ಸರ್ಕಾರಿ ಶಾಲಾ ಮಕ್ಕಳಿಗೂ ಸಿಗಲಿದೆ ಶಾಲಾಡೈರಿ


Team Udayavani, Sep 29, 2018, 6:15 AM IST

dairy-distributi.jpg

ಬೆಂಗಳೂರು : ಖಾಸಗಿ ಶಾಲೆಗಳ ಮಾದರಿಯಲ್ಲೇ ಸರ್ಕಾರಿ ಶಾಲೆಗಳಲ್ಲೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿಯ ಮೇಲ್ವಿಚಾರಣೆ ಹಾಗೂ ಪಾಲಕ- ಪೋಷಕರೊಂದಿಗೆ ಶಿಕ್ಷಕರು ನಿಯಮಿತವಾಗಿ ಮಾಹಿತಿ ವಿನಿಯಮಕ್ಕೆ  ಪೂರಕವಾಗುವ ಡೈರಿ ವ್ಯವಸ್ಥೆ ಜಾರಿಗೆ ತರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

ಪ್ರಸಕ್ತ ಸಾಲಿನಿಂದಲೇ  ಈ ಯೋಜನೆ ಅನುಷ್ಠಾನಕ್ಕೆ ಬರಲಿದ್ದು, ದಸರಾ ರಜೆ ಮುಗಿದ ನಂತರ ಅಕ್ಟೋಬರ್‌ ಅಂತ್ಯದೊಳಗೆ ಸರ್ಕಾರಿ ಶಾಲೆಗಳ ಒಂದರಿಂದ  ಹತ್ತನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೂ ಡೈರಿ ಸಿಗಲಿದೆ. ಈಗಾಗಲೇ ಡೈರಿ ಮುದ್ರಣಕ್ಕೆ ರಾಜ್ಯ ಸರ್ಕಾರ ಅನುಮತಿ ಸಹ ನೀಡಿದೆ.

2017-18ನೇ ಸಾಲಿನ ಡೈಸ್‌ ವರದಿಯ ಪ್ರಕಾರ ರಾಜ್ಯದಲ್ಲಿ 43,712 ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 4,681 ಪ್ರೌಢಶಾಲೆ ಸೇರಿದಂತೆ 48,393 ಶಾಲೆಗಳಿವೆ. ಪ್ರಾಥಮಿಕ ಶಾಲೆಗಳಲ್ಲಿ 18,56,916 ವಿದ್ಯಾರ್ಥಿಗಳು ಹಾಗೂ 20,03,287 ವಿದ್ಯಾರ್ಥಿನಿಯರು , ಪ್ರೌಢಶಾಲೆಯಲ್ಲಿ 2,97,687 ವಿದ್ಯಾರ್ಥಿಗಳು ಹಾಗೂ  2,99,645 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು  44,57,535 ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳಿಗೂ ಡೈರಿ ಸಿಗಲಿದೆ.

ಪ್ರಸ್ತಾವನೆ
ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲ ಹಾಗೂ ಪಾಲಕ, ಪೋಷಕರು ಮತ್ತು ಶಿಕ್ಷಕರ ನಡುವಿನ ನಿಯಮತಿ ಸಂವಾಹನಕ್ಕೆ ಪೂರಕವಾಗಿಸಲು ಎಲ್ಲ ವಿದ್ಯಾರ್ಥಿಗಳಿಗೂ ಡೈರಿ ನೀಡುವ ಅವಶ್ಯಕತೆ ಇದೆ ಎಂಬ ಅಂಶವನ್ನು ಉಲ್ಲೇಖೀಸಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ವಿಸ್ತೃತವಾದ ಪ್ರಸ್ತಾವನೆ  ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಸರ್ಕಾರದಿಂದ ಅದರ ಪರಿಶೀಲನೆ ನಡೆಸಿ, ಇತ್ತೀಚೆಗೆ ಒಪ್ಪಿಗೆ ನೀಡಲಾಗಿದೆ.

ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಡೈರಿ ಹೊಸತಲ್ಲ. ಅಲ್ಲಿನ ಶಿಕ್ಷಕರು, ಮಕ್ಕಳ ಮನೆಕೆಲಸ(ಹೋಂವರ್ಕ್‌) ಸಹಿತವಾಗಿ ಎಲ್ಲ ಮಾಹಿತಿ ಡೈರಿಯಲ್ಲೇ ಬರೆದು ಕಳುಹಿಸುತ್ತಾರೆ. ಪಾಲಕ, ಪೋಷಕರು ಡೈರಿ ನೋಡಿಯೇ ಮಕ್ಕಳಿಗೆ ಮನೆಯಲ್ಲಿ ಏನು ಕಲಿಸಬೇಕು ಎಂಬುದನ್ನು ನಿರ್ಧರಿಸುತ್ತಾರೆ. ಇದೇ ಮಾದರಿಯಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲೂ ವ್ಯವಸ್ಥೆ ಇರಬೇಕು ಎಂಬ ಉದ್ದೇಶದಿಂದ ಡೈರಿ ನೀಡಲಾಗುತ್ತಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸುತ್ತಾರೆ.

