ನಗರದಲ್ಲಿ ಗುಡ್‌ ಫ್ರೈಡೆ ಆಚರಣೆ


Team Udayavani, Apr 20, 2019, 3:00 AM IST

nagaradalli

ಬೆಂಗಳೂರು: ಗುಡ್‌ ಫ್ರೈಡೆ ಅಂಗವಾಗಿ ಶುಕ್ರವಾರ ನಗರದ ವಿವಿಧ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು. ಹಲವು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ನಗರದ ಹಲವು ಚರ್ಚ್‌ಗಳಲ್ಲಿ ಮೇಣದ ಬತ್ತಿ ಹಿಡಿದು ಪ್ರಾರ್ಥನೆ ಸಲ್ಲಿದ ದೃಶ್ಯ ಶುಕ್ರವಾರ ಕಂಡು ಬಂತು.

ಶಿವಾಜಿನಗರದ ಸೇಂಟ್‌ ಮೇರಿ ಬೆಸಿಲಿಕಾ ಚರ್ಚ್‌ನಲ್ಲಿ ಹಾಗೂ ಹಲಸೂರಿನ ಲೂದ್‌ ಮಾತಾ ಚರ್ಚ್‌ನಲ್ಲಿ ಯೇಸು ಕ್ರಿಸ್ತನು ಬಂಧನಕ್ಕೆ ಒಳಗಾಗುವುದರಿಂದ ಹಿಡಿದು ಶಿಲುಬೆಯ ಮೇಲೆ ಮರಣ ಹೊಂದುವ ತನಕದ ವಿವಿಧ ಘಟನೆಗಳನ್ನು ನೆನಪಿಸುವ ಪ್ರದರ್ಶನದ ಮೂಲಕ ಜನರಿಗೆ ಏಸು ಕ್ರಿಸ್ತನ ಕುರಿತ ಸಂದೇಶ ಸಾರಲಾಯಿತು.

ನಾಗವಾರ ಮುಖ್ಯ ರಸ್ತೆಯಲ್ಲಿರುವ ಹೋಲಿ ವಾಟರ್‌ ಪವರ್‌ ಎ.ಜಿ.ಚರ್ಚ್‌ನಲ್ಲಿ ಮುಂಜಾನೆ ಪಾಸ್ಟರ್‌ ಗೋಲ್ಡನ್‌ ಸ್ಟಡ್‌ ಶಿಲುಬೆಗೇರಿದ ಯೇಸು ಕ್ರಿಸ್ತನು ಆಡಿದ ಮಹತ್ವದ ಏಳು ಮಾತುಗಳ ಕುರಿತು ಪ್ರವಚನ ನೀಡಲಾಯಿತು.

ಯೇಸು ಕ್ರಿಸ್ತ ಬಂಧನಕ್ಕೆ ಒಳಗಾಗುವುದರಿಂದ ಹಿಡಿದು ಶಿಲುಬೆಗೆ ಏರುವವರೆಗಿನ ಘಟನೆಗಳನ್ನು ಅವಲೋಕಿಸುತ್ತಾ ಪ್ರಾರ್ಥಿಸುವ ಮೂಲಕ ಶುಭ ಶುಕ್ರವಾರದ ಆರಾಧನೆ ಮಾಡಲಾಯಿತು. ಮಲ್ಲೇಶ್ವರದ ಸಿಎಸ್‌ಐ ಗ್ರೇಸ್‌ ಚರ್ಚ್‌ನಲ್ಲಿ ನಡೆದ ಗುಡ್‌ಫ್ರೈಡೆ ಆರಾಧನೆಯಲ್ಲಿ ಹಲವು ಸಂಖ್ಯೆಯಲ್ಲಿ ಕ್ರೈಸ್ತ ಸಮುದಾಯದವರು ಭಾಗವಹಿಸಿದ್ದರು.

ವಿವೇಕನಗರದ ಇನ್‌ಫೆಂಟ್‌ ಜೀಸಸ್‌ ಚರ್ಚ್‌, ಚಾಮರಾಜಪೇಟೆಯ ಸೇಂಟ್‌ ಮಾರ್ಕ್ಸ್ ಚರ್ಚ್‌, ಬ್ರಿಗೇಡ್‌ ರಸ್ತೆಯಲ್ಲಿರುವ ಸೇಂಟ್‌ ಪ್ಯಾಟ್ರಿಕ್‌ ಚರ್ಚ್‌, ಸೇಂಟ್‌ ಥೆರೆಸಾ ಚರ್ಚ್‌, ಹೆಬ್ಟಾಳ ರಿಂಗ್‌ ರಸ್ತೆಯಲ್ಲಿರುವ ಬೇಥೆಲ್‌ ಎಜಿ ಚರ್ಚ್‌, ಎಂಜಿ ರಸ್ತೆಯ ಸೇಂಟ್‌ ಮಾರ್ಕ್ಸ್ ಕ್ಯಾಥಡ್ರಲ್‌, ಸೇಂಟ್‌ ಪ್ಯಾಟ್ರಿಕ್ಸ್‌ ಚರ್ಚ್‌, ಗಂಗೊಂಡನಹಳ್ಳಿ ಸೇಂಟ್‌ ಅಂಥೋಣಿ ಚರ್ಚ್‌ ಸೇರಿದಂತೆ ಹಲವು ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿತ್ತು.

ಬಾಣಸವಾಡಿಯ ಸೇಂಟ್‌ ವಿನ್ಸೆಂಟ್‌ ಪಲ್ಲೊಟ್ಟಿ ಚರ್ಚ್‌ನಲ್ಲೂ ಕೂಡ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಮರಿಯಣ್ಣನ ಪಾಳ್ಯ, ಹಾರೋಬೆಲೆ, ತೆರೇಸಪುರ ಸೇರಿದಂತೆ ಬೆಂಗಳೂರಿನ ಹೊರವಲಯದ ಹಳ್ಳಿಗಳಲ್ಲೂ ಬೆಟ್ಟಗಳ ಮೇಲೆ ಶಿಲುಬೆ ಯಾತ್ರೆಯನ್ನು ನಾಟಕ ರೂಪದಲ್ಲಿ ಪ್ರದರ್ಶಿಸಲಾಯಿತು.

ಟಾಪ್ ನ್ಯೂಸ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.