ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಸಕಾಲಿಕ ತೀರ್ಮಾನ


Team Udayavani, Nov 26, 2018, 6:40 AM IST

ban26111813medn.jpg

ಬೆಂಗಳೂರು: ಅಂಬರೀಶ್‌ ಪಾರ್ಥಿವ ಶರೀರದ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರತಿ ಹಂತದಲ್ಲೂ ಎಚ್ಚರಿಕೆ ವಹಿಸಿ ಸಕಾಲಿಕ ತೀರ್ಮಾನ ಕೈಗೊಂಡಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಪರಮೇಶ್ವರ್‌ ಶನಿವಾರ ರಾತ್ರಿಯಿಂದಲೇ ನಿರಂತರವಾಗಿ, ಡಾ.ರಾಜ್‌ಕುಮಾರ್‌ ಅವರ ಕುಟುಂಬ ಹಾಗೂ ಅಂಬರೀಶ್‌ ಕುಟುಂಬ ಸದಸ್ಯರ ಜತೆ, ಪೊಲೀಸ್‌ ಅಧಿಕಾರಿಗಳು ಹಾಗೂ ಇತರೆ ಹಿರಿಯ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದು, ಕಾನೂನು ಸುವ್ಯವಸ್ಥೆ ಸೇರಿ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡರು. ಅಂಬರೀಶ್‌ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ ಹಾಗೂ ಅಂತ್ಯಕ್ರಿಯೆ ವಿಚಾರದಲ್ಲಿ ತೀರ್ಮಾನ ಕೈಗೊಂಡರು.

ಅಭಿಮಾನಿಗಳಿಂದ ಅಂತಿಮ ದರ್ಶನ:
ಆಸ್ಪತ್ರೆಯಿಂದ ತಡರಾತ್ರಿ ಅಂಬರೀಶ್‌ ಅವರ ಜೆಪಿ ನಗರ ನಿವಾಸಕ್ಕೆ ಪಾರ್ಥಿವ ಶರೀರ ಕೊಂಡೊಯ್ದು, ಭಾನುವಾರ ಬೆಳಗ್ಗೆ ಕಂಠೀರವ ಕ್ರೀಡಾಂಗಣಕ್ಕೆ ತರಲಾಯಿತು. ನಂತರ ಮಂಡ್ಯ ಹಾಗೂ ಮೈಸೂರು ಭಾಗದಿಂದ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ ಬೆಂಗಳೂರಿನತ್ತ ಬರಬಹುದೆಂದು ಗುಪ್ತಚರ ವಿಭಾಗದ ಮಾಹಿತಿ ಹಾಗೂ ಮಂಡ್ಯಕ್ಕೆ ಪಾರ್ಥಿವ ಶರೀರ ತರಲೇಬೇಕೆಂಬ ಅಭಿಮಾನಿಗಳ ಬೇಡಿಕೆ ಹಿನ್ನೆಲೆಯಲ್ಲಿ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ತೀರ್ಮಾನಿಸಲಾಯಿತು.

ಅದಕ್ಕೂ ಮುನ್ನ ಎಚ್‌.ಡಿ.ದೇವೇಗೌಡರ ಸೂಚನೆ ಮೇರೆಗೆ ಸೇನಾ ಹೆಲಿಕಾಪ್ಟರ್‌ಗಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಹೆಲಿಕಾಪ್ಟರ್‌ ವ್ಯವಸ್ಥೆಗಾಗಿ ಮನವಿ ಮಾಡಿದರು. ಅಂಬರೀಶ್‌ ಕೇಂದ್ರದ ಮಾಜಿ ಸಚಿವರೂ ಆಗಿದ್ದರಿಂದ ನಿರ್ಮಲಾ ಸೀತಾರಾಮನ್‌ ಅವರು ಬೆಂಗಳೂರಿನಲ್ಲಿರುವ ಸೇನಾ ವಿಭಾಗದ ಮುಖ್ಯಸ್ಥರನ್ನು ಸಂಪರ್ಕಿಸಿ ವ್ಯವಸ್ಥೆ ಮಾಡುವಂತೆ ಸೂಚಿಸಿ ಒಪ್ಪಿಗೆ ನೀಡಿದರು. ಆ ನಂತರ ಕುಮಾರಸ್ವಾಮಿ ಅಧಿಕೃತವಾಗಿ ಮಂಡ್ಯಕ್ಕೂ ಪಾರ್ಥಿವ ಶರೀರ ಬರಲಿದೆ ಎಂದು ಘೋಷಿಸಿದರು.