ಸರ್ಕಾರಿ ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ಕರ್ನಾಟಕ ಪಠ್ಯಪುಸ್ತಕ ಸಂಘದಿಂದ ಡೈರಿ ವಿತರಣೆ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಬೇಕಿರುವ ಎಲ್ಲ ಡೈರಿಗಳ  ಮುದ್ರಣ ಕಾರ್ಯ ಆರಂಭವಾಗಿದೆ. ಮುದ್ರಣ ಪ್ರಕ್ರಿಯೆ ಪೂರ್ಣಗೊಂಡ ನಂತರ, ಜಿಲ್ಲಾ ಉಪನಿರ್ದೇಶಕರ ಮೂಲಕ, ಕ್ಷೇತ್ರಶಿಕ್ಷಣಾಧಿಕಾರಿಗಳ ಸಹಕಾರದೊಂದಿಗೆ ಎಲ್ಲ ಶಾಲೆಗಳಿಗೂ ವಿತರಣೆಯಾಗಲಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಅರ್ಧಭಾಗ ಬಹುತೇಕ ಮುಗಿದಿದೆ. ಅಲ್ಲದೆ, ಅಕ್ಟೋಬರ್‌ ಮೊದಲ ವಾರದಿಂದ ದಸರಾ ರಜೆ ಕೂಡ ಆರಂಭವಾಗಲಿದೆ. ಹೀಗಾಗಿ ದಸರಾ ರಜೆ ಮುಗಿದ, ಶಾಲಾ ಪುರನಾರಂಭದ ಸಂದರ್ಭದಲ್ಲಿ ಡೈರಿ ವಿತರಣೆ ಮಾಡಲಾಗುವುದು ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಡೈರಿಯಲ್ಲಿ ಏನೇನಿದೆ?
ವಿದ್ಯಾರ್ಥಿಗಳ ನಿತ್ಯದ ಚುಟುವಟಿಕೆ, ರಜಾದಿನಗಳು, ಪ್ರಮುಖ ಹಬ್ಬಗಳು, ಖ್ಯಾತ ವ್ಯಕ್ತಿಗಳ ಜನ್ಮದಿನದ ಮಾಹಿತಿಯ ಜತೆಗೆ ಶೈಕ್ಷಣ ವ್ಯವಸ್ಥೆಯ ಸುಧಾರಣೆಗೆ ಪಾಲಕ, ಪೋಷಕರು ಸಲಹೆಗಳನ್ನು ನೀಡಬಹುದಾದ ವ್ಯವಸ್ಥೆ ಡೈರಿಯಲ್ಲಿದೆ. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗೆ ಸಂಬಂಧಿಸಿದ ಹೋಂವರ್ಕ್‌ ಮಾಹಿತಿ, ಪ್ರಗತಿ ಪರಿಶೀಲನೆಯ ವಿವರವೂ ಡೈರಿಯಲ್ಲಿ ಇರಲಿದೆ. ವಿದ್ಯಾರ್ಥಿಗಳು ನಿತ್ಯವೂ ಪಠ್ಯಪುಸ್ತಕದ ಜತೆಗೆ ಡೈರಿಯನ್ನು ಶಾಲೆಗೆ ಕೊಂಡೊಯ್ಯಬೇಕು. ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ.

ಸರ್ಕಾರಿ ಶಾಲಾ ಮಕ್ಕಳಿಗೆ ಡೈರಿ ವಿತರಣೆಗೆ ಸರ್ಕಾರ ಅನುಮತಿ ನೀಡಿದೆ. ಕರ್ನಾಟಕ ಪಠ್ಯಪುಸ್ತಕ ಸಂಘದಲ್ಲಿ ಮುದ್ರಣ ಕಾರ್ಯ ಆರಂಭವಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕೆ ಬೇಕಾದ ಅಂಶಗಳು ಡೈರಿಯಲ್ಲಿರಲಿದೆ. ಈ ಶೈಕ್ಷಣಕ ವರ್ಷದಲ್ಲೇ ವಿತರಣೆ ನಡೆಯಲಿದೆ.
– ಶಾಲಿನಿ ರಜನೀಶ್‌, ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.