ಗಾಲ್ಫ್ ಮೈದಾನ ಸ್ಥಳಾಂತರ?


Team Udayavani, Jul 15, 2018, 11:58 AM IST

blore-3.gif

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಗಾಲ್ಫ್ ಮೈದಾನವನ್ನು ಸ್ಥಳಾಂತರ ಮಾಡುವ ಕುರಿತು ಚರ್ಚಿಸುವುದಾಗಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಹೇಳಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಿಲ್ಲಿಸಿದ್ದ ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರ ಕಾರಿನ ಮೇಲೆ ಶನಿವಾರ ಮಧ್ಯಾಹ್ನ ಗಾಲ್ಫ್ ಚೆಂಡು ಬಿದ್ದು ಗಾಜು ಒಡೆದಿದೆ. 

ಈ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಗಾಲ್ಫ್ ಮೈದಾನದ ಸುತ್ತ ಹಾಕಿರುವ ಬಲೆ ಎತ್ತರಿಸುವುದು ಹಾಗೂ ಸಾಧ್ಯವಾದರೆ ಗಾಲ್ಫ್ ಮೈದಾನ ಸ್ಥಳಾಂತರ ಮಾಡಬಹುದೇ ಎಂಬ ಕುರಿತು ಗಾಲ್ಫ್ ಕ್ಲಬ್‌ ಮುಖ್ಯಸ್ಥರ ಜತೆ ಚರ್ಚಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ, ವಿಧಾನಸೌಧ, ವಿಕಾಸಸೌಧ,ಲೋಕಾಯುಕ್ತ ಕಚೇರಿ, ಕೃಷ್ಣಾ, ಕಾವೇರಿ ನಿವಾಸಗಳನ್ನು ಹೈ ಸೆಕ್ಯುರಿಟಿ ಝೋನ್‌ ಎಂದು ಘೋಷಿಸಿ ನೂರು ಜನ ಸಿಬ್ಬಂದಿ ಇರುವ ಪ್ರತ್ಯೇಕ ರಕ್ಷಣಾ ದಳ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.

ಶೀಘ್ರವೇ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗುವುದು. ಜು.18 ರಂದು ರಾಜ್ಯದ ಸಮಸ್ಯೆಗಳ ಕುರಿತು ದೆಹಲಿಯಲ್ಲಿ ಸಂಸದರ ಸಭೆ ನಡೆಸಲು ಮುಖ್ಯಮಂತ್ರಿ ತೀರ್ಮಾನ ಮಾಡಿದ್ದಾರೆ ಎಂದು ತಿಳಿಸಿದರು. ಕೆಆರ್‌ ಎಸ್‌ ಭರ್ತಿಯಾಗಿರುವುದರಿಂದ ಜು.20ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಬಾಗಿನ ಅರ್ಪಿಸಲಿದ್ದಾರೆ ಎಂದು ಅವರು ಹೇಳಿದರು

ನೂರಡಿ ಎತ್ತರದ ನೆಟ್‌ ಮೇಲಿಂದ ಬಂದು ಕಾರಿನ ಮೇಲೆ ಬಿದ್ದ  ಗಾಲ್ಫ್  ಚೆಂಡು! ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ ಅಂಗಳಕ್ಕೆ ಮತ್ತೆ ಗಾಲ್ಫ್ ಚೆಂಡು ಬಂದು ಬಿದ್ದು ನಗರದ ಹೆಚ್ಚುವರಿ ಪೊಲಿಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರ ಕಾರಿನ ಗಾಜಿಗೆ ಹಾನಿಯಾಗಿದೆ.

ಶನಿವಾರ ಮಧ್ಯಾಹ್ನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬೆಂಗಳೂರು ಅಭಿವೃದ್ಧಿ ಕುರಿತು ಬಿ-ಪ್ಯಾಕ್‌ ಸಂಸ್ಥೆ ಸದಸ್ಯರೊಂದಿಗೆ ನಡೆಸಿದ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸೀಮಂತ್‌ ಕುಮಾರ್‌ ಸಿಂಗ್‌ ಅವರ ಕಾರಿನ ಮೇಲೆ ಚೆಂಡು ಬಿದ್ದಿತು. ಗಾಲ್ಫ್ ಗ್ರೌಂಡ್‌ಗೆ ಹಾಕಿರುವ ಸುಮಾರು ನೂರು ಅಡಿ ಎತ್ತರದ ಬಲೆಯನ್ನೂ ದಾಟಿ ಚೆಂಡು ಕಾರಿನ ಮೇಲೆ ಬಿದ್ದದ್ದು ಕೆಲ ಹೊತ್ತು ಆತಂಕ ಸೃಷ್ಟಿಸಿತು.

ಕಾಕತಾಳೀಯ ಎನ್ನುವಂತೆ 2006ರಲ್ಲಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿಯಾಗಿ ದ್ದಾಗ ಗಾಲ್ಫ್ ಚೆಂಡುಗಳು ಗೃಹ ಕಚೇರಿ ಕೃಷ್ಣಾ ಒಳಗೆ ಬಂದು ಬೀಳುತ್ತಿದ್ದವು. ಆಗ ಗಾಲ್ಫ್ ಮೈದಾನದ ಸುತ್ತ ಎತ್ತರದ ಬಲೆ ಹಾಕುವಂತೆ ಕುಮಾರಸ್ವಾಮಿ ಸೂಚಿಸಿದ್ದರು. ಅದರಂತೆ ಗಾಲ್ಫ್ ಮೈದಾನ ಸುತ್ತ ನೂರು ಅಡಿ ಎತ್ತರದ ಬಲೆ ಹಾಕಲಾಗಿತ್ತು. ಪ್ರಕರಣದ ಬಗ್ಗೆ ಸೀಮಂತ್‌ ಕುಮಾರ್‌ ಸಿಂಗ್‌ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಗಾಲ್ಫ್ ಕ್ಲಬ್‌ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಿಸಿದ್ದಾರೆ.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.