ಹಲವೆಡೆ ಮುಂಗಾರು ಚುರುಕು
Team Udayavani, Jul 5, 2017, 3:00 AM IST
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಜಲಾಶಯಗಳ ಒಳಹರಿವು ಹೆಚ್ಚಳವಾಗಿದೆ. ಇನ್ನೂ ಮೂರ್ ನಾಲ್ಕು ದಿನ ಕರಾವಳಿ ಸೇರಿ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಮಂಗಳವಾರ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಅಲ್ಲಲ್ಲಿ ಮಳೆಯಾಗಿದೆ. ಮುಂದಿನ ಮೂರ್ನಾಲ್ಕು ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗಾವಿ, ಹಾಸನ ಮತ್ತಿತರ ಕಡೆ ಚದುರಿದಂತೆ ಹಾಗೂ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಜುಲೈ 9ರವರೆಗೆ ಈ ವಾತಾವರಣ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ 8.30ಕ್ಕೆ ಕೊಲ್ಲೂರಿನಲ್ಲಿ 15 ಸೆಂ.ಮೀ., ಹೊನ್ನಾವರದಲ್ಲಿ 13 ಸೆಂ.ಮೀ., ಕೊಡಗಿನ ಭಾಗಮಂಡಲ, ಶಿವಮೊಗ್ಗದ ಆಗುಂಬೆ ಯಲ್ಲಿ 6 ಸೆಂ.ಮೀ., ಮಂಗಳೂರು, ಕದ್ರಾ, ಕೊಟ್ಟಿಗೆಹಾರದಲ್ಲಿ 5 ಸೆಂ.ಮೀ., ಲಿಂಗನಮಕ್ಕಿ ಸುತ್ತಮುತ್ತ 4 ಸೆಂ. ಮೀ., ಪಣಂಬೂರು, ಬೆಳ್ತಂಗಡಿ, ಸಿದ್ದಾಪುರ, ಕಾರವಾರ, ಮಡಿಕೇರಿ, ಮಾಣಿ, ಬಂಟ್ವಾಳ, ಶೃಂಗೇರಿ ಮತ್ತಿತರ ಕಡೆ 3ರಿಂದ 4 ಸೆಂ.ಮೀ. ಮಳೆ ದಾಖಲಾಗಿದೆ. ತುಮಕೂರು, ಬೆಳಗಾವಿ, ಕಲಘಟಗಿ, ಯಾದಗಿರಿಯ ಗುರು ಮಿಟ್ಕಲ್, ತ್ಯಾಗರ್ತಿ, ಹೊಸನಗರ, ಚಿಕ್ಕಮಗಳೂರು, ಬಾಳೆಹೊನ್ನೂರು, ಪಂಚನಹಳ್ಳಿ, ಆಲೂರು, ಅರಸೀಕೆರೆ, ಬೆಂಗಳೂರು ನಗರ, ನೆಲಮಂಗಲದಲ್ಲಿ 1 ರಿಂದ 2 ಸೆಂ.ಮೀ. ಮಳೆಯಾಗಿದೆ.
ಒಂದು ದಿನ ಉತ್ತಮ ಮಳೆಯಾದರೆ 100 ಕೋಟಿ ಉಳಿತಾಯ
ಬೆಂಗಳೂರು: ರಾಜ್ಯಾದ್ಯಂತ ಒಂದು ದಿನ ಉತ್ತಮ ಮಳೆಯಾದರೆ 100 ಕೋಟಿ ರೂ. ಉಳಿತಾಯ. ಹೀಗೆಂದು ಹೇಳಿದವರು ಇಂಧನ ಸಚಿವ ಡಿ.ಕೆ.ಶಿವಕುಮಾರ್. ಅವರ ಈ ಹೇಳಿಕೆ ರಾಜ್ಯದ ರೈತರಷ್ಟೇ ಅಲ್ಲದೇ ಇಂಧನ ಇಲಾಖೆಯ ಆರ್ಥಿಕ ಸ್ಥಿತಿಯೂ ಮಳೆಯ ಮೇಲೆಯೇ ಅವಲಂಬಿತವಾಗಿದೆ ಎಂಬುದನ್ನು ಸ್ಪಷ್ಟಪಡಿಸಿದಂತಿತ್ತು. ‘ಇಡೀ ರಾಜ್ಯಾದ್ಯಂತ ಒಂದು ದಿನ ಉತ್ತಮ ಮಳೆಯಾದರೆ ಇಂಧನ ಇಲಾಖೆಗೆ 100 ಕೋಟಿ ಉಳಿತಾಯವಾಗಲಿದೆ. ಈವರೆಗೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವುದು ಆತಂಕ ಮೂಡಿಸಿದೆ. ಇನ್ನೂ ಸ್ವಲ್ಪ ದಿನ ಕಾದು ನೋಡಲಾಗುವುದು. ಮುಂದಿನ ಪರಿಸ್ಥಿತಿ ನೋಡಿಕೊಂಡು ವಿದ್ಯುತ್ ಪೂರೈಕೆ ವ್ಯವಸ್ಥೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