ತೀರ್ಥಕ್ಷೇತ್ರ ದರ್ಶನಕ್ಕೆ ಸರ್ಕಾರದ ಯೋಜನೆ “ಪುನೀತ ಯಾತ್ರೆ’


Team Udayavani, Jul 31, 2017, 6:30 AM IST

Ban31071707Medn.jpg

ಬೆಂಗಳೂರು: ಚುನಾವಣೆಗಳು ಸಮೀಪಿಸಿದಂತೆಲ್ಲ ಆಡಳಿತರೂಢ ಸರ್ಕಾರಗಳು ಜನರನ್ನು ಸೆಳೆಯುವ
ಸಲುವಾಗಿ ಜನಪ್ರಿಯ ಯೋಜನೆಗಳನ್ನು ಘೋಷಿಸುವುದು, ಜಾರಿಗೆ ತರುವುದು ಸಹಜ. ಅಂತೆಯೇ ಕರ್ನಾಟಕ ರಾಜ್ಯ
ಸರ್ಕಾರವು ಇದುವರೆಗೆ ಜಾರಿಗೊಳಿಸಿರುವ “ಭಾಗ್ಯ’ಗಳ ಜತೆಗೆ ಪ್ರವಾಸೋದ್ಯಮ ಇಲಾಖೆ ಮೂಲಕ “ಪುನೀತ ಯಾತ್ರೆ’ ಎಂಬ ನೂತನ ಯೋಜನೆಯೊಂದನ್ನು ಸದ್ಯದಲ್ಲೇ ಘೋಷಣೆ ಮಾಡಲಿದೆ.

ಜೀವನ ಯಾತ್ರೆ ಮುಗಿಸುವುದರೊಳಗೆ ಒಮ್ಮೆ ಪ್ರಸಿದ್ಧ ಪುಣ್ಯಕ್ಷೇತ್ರಗಳ ತೀರ್ಥಯಾತ್ರೆ ಮಾಡಬೇಕೆಂಬ ಬಯಕೆ
ಎಲ್ಲಾ ಆಸ್ತಿಕರಿಗೂ ಇರುತ್ತದೆ. ಆದರೆ, ಬಹುತೇಕರಿಗೆ ತಮ್ಮ ಬಯಕೆಯನ್ನು ಈಡೇರಿಸಿಕೊಳ್ಳಲು ಸಾಧ್ಯವಾಗದೆ
ಕೊರಗುತ್ತಿರುತ್ತಾರೆ. ಈ ಕೊರಗನ್ನು ನಿವಾರಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರವಾಸೋದ್ಯಮ ಇಲಾಖೆ ಮೂಲಕ ರಾಜ್ಯ ಪ್ರವಾಸೋದ್ಯಮ ಅಭಿವೃದಿಟಛಿ ನಿಗಮದ ಉಸ್ತುವಾರಿಯಲ್ಲಿ “ಪುನೀತ ಯಾತ್ರೆ’ ಎಂಬ ತೀರ್ಥಕ್ಷೇತ್ರಗಳ ಪ್ರವಾಸ ಯೋಜನೆಯನ್ನು ಸಿದ್ಧಪಡಿಸಿದೆ.

ಶೇ.25 ಸಹಾಯಧನ: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಪುನೀತ ಯಾತ್ರೆಯ ಉಸ್ತುವಾರಿ ವಹಿಸಿಕೊಳ್ಳಲಿದ್ದು, ಪುನೀತ ಯಾತ್ರೆಯ ಪ್ರತಿ ಯಾತ್ರಾರ್ಥಿಗೆ 2,844 ರೂ. ವೆಚ್ಚವನ್ನು ಆಂದಾಜು ಮಾಡಲಾಗಿದೆ. ಅದರಲ್ಲಿ ಸರ್ಕಾರವು ಶೇ.25 ಸಹಾಯಧನ ನೀಡಲಿದೆ. ಉಳಿದ ವೆಚ್ಚವನ್ನು ಯಾತ್ರಾರ್ಥಿಗಳೇ ಭರಿಸಬೇಕು. ಮೊದಲ ವರ್ಷದಲ್ಲಿ 1,38,648 ಯಾತ್ರಾರ್ಥಿಗಳು ಪುನೀತ ಯಾತ್ರೆಗೆ ತೆರಳಲಿದ್ದು, ಪುನೀತ ಯಾತ್ರೆಗೆ ನಿಗಮವು ತನ್ನ ಬಸ್‌ಗಳನ್ನೇ ಬಳಸಲಿದೆ.

