ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಖುಷಿಯೊಂದಿಗೆ ಗೌರಿ ಆಗಮನ

ನಗರದ ವಿವಿಧೆಡೆ ಗೌರಿ- ಗಣೇಶ ಹಬ್ಬದ ಖರೀದಿ ಜೋರು; ಬೆಲೆ ಇಳಿಕೆಯೇ ಗ್ರಾಹಕರಿಗೆ ಖುಷಿ

Team Udayavani, Sep 9, 2021, 3:08 PM IST

ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಖುಷಿಯೊಂದಿಗೆ ಗೌರಿ ಆಗಮನ

ಬೆಂಗಳೂರು: ನಗರದ ಮಾರುಕಟ್ಟೆಗಳಲ್ಲಿ ಬುಧವಾರ ಗೌರಿ-ಗೌಣೇಶ ಹಬ್ಬದ ಖರೀದಿ ಭರಾಟೆ ಜೋರಾಗಿತ್ತು. ಇದಕ್ಕೆ ಹೂ-ಹಣ್ಣು ಬೆಲೆ ಇಳಿಕೆಯ ಸಂತಸವು ಜತೆಯಾಗಿತ್ತು. ಗುರುವಾರ ಗೌರಿ, ಶುಕ್ರವಾರ ಗಣೇಶ ಹಬ್ಬ. ಕಳೆದ ಬಾರಿಗೆ ಹೋಲಿಸಿದರೆ ಕೋವಿಡ್‌ ಸೋಂಕು ಆತಂಕ ಕಡಿಮೆ ಇದ್ದು, ಹಬ್ಬವನ್ನು ವಿಶೇಷವಾಗಿ ಆಚರಿಸಲು ಜನರು ಸಜ್ಜಾಗಿದ್ದಾರೆ. ಇದಕ್ಕಾಗಿ ಬುಧವಾರ ಹಬ್ಬದ ಖರೀದಿಯನ್ನು ಆರಂಭಿಸಿದ್ದಾರೆ. ಪ್ರಮುಖ ವಾಗಿ ಕೆ.ಆರ್‌.ಮಾರುಕಟ್ಟೆ, ಮಲ್ಲೇಶ್ವರ ಮಾರುಕಟ್ಟೆ, ಕೆ.ಆರ್‌ಪುರ ಮಾರುಕಟ್ಟೆ, ಯಶವಂತಪುರ ಮಾರುಕಟ್ಟೆಗಳಲ್ಲಿ ಬೆಳಗ್ಗೆಯಿಂದಲೇ
ಜನಜಂಗುಳಿ ಇತ್ತು.

ಹೂ, ಹಣ್ಣು, ಬಾಳೆ ಕಂದು, ಗೌರಿ – ಗಣೇಶ ಮೂರ್ತಿಗಳ ಸೇರಿದಂತೆ ಹಬ್ಬಕ್ಕೆ ಬೇಕಾದ ವಸ್ತುಗಳ ಮಾರಾಟ ಬಿರುಸಾಗಿ ಸಾಗಿತ್ತು. ಕೋವಿಡ್‌ ಲಾಕ್‌ಡೌನ್‌ ಇಲ್ಲದಕಾರಣ ಈ ಬಾರಿ ನಗರದ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಹೂವ ಹಾಗೂ ಹಣ್ಣುಗಳು ಆಗಮಿಸಿದೆ. ಹೀಗಾಗಿ, ಬೆಲೆ ಏರಿಕೆ ಬಿಸಿ ಇರಲಿಲ್ಲ. ಎರಡು ವಾರದ ಹಿಂದೆ ನಡೆದ ವರಮಹಾಲಕ್ಷ್ಮಿ ಹಬ್ಬಕ್ಕೆ ಹೋಲಿಸಿದರೆ ಹೂ, ಹಣ್ಣುಗಳ ದರವೂ ಗ್ರಾಹಕರ ಕೈಗೆಟುಕುವಂತಿದೆ.

ಈ ಬಾರಿ ಹೆಚ್ಚಿನ ಮಳೆ ಆಗಿರುವುದರಿಂದ ತಮಿಳುನಾಡು ಹಾಗೂ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಆನೇಕಲ್‌ ಮತ್ತಿತರ
ಭಾಗಗಳಿಂದ ಹೂವು ಹೆಚ್ಚಾಗಿ ಬರುತ್ತಿದೆ. ಹೀಗಾಗಿ ಸೇವಂತಿಗೆ ಹೂವಿನ ಬೆಲೆ ಇಳಿಕೆಯಾಗಿದೆ ಎಂದು ಮಾರುಕಟ್ಟೆ ಸಗಟು ವ್ಯಾಪಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಪಟ್ಟದ ಲೆಕ್ಕಾಚಾರ; ಯಾರಾಗುತ್ತಾರೆ ಹುಬ್ಬಳ್ಳಿ-ಧಾರವಾಡ ಮಹಾಪೌರ?

