಿಯನ್ನು ತೆಗೆದುಕೊಂಡು ಹೋಗಿ ನಂತರ ನಾಪತ್ತೆಯಾಗಿದ್ದ.
ಕರೆ ಮಾಡಿದರೆ, ಅನಾರೋಗ್ಯದ ಸಬೂಬು ಹೇಳುತ್ತಿದ್ದವನೇ ಹೊರತು ಚಿನ್ನವನ್ನು ಮಾತ್ರ ವಾಪಸ್ ನೀಡಿರಲಿಲ್ಲ. ಇದರಿಂದ ಆತಂಕಗೊಂಡ ಒಡವೆ ಅಂಗಡಿ ಮಾಲೀಕ ಮನೀಶ್, ಆತನ ರೂಂಗೆ ಹೋದಾಗ ರೂಂ ಖಾಲಿ ಮಾಡಿ ಪರಾರಿಯಾಗಿರುವುದು ಬೆಳಕಿಗೆ ಬಂದಿತ್ತು. ಮನೀಶ್ ಈ ಬಗ್ಗೆ ಜಯನಗರ ಪೊಲೀಸರಿಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತಾಂತ್ರಿಕವಾಗಿ ತನಿಖೆ ನಡೆಸಿದಾಗ ಆರೋಪಿ ರಾಜಸ್ಥಾನದಲ್ಲಿ ಇರುವುದು ಪತ್ತೆಯಾಗಿತ್ತು. ಅಲ್ಲಿಗೆ ತೆರಳಿದ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ, ಮನೆಯಲ್ಲಿ ಬಚ್ಚಿಟ್ಟಿದ್ದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