ಭಾರತ್‌ ಬಂದ್‌ಗೆ ಉತ್ತಮ ಪ್ರತಿಕ್ರಿಯೆ​​​​​​​


Team Udayavani, Sep 11, 2018, 6:00 AM IST

ban11091801.jpg

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಸೇರಿದಂತೆ
ಇತರೆ ಪಕ್ಷಗಳು ಸೋಮವಾರ ಕರೆ ನೀಡಿದ್ದ “ಭಾರತ್‌ ಬಂದ್‌’ ರಾಜ್ಯದಲ್ಲಿ ಬಹುತೇಕ ಯಶಸ್ವಿಯಾಗಿದೆ.

ಸರ್ಕಾರಿ ಸಾರಿಗೆ ಬಸ್‌ಗಳು ಸೇರಿದಂತೆ ಖಾಸಗಿ ಬಸ್‌, ವಾಹನಗಳು, ಆಟೋರಿಕ್ಷಾ, ಕ್ಯಾಬ್‌, ಟ್ಯಾಕ್ಸಿ ಸೇವೆ ಸ್ಥಗಿತಗೊಂಡಿದ್ದರಿಂದ ಜನ ಪರದಾಡುವಂತಾಗಿತ್ತು. ಆಹಾರಧಾನ್ಯ, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳು, ಸರಕು ಸಾಗಣೆಯು ಬಹುಪಾಲು ಸ್ಥಗಿತವಾಗಿದ್ದರಿಂದ ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಜತೆಗೆ ವ್ಯಾಪಾರ, ವಾಣಿಜ್ಯ ವಹಿವಾಟಿನಲ್ಲಿನ ಏರುಪೇರಿನಿಂದಾಗಿ ಕೋಟ್ಯಂತರ ರೂ. ನಷ್ಟವಾಗಿದ್ದರೆ, ರಾಜ್ಯ ಸರ್ಕಾರಕ್ಕೂ ನೂರಾರು ಕೋಟಿ ರೂ. ತೆರಿಗೆ ಖೋತಾ ಉಂಟಾಗಿದೆ.

ಮಣಿಪಾಲ, ಮಂಗಳೂರು, ಉಡುಪಿಯಲ್ಲಿ ಕಾಂಗ್ರೆಸ್‌- ಬಿಜೆಪಿ ಕಾರ್ಯಕರ್ತರ ಘರ್ಷಣೆ,ಬಲವಂತವಾಗಿ ಹೋಟೆಲ್‌ಗ‌ಳನ್ನು ಮುಚ್ಚಿಸಿದ ಘಟನೆಗಳಿಗೆ ಸಂಬಂಧಪಟ್ಟಂತೆ ಪೊಲೀಸರು 10ಕ್ಕೂಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಉಡುಪಿಯಲ್ಲಿ ಲಾಠಿ ಪ್ರಹಾರ ನಡೆಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕಾಗಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಕೆಲವೆಡೆ ಕಲ್ಲು ತೂರಾಟ, ಬಲವಂತವಾಗಿ ಅಂಗಡಿ, ಮುಂಗಟ್ಟು ಮುಚ್ಚಿಸಿದ ಘಟನೆಗಳನ್ನು ಹೊರತು  ಪಡಿಸಿದರೆ ಎಲ್ಲಿಯೂ ಅಹಿತಕರ ಘಟನೆ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಮಧ್ಯಾಹ್ನ ಮೂರು ಗಂಟೆ ಹೊತ್ತಿಗೆ ಬಂದ್‌ಗೆ ತೆರೆ ಬೀಳುತ್ತಿದ್ದಂತೆ ಸರ್ಕಾರಿ ಸಾರಿಗೆ ಬಸ್‌ಗಳು, ಖಾಸಗಿ ಸಾರಿಗೆ ಸೇವೆಯು ಆರಂಭವಾಗಿದ್ದರಿಂದ ಸಂಜೆ ಹೊತ್ತಿಗೆ ಬಹುತೇಕ ವ್ಯಾಪಾರ- ವಹಿವಾಟು ಸಹಜ ಸ್ಥಿತಿಗೆ ಮರಳಿತು.

ಸಾರಿಗೆ ನಿಗಮಕ್ಕೆ 9.34 ಕೋಟಿ ರೂ. ನಷ್ಟ: ಕೆಎಸ್‌ಆರ್‌ಟಿಸಿ ವತಿಯಿಂದ ಸೋಮವಾರ 3,953 ಬಸ್‌ಗಳ ಸಂಚಾರ ರದ್ದಾಗಿತ್ತು. ಪರಿಣಾಮವಾಗಿ 5.34 ಕೋಟಿ ರೂ.ನಷ್ಟು ಆದಾಯ ಖೋತಾ ಉಂಟಾಗಿದೆ. ಬಿಎಂಟಿಸಿಗೂ ಸೋಮವಾರ 4 ಕೋಟಿ ರೂ. ಆದಾಯ ಕಡಿತವಾಗಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

ಸಂಪೂರ್ಣ ಬಂದ್‌
ಮೈಸೂರು, ಚಾಮರಾಜನಗರ, ತುಮಕೂರು, ಧಾರವಾಡ, ಗದಗ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ,ಬಳ್ಳಾರಿ, ಕಾರವಾರ, ಹುಬ್ಬಳ್ಳಿಯಲ್ಲಿ ಬಂದ್‌ ಯಶಸ್ವಿಯಾಗಿತ್ತು. ರಾಮನಗರ, ಮಂಡ್ಯ, ಬೀದರ್‌,ಕೊಪ್ಪಳ, ರಾಯಚೂರು, ಶಿವಮೊಗ್ಗ, ಯಾದಗಿರಿ,ಬೆಳಗಾವಿ, ಬಾಗಲಕೋಟೆ, ವಿಜಯಪುರ,ಹಾವೇರಿಯಲ್ಲಿ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಯಿತು.

