ಅಭಿವೃದ್ಧಿಗೆ ಗೋವಿಂದರಾಜನಗರ ಮಾದರಿ
Team Udayavani, May 10, 2018, 12:56 PM IST
ಬೆಂಗಳೂರು: ಗೋವಿಂದರಾಜನಗರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಕೃಷ್ಣ ಬುಧವಾರ ಡಾ.ರಾಜ್ ಕುಮಾರ್ ವಾರ್ಡ್ನಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು. ತಮಿಳುನಾಡು ಕಾಂಗ್ರೆಸ್ ಅಧ್ಯಕ್ಷ ತಿರುವಕರಸು ಹಾಗೂ ಮಾಜಿ ಸಚಿವ ವಿಶ್ವನಾಥನ್ ಅವರು ಪ್ರಿಯಕೃಷ್ಣ ಪರವಾಗಿ ಪ್ರಚಾರ ಮಾಡಿದರು. ಪ್ರಿಯಕೃಷ್ಣ ಅವರು ಯುವ ಶಾಸಕರಾಗಿ ಒಂಬತ್ತು ವರ್ಷಗಳಲ್ಲಿ ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಮಾದರಿಯಾಗಿ ಮಾಡಿದ್ದಾರೆ. ಬಡವರ ಪರ ಕಾರ್ಯಕ್ರಮ
ಕೈಗೊಂಡು ನೆರವಾಗಿದ್ದಾರೆ. ಹೀಗಾಗಿ, ಅವರನ್ನು ಮತ್ತೂಮ್ಮೆ ಆಶೀರ್ವದಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಿಯಕೃಷ್ಣ , ಕ್ಷೇತ್ರದಲ್ಲಿ ನಿರಂತರ ಜನಸಂಪರ್ಕ ಸಾಧಿಸಿ ಕುಡಿಯುವ ನೀರು, ರಸ್ತೆ, ಶೌಚಾಲಯ ಸೇರಿ ಮೂಲ ಸೌಕರ್ಯ ಅಭಿವೃದ್ಧಿಗಾಗಿ ಸಾಕಷ್ಟು ಅನುದಾನ ಬಿಡುಗಡೆ ಮಾಡಿಸಿ ವೆಚ್ಚ ಮಾಡಲಾಗಿದೆ. ಗುಣಮಟ್ಟದ ಸೌಕರ್ಯಗಳನ್ನು ಜನರಿಗೆ ನೀಡಲಾಗಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಮತ್ತೂಮ್ಮೆ ಆಶೀರ್ವಾದ ಮಾಡಿದರೆ ಕ್ಷೇತ್ರದ ಸಮಸ್ಯೆಗಳನ್ನು ನಿವಾರಿಸಿ ಜನತೆಗೆ ಉತ್ತಮ ಸೌಕರ್ಯ ಒದಗಿಸುವುದಾಗಿ ಭರವಸೆ ನೀಡಿದರು.ಪಾಲಿಕೆಯ ಮಾಜಿ ಸದಸ್ಯ ಶ್ರೀನಿವಾಸ್ ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