ಕೃಷ್ಣಪ್ಪ, ಪ್ರಿಯಕೃಷ್ಣ ಪರ ಪ್ರಿಯಾಂಕಾ ಅದ್ಧೂರಿ ರ್‍ಯಾಲಿ  


Team Udayavani, May 9, 2023, 11:14 AM IST

ಕೃಷ್ಣಪ್ಪ, ಪ್ರಿಯಕೃಷ್ಣ ಪರ ಪ್ರಿಯಾಂಕಾ ಅದ್ಧೂರಿ ರ್‍ಯಾಲಿ  

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ನಗರದಲ್ಲಿ ಸುಮಾರು 30 ಜನ ರಸ್ತೆಗುಂಡಿಗಳಿಗೆ ಬಲಿಯಾಗಿದ್ದಾರೆ. ಅಭಿವೃದ್ಧಿ ಕಾರ್ಯಗಳಂತೂ ಶೂನ್ಯ. ಇದು ಆ ಪಕ್ಷದ ಆಡಳಿತ ವೈಖರಿಗೆ ಕನ್ನಡಿ ಹಿಡಿಯುತ್ತಿದೆ ಎಂದು ಕಾಂಗ್ರೆಸ್‌ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದರು.

ವಿಜಯನಗರದಲ್ಲಿ ಸೋಮವಾರ ವಿಜಯನಗರ ಕಾಂಗ್ರೆಸ್‌ ಅಭ್ಯರ್ಥಿ ಎಂ. ಕೃಷ್ಣಪ್ಪ ಮತ್ತು ಗೋವಿಂದ ರಾಜನಗರ ಅಭ್ಯರ್ಥಿ ಪ್ರಿಯಕೃಷ್ಣ ಅವರ ಪರ ಜಂಟಿಯಾಗಿ ಅದ್ಧೂರಿ ರೋಡ್‌ ಶೋ ನಡೆಸಿ ನಂತರ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಆಡಳಿತಾವಧಿಯಲ್ಲಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗಾಗಿಯೇ 10 ಸಾವಿರ ಕೋಟಿ ಅನುದಾನ ನೀಡಲಾಗಿತ್ತು. ಆದರೆ, ನಂತರ ಬಂದ ಬಿಜೆಪಿ ಸರ್ಕಾರದಲ್ಲಿ ಅಭಿವೃದ್ಧಿ ಮರೀಚಿಕೆಯಾಯಿತು. ಈ ಮಧ್ಯೆ 30 ಜನ ರಸ್ತೆಗುಂಡಿಗಳಿಗೆ ಬಲಿಯಾದರು ಎಂದು ದೂರಿದರು.

