ಗೌರಿ-ಗಣೇಶ; ಗರಿಗೆದರಿದ ವ್ಯಾಪಾರ
Team Udayavani, Aug 21, 2020, 12:00 PM IST
ಬೆಂಗಳೂರು: ಗೌರಿಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗುರುವಾರವೇ ಲಾಲ್ಬಾಗ್ನ ಮುಖ್ಯದ್ವಾರದ ಸಮೀಪದ ಪ್ರದೇಶ ಸೇರಿದಂತೆ ನಗರದ ಹಲವೆಡೆ ಹೂವು ಮತ್ತು ಹಣ್ಣಿನ ಅಂಗಡಿಗಳು ತಲೆ ಎತ್ತಿವೆ.
ಕೋವಿಡ್ -19 ಹಿನ್ನೆಲೆಯಲ್ಲಿ ನಗರದ ಕೆ.ಆರ್. ಮಾರುಕಟ್ಟೆಯಲ್ಲಿ ಇನ್ನೂ ಹೂವಿನ ವ್ಯಾಪಾರಕ್ಕೆ ಬಿಬಿಎಂಪಿ ಅಧಿಕಾರಿಗಳು ಅವಕಾಶ ನೀಡಿಲ್ಲ. ಈ ದೃಷ್ಟಿಯಿಂದ ನಗರದ ಹಲವು ರಸ್ತೆಗಳಲ್ಲಿ, ಜನಸಂದಣಿ ಸ್ಥಳಗಳಲ್ಲಿ ಹೂವು, ಹಣ್ಣಿನ ಅಂಗಡಿಗಳು ತಲೆ ಎತ್ತಿವೆ. ಜತೆಗೆ ತಳ್ಳುವ ಗಾಡಿಗಳಲ್ಲೂ ವ್ಯಾಪಾರ ಸಾಗಿದೆ.
ಲಾಲ್ಬಾಗ್ ಮುಖ್ಯ ಪ್ರವೇಶ ದ್ವಾರದ ಬಳಿ ಇರುವ ಎಂಟಿಆರ್ ಸಮೀಪ ತಾತ್ಕಾಲಿಕವಾಗಿ ತೆರೆದಿದ್ದ ಸಗಟು ಹೂವಿನ ಮಂಡಿ ಸೇರಿದಂತೆ ಕೆಲವೆಡೆ ಹೂವಿನ ಅಂಗಡಿಗಳನ್ನು ತೆರೆಯಲಾಗಿದ್ದು ಗ್ರಾಹಕರ ಖರೀದಿಯೂ ಕಂಡು ಬಂತು. ಜತೆಗೆ ಪತ್ರೆಗಳು (ಬಿಲ್ವಪತ್ರೆ, ದವನ) 5 ರೂಪಾಯಿ ಮತ್ತು ಗರಿಕೆ ಕಂತೆಗೆ 5 ರೂ.ಗೆ ಖರೀದಿಯಾಯಿತು. ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಗಣೇಶ ಆಚರಣೆಗೆ ಕೆಲವು ನಿರ್ಬಂಧ ಹೇರಿದೆ. ಆ ಹಿನ್ನೆಲೆಯಲ್ಲಿ ಗಣೇಶನ ಅಲಂಕಾರಕ್ಕೆ ಖರೀದಿಸುವ ಹೂವಿನ ಪ್ರಮಾಣ ಕೂಡ ಕಡಿಮೆ ಆಗಿದೆ ಎಂದು ಹೂವಿನ ವ್ಯಾಪಾರಿ ಮೋಹನ್ ಹೇಳಿದರು. ಸೇವಂತಿಗೆ ಸೇರಿದಂತೆ ಇನ್ನಿತರ ಹೂಗಳು ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಸೇರಿ ಇನ್ನಿತರ ಕಡೆಯಿಂದ ಮಾರುಕಟ್ಟೆಗೆ ಬರಲಿವೆ. ಇನ್ನೂ ಕೆಲವು ಜಾತಿಯ ಹೂವುಗಳು ತಮಿಳುನಾಡಿನಿಂದ ಬರಲಿವೆ. ಆದರೆ, ಈ ಬಾರಿ ಆವಕದ ಪ್ರಮಾಣವೂ ಕಡಿಮೆ ಆಗಿದೆ. ಕೆಲವೆಡೆ ಮಳೆಯಿಂದ
ಹೂವಿನ ಫಸಲಿಗೂ ಹೊಡೆತ ಬಿದ್ದಿದೆ. ಜತೆಗೆ ಹಿನ್ನೆಲೆಯಲ್ಲಿ ಹೂವಿನ ಮಾರುಕಟ್ಟೆ ಗಳು ಬಂದ್ ಆಗಿವೆ. ಹೀಗಾಗಿ ಬೆಲೆಯಲ್ಲಿ ಒಂದಿಷ್ಟು ಏರಿಕೆ ಆಗಿದೆ ಎಂದಿದ್ದಾರೆ.
ನಾಳೆ ಮಾಂಸ ಮಾರಾಟಕ್ಕೆ ನಿಷೇಧ : ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಆ.22ರ ಶನಿವಾರ ನಗರದ ಎಲ್ಲಾ ಕಸಾಯಿಖಾನೆಗಳಲ್ಲಿಯೂ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಮೀರಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದು ಕಂಡು ಬಂದರೆ, ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಪಶು ಪಾಲನೆ ವಿಭಾಗದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?