ಮುಚ್ಚಿದ ಹೋಟೆಲ್‌, ತಿಂಡಿ ಗಾಡಿಗೆ ತೆರೆದ ಅದೃಷ್ಟ


Team Udayavani, May 31, 2017, 12:57 PM IST

hotel-bandh.jpg

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸರಕು ಮತ್ತು ಸೇವಾ ತೆರಿಗೆಯಲ್ಲಿ (ಜಿಎಸ್‌ಟಿ) ಸಾಮನ್ಯ ಹೋಟೆಲ್‌ಗ‌ಳಿಗೆ ದುಬಾರಿ ತೆರಿಗೆ ವಿಧಿಸಿರುವುದನ್ನು ಖಂಡಿಸಿ, ಕರೆ ನೀಡದ್ದ ಹೋಟೆಲ್‌ಗ‌ಳ ಬಂದ್‌ಗೆ ನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಹುತೇಕ ಹೋಟೆಲ್‌ಗ‌ಳು ಬೆಳಗ್ಗೆ 5ರಿಂದ ರಾತ್ರಿ 11 ಗಂಟೆವರೆಗೆ ಮುಚ್ಚಿದ್ದರಿಂದ ಸಾರ್ವಜನಿಕರು ತಿಂಡಿ, ಊಟಕ್ಕೆ ಪರದಾಡಿದರು. ಕಚೇರಿ, ಮಾರ್ಕೆಂಟಿಂಗ್‌ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವವರು, ಮಧ್ಯಮ ವರ್ಗದ ಸಂಸ್ಥೆಗಳ ಕೆಲಸಗಾರರು ಮತ್ತು ಊಟ, ತಿಂಡಿಗಾಗಿ ಹೋಟೆಲ್‌ಗ‌ಳನ್ನೇ ನಂಬಿಕೊಂಡಿದ್ದ ಜನ ಸಾಮಾನ್ಯರಿಗೆ ಅಲೆದಾಟ ತಪ್ಪಲಿಲ್ಲ.

ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿರುವ ಸಣ್ಣಪುಟ್ಟ ಹೋಟೆಲ್‌, ತಳ್ಳುಗಾಡಿಯ ಊಟ ಹೊರತುಪಡಿಸಿ, ಸಾಮಾನ್ಯ ಹಾಗೂ ಮಧ್ಯಮ ವರ್ಗದ ಯಾವ ಹೋಟೆಲ್‌ ಕೂಡ ತೆರೆದಿರಲಿಲ್ಲ.  ನಗರದಲ್ಲಿ ಪ್ರತಿ ದಿನ 25 ಲಕ್ಷ ಜನ ಹೊಟೇಲ್‌ ಊಟ, ತಿಂಡಿ ಅವಲಂಬಿಸಿರುವ ಅಂದಾಜಿದ್ದು, 3 ಸಾವಿರಕ್ಕೂ ಅಧಿಕ ಹೊಟೇಲ್‌ ಹಾಗೂ ಲಾಡ್ಜ್ಗಳು  ಸಂಪೂರ್ಣ ಬಂದ್‌ ಆಗಿದ್ದರಿಂದ ಉದ್ಯಮಕ್ಕೆ ಸುಮಾರು 10 ಕೋಟಿ ರೂ.ಗಳ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಲಾಡ್ಜ್ ಮಾಲೀಕರು ಬಂದ್‌ನಲ್ಲಿ ಪಾಲ್ಗೊಂಡಿದ್ದ ಹಿನ್ನೆಲೆಯಲ್ಲಿ ನಗರದ ಶೇಷಾದ್ರಿಪರ, ಮಲ್ಲೇಶ್ವರ, ಶಿವಾನಂದ ವೃತ್ತ, ಕಾರ್ಪೊರೇಷನ್‌, ಚಾಮರಾಜಪೇಟೆ, ಕೆ.ಆರ್‌.ಮಾರುಕಟ್ಟೆ, ಶಿವಾಜಿನಗರ, ಯಶವಂತಪುರ, ಇಂದಿರಾನಗರ ಸೇರಿ ಹಲವೆಡೆ ತಳ್ಳು ಗಾಡಿಯವರಿಗೆ ಭರ್ಜರಿ ವ್ಯಾಪಾರವಾಯಿತು. 

ನಗರದ ಪ್ರಸಿದ್ಧ ಹೋಟೆಲ್‌ಗ‌ಳು ಬಂದ್‌ಗೆ ಬೆಂಬಲ ನೀಡಿದರೆ, ಕೆಲ ಪ್ರತಿಷ್ಠಿತ, ಸಾಮಾನ್ಯ ಮತ್ತು ಮಧ್ಯಮ ದರ್ಜೆ ಹೋಟೆಲ್‌ಗ‌ಳು ತೆರೆದಿದ್ದವು. ಬೀದಿ ಬದಿ ವ್ಯಾಪಾರಿಗಳು ನಿತ್ಯ 20-30 ರೂ.ಗೆ ನೀಡುತ್ತಿದ್ದ ಊಟವನ್ನು ಮಂಗಳವಾರ 50 ರೂ.ಗಳಿಗೆ ಮಾರಟ ಮಾಡಿ ಲಾಭ ಗಳಿಸಿದರು.