ಸರ್ಕಾರದಲ್ಲಿರುವ ಸಚಿವರ ಚಿತ್ತ ಬರೀ ಲಂಚ, ಹಣ ಮಾಡುವುದರ ಕಡೆಗೆ ಇದೆಯೇ ಹೊರತು, ಜನರ ಸಮಸ್ಯೆಗಳ ಬಗ್ಗೆ ಚಿಂತೆಯೇ ಇಲ್ಲ. ಕಳೆದ 3 ವರ್ಷಗಳಲ್ಲಿ ಈ ಸರ್ಕಾರದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಮಾಡುವುದು, ಸಚಿವರು ಹಣ ಮಾಡುವುದರಲ್ಲೇ ನಿರತವಾಗಿತ್ತು. ಜನರ ಬಗ್ಗೆ ಯಾವುದೇ ಕಾಳಜಿ ಇವರಿಗಿಲ್ಲ. ಇದೆಲ್ಲದರ ಪರಿಣಾಮವನ್ನು ಜನ ಎದುರಿಸುತ್ತಿದ್ದಾರೆ. ಬೆಲೆ ಏರಿಕೆ ಎಷ್ಟು ಕಷ್ಟ ತಂದಿವೆ ಅಂತ ಜನರಿಗೆ ಚೆನ್ನಾಗಿ ಗೊತ್ತಿದೆ. ಅಡುಗೆ ಅನಿಲ ಸೇರಿದಂತೆ ಅಗತ್ಯ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ಇಂದು ಸಾಕಷ್ಟು ಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಎಸ್‌ಟಿಯಿಂದ ಇಂದು ಸಣ್ಣ ಉದ್ದಿಮೆದಾರರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಯಾರ ಉದ್ಯಮವೂ ಅಭಿವೃದ್ಧಿಯಾಗಿಲ್ಲ. ಜಿಎಎಸ್ಟಿ ಮೂಲಕ ಸರ್ಕಾರ ಲಂಚ ಪಡೆಯುತ್ತಿದೆ ಎಂದು ಆರೋಪಿಸಿದ ಅವರು, ವಿಧಾನಸಭಾ ಚುನಾವಣೆಯ ಕೊನೆಯ ದಿನದ ಬಹಿರಂಗ ಪ್ರಚಾರವಾಗಿದೆ. ಮೇ 10 ಮತದಾನದ ದಿನವಾಗಿದೆ. ಇದುವರೆಗಿನ ಪ್ರಚಾರದಲ್ಲಿ ಜನರ ಕಷ್ಟ ಮತ್ತು ಜನಸಾಮಾನ್ಯರು ಅನುಭವಿಸುತ್ತಿರುವ ಬವಣೆಗಳ ಬಗ್ಗೆ ಕಾಂಗ್ರೆಸ್‌ ಬೆಳಕು ಚೆಲ್ಲಿದೆ ಮತ್ತು ಎಂದಿಗೂ ಅವರ ಪರ ದನಿ ಎತ್ತಿದೆ. ರಾಜ್ಯದ ಭವಿಷ್ಯ ನಿರ್ಧರಿಸುವ ಶಕ್ತಿ ನಿಮ್ಮಲ್ಲಿದೆ ಎಂದರು.

ಗೋವಿಂದರಾಜನಗರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಕೃಷ್ಣ ರ್ಯಾಲಿಯಲ್ಲಿ ಭಾಗವಹಿಸಿದ್ದರು.

ರ್‍ಯಾಲಿಯುದ್ದಕ್ಕೂ ಹೂಮಳೆ, ಜೈಕಾರ: ಬಹಿರಂಗ ಪ್ರಚಾರದ ಕೊನೆ ದಿನವಾದ ಸೋಮವಾರ ಜಿ.ಟಿ. ಮಾಲ್‌ನಿಂದ ಪ್ರಾರಂಭವಾದ ರೋಡ್‌ ಶೋ ಬನಶಂಕರಿ ದೇವಸ್ಥಾನ ರಸ್ತೆ, ಪೈಪ್‌ಲೈನ್‌ ರಸ್ತೆ ಹಾಗೂ ವಿಜಯನಗರ ಕ್ಲಬ್‌ ರಸ್ತೆವರೆಗೂ ನಡೆಯಿತು. ಇದೇ ವೇಳೆ ವಿಜಯನಗರ ಕ್ಲಬ್‌ ರೋಡ್‌ನ‌ಲ್ಲಿ ಪ್ರಿಯಾಂಕಗಾಂಧಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಇದಕ್ಕೆ ಸಾವಿರಾರು ಜನ ಸಾಕ್ಷಿಯಾದರು. ರ್ಯಾಲಿಯುದ್ದಕ್ಕೂ ಅಭಿಮಾನಿಗಳು, ಬೆಂಬಲಿಗರು ಹೂವಿನ ಮಳೆಗರೆದು ಸ್ವಾಗತ ಕೋರಿದರು. ಮಾರ್ಗದುದ್ದಕ್ಕೂ ಅಭ್ಯರ್ಥಿ ಮತ್ತು ನೆಚ್ಚಿನ ನಾಯಕಿ ಪರ ಘೋಷಣೆ ಕೂಗಿದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.