ಸಿಎಂಗೆ ಡಿಸಿಎಂ, ಸಚಿವರ ಸಾಥ್‌:
ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲು ಖುದ್ದು ಸಿಎಂ ಕುಮಾರಸ್ವಾಮಿ, ಡಾ.ಜಿ.ಪರಮೇಶ್ವರ್‌ ಸಹಿತ ಸಚಿವರು ಹಾಜರಿದ್ದು, ಅಚ್ಚುಕಟ್ಟಾದ ವ್ಯವಸ್ಥೆ ಆಗುವಂತೆ ನೋಡಿಕೊಂಡರು. ಗಣ್ಯರಿಗೆ, ಅತಿ ಗಣ್ಯರಿಗೆ, ಸಾರ್ವಜನಿಕರು ಹಾಗೂ ಅಭಿಮಾನಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿದ್ದರಿಂದ ಅಲ್ಲಿಯೂ ನೂಕು ನುಗ್ಗಲು ಅಥವಾ ಇತರೆ ಅಹಿತಕರ ಘಟನೆಗಳಿಗೆ ಅವಕಾಶ ಇಲ್ಲದಂತಾಯಿತು.

ಮದ್ಯ ಮಾರಾಟ ನಿಷೇಧ:
ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವ ದೃಷ್ಟಿಯಿಂದ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಭಾನುವಾರ ಬೆಳಗ್ಗೆಯಿಂದ ಸೋಮವಾರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಮುಖ್ಯ ಕಾರ್ಯದರ್ಶಿ, ನಗರ ಪೊಲೀಸ್‌ ಆಯುಕ್ತರು ಸೇರಿ ಹಿರಿಯ ಅಧಿಕಾರಿಗಳು ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂತ್ಯಕ್ರಿಯೆಗೆ ಬೇಕಾದ ವ್ಯವಸ್ಥೆ ಹಾಗೂ ಜಾಗ ಮಂಜೂರಾತಿ ಪ್ರಕ್ರಿಯೆ ಪೂರ್ಣಗೊಳಿಸಿದರು.

ಭಾವೋದ್ವೇಗಕ್ಕೆ ಒಳಗಾಗಬೇಡಿ: ಸಿಎಂ ಮನವಿ
ಮದ್ದೂರಿನಲ್ಲಿ ಅಂಬರೀಶ್‌ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದ ಹಿನ್ನೆಲೆಯಲ್ಲಿ, ಕಂಠೀರವ ಕ್ರೀಡಾಂಗಣದಲ್ಲಿದ್ದ ಸಿಎಂ ಕುಮಾರಸ್ವಾಮಿ ಅವರು ಆ ಕ್ಷಣದಲ್ಲೇ ಭಾವೋದ್ವೇಗಕ್ಕೆ ಒಳಗಾಗದಂತೆ ಜನತೆಗೆ ಮನವಿ ಮಾಡಿಕೊಂಡರು. ಮಾಧ್ಯಮಗಳ ಮೂಲಕ ಸಂದೇಶ ರವಾನಿಸಿದ ಅವರು, ಅಭಿಮಾನಿಗಳು ಯಾರೂ ಭಾವೋದ್ವೇಗಕ್ಕೆ ಒಳಗಾಗಬೇಡಿ. ನಿಮ್ಮ ಅಮೂಲ್ಯ ಜೀವ ಕಳೆದುಕೊಂಡು ಪೋಷಕರಿಗೆ ನೋವು ಕೊಡಬೇಡಿ ಎಂದು ಮನವಿ ಮಾಡಿದರು.

ನಿಮ್ಮೆಲ್ಲರ ಒತ್ತಾಯಕ್ಕೆ ಗೌರವ ನೀಡಿ ಮಂಡ್ಯದಲ್ಲೇ ಅಂಬರೀಶ್‌ ಅವರ ಪಾರ್ಥಿವ ಶರೀರ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಯಾವುದೇ ಅತಿರೇಕದ ಹೆಜ್ಜೆ ಇಡಬೇಡಿ, ಅಂಬಿಗೆ ಗೌರವಪೂರ್ಣ ವಿದಾಯ ಹೇಳ್ಳೋಣ. ಅದು ನಮ್ಮ ಕರ್ತವ್ಯ ಎಂದು ಮನವಿ ಮಾಡಿದರು. ಮಂಡ್ಯಕ್ಕೆ ಪಾರ್ಥಿವ ಶರೀರ ಬಂದಾಗ ಸಾರ್ವಜನಿಕ ದರ್ಶನದ ನಂತರ ಮತ್ತೆ ಕಂಠೀರವ ಕ್ರೀಡಾಂಗಣಕ್ಕೆ ತರಲಾಗುವುದು. ಅಲ್ಲೇ ಅಂತ್ಯಕ್ರಿಯೆ ನಡೆಸಬೇಕೆಂದು ಯಾರೂ ಹಠ ಹಿಡಿಯಬಾರದು. ಅಂಬರೀಶ್‌ ಹೆಸರು ಶಾಶ್ವತವಾಗಿ ಉಳಿಯುವ ನಿಟ್ಟಿನಲ್ಲಿ ಸರ್ಕಾರ ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ನಡೆಸಲು ತೀರ್ಮಾನ ಕೈಗೊಂಡಿದೆ. ಇಲ್ಲಿ ಸ್ಮಾರಕವೂ ಆಗಲಿದೆ ಎಂದು ಪದೇಪದೆ ಮಾಧ್ಯಮಗಳ ಮೂಲಕ ಹೇಳಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.