ಸಜಾ ಕೈದಿಗಳ ಕೂಲಿ ದರ ಹೆಚ್ಚಳ ಮಾಡಿದ ಸರ್ಕಾರ


Team Udayavani, Apr 13, 2018, 6:40 AM IST

Saja-prisoners-karnataka.jpg

ಬೆಂಗಳೂರು: ರಾಜ್ಯದ ಎಲ್ಲ ಕಾರಾಗೃಹಗಳಲ್ಲಿರುವ ಸಜಾಕೈದಿಗಳನ್ನು ನಾಲ್ಕು ವರ್ಗಗಳನ್ನಾಗಿ ವಿಂಗಡಿಸಿ, ಅವರ ಕೂಲಿ ದರವನ್ನು 175 ರೂ.ನಿಂದ 250 ರೂ.ವರೆಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇತ್ತೀಚೆಗೆ ಕಾರಾಗೃಹ ಇಲಾಖೆಯ ಮುಖ್ಯಸ್ಥರು ಎಲ್ಲಾ ಸಜಾಕೈದಿಗಳ ಕೂಲಿ ದರ ಹೆಚ್ಚಿಸಲು ಮನವಿ ಮಾಡಿದ್ದರು. ಈ ಸಂಬಂಧ ಕಾರ್ಮಿಕ ಇಲಾಖೆ ಆಯುಕ್ತರು, ಗೃಹ ಇಲಾಖೆಯ ಅಪರ ಕಾರ್ಯದರ್ಶಿ, ಆರ್ಥಿಕ ಇಲಾಖೆಯ ವಿಶೇಷಾಧಿಕಾರಿ, ಸರ್ಕಾರದ ಉಪ ಕಾರ್ಯದರ್ಶಿ(ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ), ಕಾರಾಗೃಹ ಇಲಾಖೆಯ ಹೆಚ್ಚುವರಿ ಮಹಾನಿರೀಕ್ಷಕರು ಹಾಗೂ ಬೆಂಗಳೂರು ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷರನ್ನೊಳಗೊಂಡ ಮಂಡಳಿ ಮಾಡಿದ್ದ ಶಿಫಾರಸಿನಂತೆ ಕೂಲಿ ದರ ಹೆಚ್ಚಿಸಲಾಗಿದೆ.

ಈ ಮೊದಲು ಸಜಾ ಕೈದಿಗಳನ್ನು ತರಬೇತಿ ಕೆಲಸಗಾರ ಬಂಧಿ, ಕುಶಲ ಬಂಧಿ ಹಾಗೂ ಹೆಚ್ಚಿನ ಕುಶಲ ಬಂಧಿಗಳು ಎಂದು ವಿಂಗಡಿಸಲಾಗಿತ್ತು. ಆದರೆ, ಮಂಡಳಿಯ ಶಿಫಾರಸಿನಂತೆ ಅಕುಶಲ(ತರಬೇತಿ ಕೆಲಸಗಾರ ಬಂಧಿ), ಅರೆಕುಶಲ, ಕುಶಲ ಮತ್ತು ಅತೀ ಕುಶಲ ಎಂದು ನಾಲ್ಕು ವರ್ಗಗಳನ್ನಾಗಿ ವಿಂಗಡಿಸಲಾಗಿದ್ದು, ಆಹಾರ ಮತ್ತು ಬಟ್ಟೆಯ ವೆಚ್ಚದ ಮೊತ್ತ ಕಡಿತಗೊಳಿಸಿ ಇನ್ನುಳಿದ ಹಣವನ್ನು ಕೈದಿಯ ಖಾತೆಗೆ ಜಮೆ ಮಾಡಲಾಗುತ್ತದೆ. ಮಹಿಳೆ ಮತ್ತು ಪುರುಷ ಎಂಬ ಯಾವುದೇ ಬೇಧವಿಲ್ಲದೇ ಕೂಲಿ ದರ ನಿಗದಿ ಪಡಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಸಜಾ ಕೈದಿ ಮಾಡುವ 8 ಗಂಟೆಗಳ ಕೆಲಸಕ್ಕೆ ಕೂಲಿ ದರ ನಿಗದಿ ಪಡಿಸಲಾಗಿದೆ. ತರಬೇತಿ ಕೆಲಸಗಾರ ಬಂಧಿ ಕನಿಷ್ಠ ಒಂದು ವರ್ಷ ತರಬೇತಿ ಪಡೆದ ನಂತರ ಅರೆಕುಶಲ ಕೆಲಸಗಾರ ಬಂಧಿಗೆ ಬಡ್ತಿ ಪಡೆಯುತ್ತಾನೆ. ಇಲ್ಲಿ ಎರಡು ವರ್ಷ ಪೂರ್ಣಗೊಳಿಸಿದ ಬಳಿಕ ಕುಶಲ ಬಂಧಿಯಾಗಿ ಮುಂಬಡ್ತಿ ಪಡೆದು, ಅಲ್ಲಿ ಕನಿಷ್ಠ ಮೂರು ವರ್ಷಗಳನ್ನು ಪೂರ್ಣಗೊಳಿಸಿದ ನಂತರ ಹೆಚ್ಚಿನ ಕುಶಲ ಬಂಧಿಯಾಗಿ ಗುರುತಿಸಿಕೊಳ್ಳುತ್ತಾನೆ. ಕೈದಿಯ ತಾಂತ್ರಿಕ ವಿದ್ಯಾರ್ಹತೆ, ಅನುಭವ ಹಾಗೂ ಬಂಧಿಯ ಸನ್ನಡತೆ ನಡವಳಿಕೆ ಆಧರಿಸಿ ಮುಂಬಡ್ತಿ ನೀಡಲಾಗುತ್ತದೆ. ಈ ಪ್ರಕ್ರಿಯೆ ಪ್ರತಿ ಹಂತದ ಬಡ್ತಿಯಲ್ಲೂ ಪರಿಗಣನೆಯಾಗುತ್ತದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.