21 ಮಾರ್ಗ ಅಂತಿಮ: ಈ ಸಂಬಂಧ ರಾಜ್ಯ ಸರ್ಕಾರ ಜು.11ರಂದೇ ಅದೇಶ ಹೊರಡಿಸಿದ್ದು, ಆಗಸ್ಟ್‌ ಅಂತ್ಯದೊಳಗೆ
ಯೋಜನೆಗೆ ಚಾಲನೆಯೂ ಸಿಗಲಿದೆ. ಪುನೀತ ಯಾತ್ರೆಗೆ ಪ್ರಯಾಣಿಕರನ್ನು ಸೆಳೆಯಬಲ್ಲ ಧಾರ್ಮಿಕ ಮತ್ತು ಸಾಮಾಜಿಕವಾಗಿ ಪ್ರಭಾವ ಬೀರುವ ಮಾರ್ಗಗಳನ್ನು ಸೇರಿಸಿ ರಾಜ್ಯ ಮತ್ತು ಹೊರರಾಜ್ಯದ 21 ಪ್ರಮುಖ ಸ್ಥಳಗಳ ಮಾರ್ಗವನ್ನು ಅಂತಿಮಗೊಳಿಸಲಾಗಿದೆ.

ಈ ಮಾರ್ಗದಲ್ಲಿ ಎಲ್ಲಾ ಜಾತಿ ಧರ್ಮದವರಿಗೂ ಅವಕಾಶ ನೀಡುವ ಉದ್ದೇಶದಿಂದ ಎಲ್ಲಾ ಜಾತಿ ಧರ್ಮದವರ
ಪುಣ್ಯಕ್ಷೇತ್ರಗಳನ್ನೊಳಗೊಂದ 21 ಮಾರ್ಗವನ್ನು ಗುರುತಿಸಲಾಗಿದೆ. ಆದರೆ ಸಂದರ್ಭಕ್ಕನುಗುಣವಾಗಿ ಸಣ್ಣಪುಟ್ಟ
ಬದಲಾವಣೆ ಮಾಡಿಕೊಳ್ಳಬಹುದು. ಪ್ರವಾಸಕ್ಕೆ ಹೋಗುವವರು ತಮ್ಮಿಷ್ಟದ ಕ್ಷೇತ್ರ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಬಹುದು. ಆ ಸ್ಥಳಕ್ಕೆ ಬೇರೆಯವರೂ ಹೋಗುವುದಕ್ಕೆ ಯಾವುದೇ ನಿರ್ಬಂಧವಿಲ್ಲ. ಅಂತಿಮವಾಗಿ ಸಣ್ಣಪುಟ್ಟ ಬದಲಾವಣೆ ಮಾಡಲಾಗುತ್ತದೆ. ಪುನೀತ ಯಾತ್ರೆಯ ಸ್ಥಳ ಹಾಗೂ ಮಾರ್ಗವನ್ನು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರ ಸಮ್ಮುಖದಲ್ಲೇ ಅಂತಿಮಗೊಳ್ಳಲಿದೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪುನೀತ ಯಾತ್ರೆ ಯೋಜನೆಯನ್ನು ಆದಷ್ಟು ಶೀಘ್ರದಲ್ಲೇ ಘೋಷಣೆ ಮಾಡಲಿದ್ದೇವೆ. ಇದು ಯಾವುದೇ ಜಾತಿ, ಧರ್ಮದವರನ್ನು ಪ್ರೇರೇಪಿಸುವ ಯೋಜನೆಯಲ್ಲ. 21 ಮಾರ್ಗವನ್ನು ಅಂತಿಮಗೊಳಿಸಿದ್ದೇವೆ. ಯೋಜನೆ
ಯಲ್ಲಿರುವ ಕೆಲವೊಂದು ನ್ಯೂನತೆಯನ್ನು ಸರಿಪಡಿಸಿ, ಮುಖ್ಯಮಂತ್ರಿಯರ ಅನುಮತಿ ಪಡೆದು, ಅವರ ಮೂಲಕವೇ ಚಾಲನೆ ನೀಡಲಾಗುತ್ತದೆ.

– ಪ್ರಿಯಾಂಕ ಖರ್ಗೆ,
ಪ್ರವಾಸೋದ್ಯಮ ಸಚಿವ.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.