2000 ಕೋಟಿ ನಷ್ಟ
ಸೋಮವಾರ ರಾಜ್ಯಾದ್ಯಂತ ವ್ಯಾಪಾರ, ವಾಣಿಜ್ಯ ವಹಿವಾಟು, ಕೈಗಾರಿಕೆ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನ ಆಧಾರಿತ ವಲಯದ ವಹಿವಾಟು ಬಹುತೇಕ ಸ್ಥಗಿತಗೊಂಡಿದ್ದು, ಸುಮಾರು 2000 ಕೋಟಿ ರೂ.ನಷ್ಟವಾಗಿರುವ ಅಂದಾಜು ಇದೆ. ಜತೆಗೆ ರಾಜ್ಯ ಸರ್ಕಾರದ ಬೊಕ್ಕಸಕ್ಕೂ ಸುಮಾರು 180 ಕೋಟಿ ರೂ. ತೆರಿಗೆ ನಷ್ಟ ಉಂಟಾಗಿದೆ. ಹಬ್ಬದ ಸಂದರ್ಭವಾದ್ದರಿಂದ ವ್ಯಾಪಾರ- ವಹಿವಾಟಿಗೆ ತೀವ್ರ ಹೊಡೆತ ಬಿದ್ದಿದೆ. ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಮ್ಮ ಪಾಲಿನ ಆದಾಯದಲ್ಲಿ ಸ್ವಲ್ಪ ಬಿಟ್ಟುಕೊಡುವ ಮೂಲಕ ಜನರ ಮೇಲಿನ ಹೊರೆ ತಗ್ಗಿಸಬೇಕು ಎಂದು ಎಫ್ಕೆಸಿಸಿಐ ಅಧ್ಯಕ್ಷ ಸುಧಾಕರ್‌ ಎಸ್‌.ಶೆಟ್ಟಿ ಹೇಳಿದ್ದಾರೆ.

ಕೇಂದ್ರದ ವಿರುದ್ಧ ಕಿಡಿ
ನವದೆಹಲಿ:
ದೇಶಾದ್ಯಂತ ನಡೆದ ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಮಿಜೋರಾಂ ಹೊರತುಪಡಿಸಿ, ಕಾಂಗ್ರೆಸ್‌ ಹಾಗೂ ವಿಪಕ್ಷಗಳು ಆಡಳಿತವಿರುವ ರಾಜ್ಯಗಳಾದ ಕರ್ನಾಟಕ, ಪಂಜಾಬ್‌, ಕೇರಳ ಮುಂತಾದೆಡೆ ಮಾತ್ರ ಬಂದ್‌ಗೆ ಬೆಂಬಲ ಸಿಕ್ಕಿತ್ತು. ಗೋವಾದಲ್ಲಿ ಪ್ರತಿಭಟನೆ ನಡೆಯಲಿಲ್ಲ. ಪುದುಚೇರಿಯಲ್ಲಿ ಮಾತ್ರ ಅಲ್ಲಲ್ಲಿ ಪ್ರತಿಭಟನೆ, ಕಲ್ಲು ತೂರಾಟ ನಡೆದವು. ಇನ್ನು, ಬಿಜೆಪಿ ಹಾಗೂ ಮಿತ್ರಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ನೀರಸ ಪ್ರತಿಕ್ರಿಯೆ ಇತ್ತು. ದೆಹಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ 21 ಪಕ್ಷಗಳಿಂದ ಪ್ರತಿಭಟನೆ ನಡೆಯಿತು. ಈ ಮಧ್ಯೆ ಪ್ರತಿಭಟನೆಯಿಂದಾಗಿ ಬಿಹಾರದ ಜೆಹಾನಾಬಾದ್‌ ಜಿಲ್ಲೆಯ ಬಲಾಬಿಘಾ ಎಂಬ ಹಳ್ಳಿಯಿಂದ ಅತಿಸಾರದಿಂದ ಅಸ್ವಸ್ಥಗೊಂಡಿದ್ದ ಗೌರಿ ಕುಮಾರಿ (2) ಎಂಬ ಮಗುವೊಂದು ಆಸ್ಪತ್ರೆಗೆ ಸಕಾಲದಲ್ಲಿ ಸಾಗಿಸಲು ಸಾಧ್ಯವಾಗದಿದ್ದರಿಂದ ಸಾವನ್ನಪ್ಪಿದೆ.

ಇತರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ದರವೂ ಕಮ್ಮಿ ಇದೆ. ಆದರೂ ಸೆಸ್‌ ಕಡಿಮೆ ಮಾಡುವ ಚಿಂತನೆ ಇದೆ. ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು.
– ಎಚ್‌.ಡಿ.ಕುಮಾರಸ್ವಾಮಿ, ಸಿಎಂ

ಜನವಿರೋಧಿ ನೀತಿ ಅನುಸರಿಸುತ್ತಿರುವ ಮೋದಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ವಿಪಕ್ಷಗಳು ಒಗ್ಗೂಡಬೇಕು.
– ಮನಮೋಹನ್‌ ಸಿಂಗ್‌, ಮಾಜಿ ಪ್ರಧಾನಿ

ಬಂದ್‌ನಿಂದಾಗಿ ಬಿಹಾರದಲ್ಲಿ ಮಗು ಸಾವನ್ನಪ್ಪಿದ್ದು, ಇದರ ನೈತಿಕ ಹೊಣೆಯನ್ನು ರಾಹುಲ್‌ ಗಾಂಧಿ ಹೊರುವರೇ?
– ರವಿಶಂಕರ್‌ ಪ್ರಸಾದ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.