ಇಂದು ಗೌರಿ ಆಗಮನ ಸಂಭ್ರಮ: ನಗರದಲ್ಲಿ ಗೌರಿ ಹಬ್ಬ ಆಚರಣೆಗೆ ಸಿದ್ಧತೆ ಜೋರಿದ್ದು, ಗುರುವಾರ ಗಣೇಶ ದೇವಸ್ಥಾನಗಳಲ್ಲಿ ವಿಶೇಷ
ಪೂಜೆ, ಮನೆಗಳಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಬುಧವಾರ ಮಾರುಕಟ್ಟೆಗಳಲ್ಲಿ ಗೌರಿ ಹಬ್ಬಕ್ಕಾಗಿ ಗಜಗೌರಿ, ಮಂಗಳಗೌರಿ ಹೀಗೆ
ಹಲವು ಹೆಸರಿನಲ್ಲಿ ಗೌರಿ ಮೂರ್ತಿಗಳ ಖರೀದಿ ಭರದಿಂದ ಸಾಗಿತ್ತು. ಗೌರಿ ಮೂರ್ತಿಗಳು 50-100 ರೂ. ನಿಂದ ಆರಂಭವಾಗಿ 2 ಸಾವಿರ ರೂ.ವರೆಗೆ ದರವಿದೆ. ಇನ್ನು ಗಣೇಶನ ಮಣ್ಣಿನ ಮೂರ್ತಿಗಳು ಎತ್ತರ ಮತ್ತು ವಿನ್ಯಾಸಕ್ಕೆ ತಕ್ಕಂತೆ 100 ರೂ. ನಿಂದ 20 ಸಾವಿರ ರೂ.ವರೆಗಿವೆ. ಮಾರಾಟಕ್ಕಿವೆ. ಜತೆಗೆ ಹೆಣ್ಣು ಮಕ್ಕಳಿಗೆ ನೀಡಲು ಬಾಗೀನ ವಸ್ತುಗಳನ್ನು ಕೊಳ್ಳುವವರ ಸಂಖ್ಯೆ ಹೆಚ್ಚಿತ್ತು.

ಲಾಕ್‌ಡೌನ್‌ ಇಲ್ಲದಕಾರಣ ಕಳೆದ ವರ್ಷಕ್ಕೆ ಹೋಲಿಸಿದರೆ ಹಬ್ಬದ ವ್ಯಾಪಾರ ಹೆಚ್ಚಿದೆ. ಬೆಲೆಯೂ ಕೂಡ ವರಮಹಾಲಕ್ಷ್ಮಿ ಹಬ್ಬಕ್ಕೆ ಹೋಲಿಸಿದರೆ ಕಡಿಮೆ ಇದೆ. ಇನ್ನೆರಡು ದಿನ ಹೆಚ್ಚಿನ ವ್ಯಾಪಾರವಾಗುವ ನಿರೀಕ್ಷೆ ಇದೆ.
– ಸಂಗಮೇಶ್‌, ವರ್ತಕ, ಮಲ್ಲೇಶ್ವರ ಮಾರುಕಟ್ಟೆ

ಕಳೆದ ವರ್ಷ ಕೋವಿಡ್‌ ಭಯದಿಂದ ಗೌರಿಗಣೇಶ ಹಬ್ಬ ಆಚರಿಸಿರಲಿಲ್ಲ. ಈ ಬಾರಿ ಕುಟುಂಬಸ್ಥರೆಲ್ಲರೂ ಲಸಿಕೆ ಪಡೆದಿದ್ದು, ಭಯವಿಲ್ಲದೆ ಶಾಸ್ತ್ರೋಕ್ತವಾಗಿ ಆಚರಿಸಲು ತೀರ್ಮಾನಿಸಿದ್ದೇವೆ. ಹಬ್ಬಕ್ಕೆ ಬೇಕಾಗ ಸಾಮಗ್ರಿಖರೀದಿಸುತ್ತಿದ್ದು, ಬೆಲೆ ಏರಿಕೆ ಅಷ್ಟಾಗಿ ಇಲ್ಲ.
– ಆಶಾ, ಗೃಹಿಣಿ, ಎನ್‌.ಆರ್‌.ಕಾಲೋನಿ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.