ಟೋಕಿಯೊ ಒಲಿಂಪಿಕ್ಸ್: ಕಂಚಿನ ಪದಕ ಗೆದ್ದ ಸಿಂಧುಗೆ ರಾಜ್ಯಪಾಲರಿಂದ ಅಭಿನಂದನೆ
Team Udayavani, Aug 1, 2021, 9:46 PM IST
ಬೆಂಗಳೂರು : ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳಾ ಸಿಂಗಲ್ಸ್ ವಿಭಾಗದ ಕಂಚಿನ ಪದಕ ಗೆದ್ದಿರುವ ಪಿ.ವಿ ಸಿಂಧು ಅವರಿಗೆ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿನಂದಿಸಿದ್ದಾರೆ.
ಟೊಕಿಯೊ ಒಲಿಂಪಿಕ್ಸ್ ನಲ್ಲಿ ನಡೆದ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರು ಚೀನಾದ ಹಿ ಬಿಂಗ್ಜಿಯಾವೊ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಇದರೊಂದಿಗೆ ಒಲಿಂಪಿಕ್ಸ್ ನಲ್ಲಿ ಸತತವಾಗಿ ಎರಡನೇ ಬಾರಿ ಪದಕ ಗೆದ್ದು, ಜಾಗತಿಕಮಟ್ಟದಲ್ಲಿ ಭಾರತದ ಕೀರ್ತಿ ಹೆಚ್ಚುವಂತೆ ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ರಾಜ್ಯಪಾಲರು, ತಮ್ಮ ಟ್ವೀಟರ್ ಮೂಲಕ ಕ್ರೀಡಾಪಟು ಪಿ.ವಿ.ಸಿಂಧು ಅವರಿಗೆ ಅಭಿನಂದನೆ ತಿಳಿಸಿದ್ದಾರೆ.