![modi (4)](https://www.udayavani.com/wp-content/uploads/2024/07/modi-4-4-415x256.jpg)
ಚಳವಳಿ ಮನಸ್ಥಿತಿಯಿಂದ ಉತ್ತಮ ಸಾಹಿತ್ಯ
Team Udayavani, Feb 13, 2017, 12:34 PM IST
![baraguru-ramachandra.jpg](https://www.udayavani.com/wp-content/uploads/2017/02/13/baraguru-ramachandra-382x465.jpg)
ಬೆಂಗಳೂರು: “ಚಳವಳಿ ಎಂದರೆ ಚಲನ ಶೀಲತೆ. ಆದ್ದರಿಂದ ಉತ್ತಮ ಸಾಹಿತ್ಯ ಕೃತಿಗಳು ಹೊರಬರಬೇಕಾದರೆ ಲೇಖಕನದಲ್ಲಿ ಚಳವಳಿಯ ಮನಃಸ್ಥಿತಿ ಯಾವಾ ಗಲೂ ಜಾಗೃತವಾಗಿರಬೇಕು,” ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.
ನಗರದ ಬಸವನಗುಡಿಯಲ್ಲಿರುವ ವಾಡಿಯಾ ಸಭಾಂಗಣದಲ್ಲಿ ಭಾನುವಾರ ಛಂದ ಪುಸ್ತಕ ಪ್ರಕಾಶನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಐದು ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, “ಚಳವಳಿಯಿಂದ ಚಲನಶೀಲತೆ ಸಾಧ್ಯ. ಈ ಚಲನಶೀಲತೆಯಿಂದ ಸೃಜನಶೀಲತೆ ಬರುತ್ತದೆ. ಈ ಹಿನ್ನೆಲೆಯಲ್ಲಿ ಚಳವಳಿ ಮನಃಸ್ಥಿತಿ ಹೊಂದಿದ ಲೇಖಕರಿಂದ ಉತ್ತಮ ಸಾಹಿತ್ಯ ಕೃತಿಗಳು ಮೂಡಿಬರಲು ಸಾಧ್ಯವಾಗುತ್ತದೆ,” ಎಂದರು.
“ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಪಂಪನ ಕಾಲದಿಂದಲೂ ಚಳವಳಿ ಮನಃಸ್ಥಿತಿ ಕಾಣಬಹುದು. ಮಹಾಭಾರತ ಕಾವ್ಯದಲ್ಲಿ ರಾಜ ಅರಿಕೇಸರಿಯನ್ನು ನಾಯಕನನ್ನಾಗಿಸಿರುವ ಪಂಪ ಕೊನೆ ಯಲ್ಲಿ “ನೆನೆವಡೆ ಕರ್ಣನಂ ನೆನೆಯ’ ಎಂದು ಪ್ರತಿನಾಯಕನನ್ನು ಸೃಷ್ಟಿಸಿದ್ದಾನೆ. ಅದೇ ಚಳವಳಿಯ ಮನಃಸ್ಥಿ” ಎಂದು ಹೇಳಿದರು.
“ಆದರೆ, ಪ್ರಸ್ತುತ ದಿನಗಳಲ್ಲಿ ಸಾಹಿತ್ಯ ಅಥವಾ ಸಾಹಿತಿಗಳಿಗೆ ಚಳವಳಿ ಯೊಂದಿಗೆ ಸಂಬಂಧ ಹೊಂದಿರಬೇಕೇ ಅಥವಾ ಬೇಡವೇ ಎಂಬ ಪ್ರಶ್ನೆ ಉದ್ಭವಿ
ಸಿದೆ. ಆದರೆ, ಚಳವಳಿ ಮನಃಸ್ಥಿತಿಯೇ ಇಲ್ಲದಿದ್ದರೆ ಲೇಖಕ ಜಡವಾಗುತ್ತಾನೆ,” ಎಂದು ಸೂಚ್ಯವಾಗಿ ಹೇಳಿದರು.
“ಸಾಹಿತಿಗಳು ಚಳವಳಿಯಲ್ಲಿ ಭಾಗವಹಿ ಸಬೇಕು ಅಥವಾ ಭಾಗವಹಿಸಬಾರದು ಎಂದು ತಾಕೀತು ಮಾಡುವುದು ಸರಿಯಲ್ಲ. ಚಳವಳಿಯಲ್ಲಿ ಭಾಗವಹಿಸುವುದು ಅಥವಾ ಭಾಗವಹಿಸದೆ ಇರುವುದು ಲೇಖಕನ ಆಸಕ್ತಿ, ಕುತೂಹಲ ಮತ್ತು ಅವರವರ ಸ್ವಾತಂತ್ರಕ್ಕೆ ಬಿಟ್ಟ ವಿಚಾರ,” ಎಂದು ಹೇಳಿದರು.ನಂತರ ಪತ್ರಕರ್ತ ರಘುನಾಥ ಚ.ಹ ಮತ್ತು ಸಾಹಿತಿ ಅರವಿಂದ ಚೊಕ್ಕಾಡಿ ಅವರು ಲೇಖಕರೊಂದಿಗೆ ಸಂವಾದ ನಡೆಸಿದರು.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.