ಅಗ್ಗದ ಪ್ರಚಾರದಿಂದ ಶ್ರೇಷ್ಠತೆ ಬಾರದು


Team Udayavani, Jul 21, 2019, 3:06 AM IST

prachara

ಬೆಂಗಳೂರು: ಶ್ರೇಷ್ಠರೆಲ್ಲಾ ಜನಪ್ರಿಯರಲ್ಲ, ಜನಪ್ರಿಯರೆಲ್ಲಾ ಶ್ರೇಷ್ಠರಾಗಿರುವುದಿಲ್ಲ. ಜನಪ್ರಿಯತೆ ಅಗ್ಗದ ಪ್ರಚಾರದಿಂದಲೂ ಬರಬಹುದು. ಆದರೆ, ಶ್ರೇಷ್ಠತೆ ಬರುವುದಿಲ್ಲ ಎಂದು ಎಂದು ಹಿರಿಯ ಸುಗಮ ಸಂಗೀತ ಗಾಯಕ ವೈ.ಕೆ.ಮುದ್ದುಕೃಷ್ಣ ಅಭಿಪ್ರಾಯಪಟ್ಟರು.

ಸಾಹಿತ್ಯ ದಾಸೋಹ ವೇದಿಕೆ, ನಗರದ ಬಿ.ಪಿ.ವಾಡಿಯಾ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕಿ ರತ್ನಾ ಮೂರ್ತಿ ಅವರ “ಭೂಮಿ ಗ್ರಹಣ’, “ಗೌರಮ್ಮನ ವಚನಗಳು’ ಮತ್ತು “ಕೀಲಿ ಕೈಯನು ತಾರೆ ಕೀಲಿ ಕೈಯ’ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ನಮ್ಮ ನಡುವೆ ಹಲವು ಲೇಖಕಿಯರು ಎಲೆಮರೆ ಕಾಯಿಯಂತೆ ಇದ್ದು, ಸಾಹಿತ್ಯ ರಚನೆಯಲ್ಲಿ ತೊಡಗಿಕೊಂಡಿದ್ದಾರೆ. ಅಂತಹ ಲೇಖಕಿಯರನ್ನು ಗುರುತಿಸಿ ಗೌರವಿಸುವ ಕೆಲಸ ನಡೆಯಬೇಕಾಗಿದೆ. ಪ್ರತಿಭೆಯನ್ನು ಬರವಣಿಗೆ ಮೂಲಕ ಹೊರಹಾಕುವುದು ವ್ಯಕ್ತಿಯ ಶ್ರೇಷ್ಠತೆಯನ್ನು ಬಿಂಬಿಸುತ್ತದೆ ಎಂದರು.

ಕಾವ್ಯ ರಚನೆ ಯಾವಾಗಲು ಸರಳವಿರಬೇಕು. ಹೀಗಿದ್ದಾಗ ಮಾತ್ರ ಅವುಗಳು ಹೆಚ್ಚು ಹೆಚ್ಚು ಓದುಗರನ್ನು ತಲುಪುತ್ತವೆ. ಉತ್ತಮವಾದ ಕಾವ್ಯ ರಚನೆ ಶಕ್ತಿ ಹೊಂದಿರುವ ರತ್ನಾ ಮೂರ್ತಿ ಅವರು ಶ್ರೇಷ್ಠ ಕೃತಿಗಳನ್ನು ರಚಿಸಿದ್ದಾರೆ. ಸುಮಾರು 28 ಕೃತಿಗಳನ್ನು ರಚಿಸಿದರೂ ಅವರ ಕಾವ್ಯ ಸೇವೆಯನ್ನು ಗುರುತಿಸದೇ ಇರುವುದು ಬೇಸರದ ಸಂಗತಿ. ಮುಂದಿನ ದಿನಗಳಲ್ಲಿ ರತ್ನಾ ಅವರು ಸಾಹಿತ್ಯ ಕ್ಷೇತ್ರದಲ್ಲಿ ಮತ್ತಷ್ಟು ಹೆಸರು ಮಾಡಲಿ ಎಂದು ಆಶಿಸಿದರು.

ವೇದ ವಿದ್ವಾಂಸ ಡಾ.ರ.ವಿ.ಜಹಾಗಿರ್‌ದಾರ್‌ ಮಾತನಾಡಿ, ಸಮಾಜದಲ್ಲಿ ಪುಸ್ತಕಗಳಿಗೆ ವಿಶೇಷವಾದ ಸ್ಥಾನವಿದೆ. ಅದರಲ್ಲೂ ರತ್ನಾ ಮೂರ್ತಿಯವರ “ಗೌರಮ್ಮನ ವಚನ’ ರೀತಿಯ ಪುಸ್ತಕಗಳಿಗೆ ಹೆಚ್ಚು ಮನ್ನಣೆ ಇದೆ. ಅವರ ಪುಸ್ತಕಗಳು ಓದುತ್ತಿದ್ದರೆ ಆಪ್ತತೆ ಹೆಚ್ಚಾಗುತ್ತದೆ ಎಂದರು.

ಕೆಲವು ಶಾಲೆ, ಕಾಲೇಜುಗಳ ಗ್ರಂಥಾಲಯದಲ್ಲಿ ಇನ್ನೂ ಕೂಡ ಗಾಂಧೀಜಿ ಅವರ ಕುರಿತಾದ ಪುಸ್ತಕಗಳು ಇಲ್ಲ. ಇಂತಹ ಹಲವು ಮಹನೀಯರ ಪುಸ್ತಕಗಳನ್ನು ಶಾಲೆ, ಕಾಲೇಜುಗಳ ಗ್ರಂಥಾಲಯಗಳಿಗೆ ತಲುಪಿಸುವ ಕೆಲಸ ನಡೆಯಬೇಕಾಗಿದೆ ಎಂದು ಹೇಳಿದರು. ನಿವೃತ್ತ ಡಿಜಿಪಿ ಕೆ.ವಿ.ರವೀಂದ್ರನಾಥ ಠ್ಯಾಗೋರ್‌, ಲೇಖಕಿ ರತ್ನಾ ಮೂರ್ತಿ, ಗಮಕಿ ಡಾ.ಎಂ.ಆರ್‌.ಸತ್ಯನಾರಾಯಣ, ಸೀತಾರಾಮ ಹೆಗೆಡೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.