ಭಾನ್ಕುಳಿ ಮಠದಲ್ಲಿ ಗೋಸ್ವರ್ಗ ಚಾತುರ್ಮಾಸ್ಯ


Team Udayavani, Jul 23, 2018, 12:06 PM IST

bankuli.jpg

ಬೆಂಗಳೂರು: ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ತಮ್ಮ ಚಾತುರ್ಮಾಸ್ಯವನ್ನು ಈ ಬಾರಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭಾನ್ಕುಳಿ ಮಠದಲ್ಲಿ ಹಮ್ಮಿಕೊಂಡಿದ್ದಾರೆ.

ಈ ಬಾರಿಯ ಚಾತುರ್ಮಾಸ್ಯವನ್ನು ಗೋಸೇವೆಗಾಗಿ ಮೀಸಲಿಟ್ಟಿದ್ದು, ಜು.27ರಿಂದ ಬಾನ್ಕುಳಿಯಲ್ಲಿ ಗೋಸ್ವರ್ಗ-ಚಾತುರ್ಮಾಸ್ಯ ಹಮ್ಮಿಕೊಂಡಿರುವುದಾಗಿ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದ್ದಾರೆ.

ಹಂಪಿನಗರದ ಶ್ರೀ ಭಾರತೀ ವಿದ್ಯಾಲಯದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಜು.27ರಿಂದ ಸೆ.25ರವರೆಗೆ 25ನೇ ಚಾತುರ್ಮಾಸ್ಯ ನಡೆಯಲಿದೆ. ರಾಮಚಂದ್ರಪುರ ಮಠದ ಮೂಲ ಮಠದಲ್ಲಿ ನಿರ್ಮಿಸಿರುವ ಗೋ ಸ್ವರ್ಗದಲ್ಲಿ ನಡೆಯುವ ಚಾತುರ್ಮಾಸ್ಯಕ್ಕೆ ಒಂದುವರೆ ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆ ಇದೆ.

ಪ್ರತಿ ದಿನವೂ ಕಾಮಧೇನು ಹವನ, ಶ್ರೀಕರಾರ್ಚಿತ ಪೂಜೆ, ಮಾತೆಯರಿಂದ ಕುಂಕುಮಾರ್ಚನೆ, ಭಜನ ರಾಮಾಯಣ ಪಠಣ, ಸ್ವರ್ಗ ಸಮ್ಮಾನ, ಶ್ರೀಮದ್ಭಾಗವತ ಪ್ರವಚನ, ಕಲೋಪಾಸನೆ, ಗೋಗಂಗಾರತಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸಿದ್ದಾಪುರ ತಾಲೂಕಿನ ಭಾನ್ಕುಳಿ ಮಠದ ಸುಮಾರು 100 ಎಕರೆ ಪ್ರದೇಶದಲ್ಲಿ ನಿರ್ಮಿಸಿರುವ ಗೋ ಸ್ವರ್ಗದಲ್ಲಿ ಒಂದು ಸಾವಿರಕ್ಕೂ ಅಧಿಕ ದೇಸಿ ತಳಿ ಹಸುಗಳಿವೆ. ಅಲ್ಲಿರುವ ಗೋವುಗಳು ತಮಗೆ ಬೇಕಾದ ಸಮಯದಲ್ಲಿ ತಮಗೆ ಬೇಕಾದ ಆಹಾರ ತಿನ್ನಬಹುದು. ಗೋವುಗಳ ವಿಶ್ರಾಂತಿಗಾಗಿ ಗೋವಿರಾಮ ಮಂಟಪ, ಮೇವುಗಳ ಸಂಗ್ರಹಣೆ, ಗೋ ಉತ್ಪನ್ನ ಇತ್ಯಾದಿ ಎಲ್ಲವೂ ಲಭ್ಯವಿದೆ. ಈ ಬಾರಿ ಆ ಗೋವುಗಳ ಮಧ್ಯೆಯೇ ಚಾತುರ್ಮಾಸ್ಯ ಹಮ್ಮಿಕೊಂಡಿದ್ದೇನೆ ಎಂದರು.

ಚಾತುರ್ಮಾಸ್ಯದಲ್ಲಿ ವ್ಯಾಸಪೂಜೆ, ಚಾತುರ್ಮಾಸ್ಯ ವ್ರತಸಂಕಲ್ಪ, ರಾಷ್ಟ್ರೀಯ ಗವ್ಯ ಸಮ್ಮೇಳನ, ಸ್ವರ್ಗಸಂಗೀತ ಸಂಭ್ರಮ, ಸ್ವರ್ಗಯಕ್ಷ ಸಂಭ್ರಮ, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ಚಾತುರ್ಮಾಸ್ಯ ಪ್ರಶಸ್ತಿ ಪ್ರದಾನ ಹಾಗೂ ಸೀಮೋಲ್ಲಂಘನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿವೆ. ಜನರು ಮತ್ತು ಗೋವುಗಳನ್ನು ಸಂಪರ್ಕಿಸುವ ಕೆಲಸ ಇದಾಗಿದೆ ಎಂದು ಹೇಳಿದರು.

ಚಾತುರ್ಮಾಸ್ಯದ ಮೂಲಕ ಮಾನವೀಯ ಅನುಕಂಪದ ಗೋ ಸ್ವರ್ಗ ಯೋಜನೆಯನ್ನು ಜನರಿಗೆ ಪರಿಚಯಿಸುವ ಕಾರ್ಯ ನಡೆಯಲಿದೆ. ಹಾಗೆಯೇ ನವೆಂಬರ್‌ ತಿಂಗಳಲ್ಲಿ ಗೋ ಸ್ವರ್ಗದಲ್ಲಿ ಗೋ ನವರಾತ್ರಿ ಆಯೋಜಿಸಲಿದ್ದೇವೆ. ಗೋ ಜಪದ ಜತೆಗೆ ಗೋ ಪೂಜೆ ಇರಲಿದೆ.
-ರಾಘವೇಶ್ವರ ಭಾರತೀ ಸ್ವಾಮೀಜಿ

ಟಾಪ್ ನ್ಯೂಸ್

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.