ಪ್ರತಿಭಟನೆ: ಜಿಎಸ್‌ಟಿಯಲ್ಲಿ ದುಬಾರಿ ತೆರಿಗೆ ವಿರೋಧಿಸಿ ಬೃಹತ್‌ ಬೆಂಗಳೂರು ಹೋಟೆಲ್‌ಗ‌ಳ ಸಂಘದ ವತಿಯಿಂದ ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ವ್ಯಾಪ್ತಿಯ ಸುಮಾರು 3000 ಹೋಟೆಲ್‌ ಮಾಲೀಕರು ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡು, ತೆರಿಗೆ ವಿನಾಯ್ತಿಗೆ ಆಗ್ರಹಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಜಯ ಕರ್ನಾಟಕ ಸಂಘಟನೆ ಪ್ರತಿನಿಧಿಗಳೂ ಹೋರಾಟಕ್ಕೆ ಸಾಥ್‌ ನೀಡಿದರು. ಮೈಸೂರ್‌ ಬ್ಯಾಂಕ್‌ ವೃತ್ತದಿಂದ ಟೌನ್‌ಹಾಲ್‌ವರೆಗೆ ಜಾಥಾ ಹೊರಟು, ಬಹಿರಂಗ ಸಭೆಯೊಂದಿಗೆ ಪ್ರತಿಭಟನೆ ಸಂಪನ್ನಗೊಂಡಿತು. ಸಂಘದ ಅಧ್ಯಕ್ಷ ಬಿ. ಚಂದ್ರಶೇಖರ ಹೆಬ್ಟಾರ್‌ ಮಾತನಾಡಿ, ಕೇಂದ್ರ ಸರ್ಕಾರದ ಜಿಎಸ್‌ಟಿ  ಕಾಯ್ದೆಯಲ್ಲಿ ಹೋಟೆಲ್‌ಗ‌ಳ ಮೇಲೆ ದುಬಾರಿ ತೆರಿಗೆ ವಿಧಿಸಲಾಗಿದೆ. ಸದ್ಯ ಶೇ.4ರಷ್ಟು ತೆರಿಗೆ ಇದ್ದರೂ, ಗ್ರಾಹಕರಿಗೆ ಹೊರೆಯಾಗದಂತೆ ಆಹಾರ ವಿತರಣೆ ಮಾಡುತ್ತಿದ್ದೇವೆ.

ಕೇಂದ್ರ ಸರ್ಕಾರ ಜಿಎಸ್‌ಟಿ ಮೂಲಕ ಎಸಿ ಹೋಟೆಲ್‌ಗ‌ಳಿಗೆ ಶೇ.18 ಹಾಗೂ ನಾನ್‌ ಎಸಿ ಹೋಟೆಲ್‌ಗ‌ಳಿಗೆ ಶೇ.12ರಷ್ಟು ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ಇದರಿಂದ ಗ್ರಾಹಕರಿಗೆ ನೇರ ಹೊರೆಯಾಗಲಿದೆ ಹಾಗೂ ಹೋಟೆಲ್‌ ನಷ್ಟದಲ್ಲಿ ನಡೆಸಬೇಕಾದ ಪರಿಸ್ಥಿತಿ ಬರಬಹುದು. ಹೀಗಾಗಿ ದುಬಾರಿ ತೆರಿಗೆ ರದ್ದು ಮಾಡಿ, ಏಕರೂಪ ತೆರಿಗೆ ಪದ್ಧತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಬೆಳಗ್ಗೆ 10 ಗಂಟೆಗೆ ಮನೆ ಬಿಟ್ಟರೆ ಮನೆ ಸೇರುವುದು ರಾತ್ರಿಯೇ. ಹೀಗಾಗಿ ಮಧ್ಯಾಹ್ನದ ಊಟಕ್ಕೆ ಹೋಟೆಲ್‌ಗ‌ಳನ್ನೇ ಅವಲಂಬಿಸಿದ್ದೆ. ಮಂಗಳವಾರ ಹೋಟೆಲ್‌ ಬಂದ್‌ ಹೆಚ್ಚು ಬೆಲೆ ನೀಡಿ ತಳ್ಳು ಗಾಡಿಯಲ್ಲಿ ಊಟ ಮಾಡಬೇಕಾಯಿತು.
-ರವಿ, ಖಾಸಗಿ ಸಂಸ್ಥೆ ಉದ್ಯೋಗಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.