ವೈಟ್‌ಟಾಪಿಂಗ್‌ ಕಾಮಗಾರಿಗೆ ಹಸಿರು ಬಲಿ


Team Udayavani, Apr 12, 2019, 11:49 AM IST

blore-5
ಬೆಂಗಳೂರು: ರಸ್ತೆ ಗುಂಡಿ ಸಮಸ್ಯೆ ಪರಿಹಾರಕ್ಕಾಗಿ ಬಿಬಿಎಂಪಿ ಕೈಗೆತ್ತಿಕೊಂಡ ವೈಟ್‌ ಟಾಪಿಂಗ್‌ ಕಾಮಗಾರಿಗೆ ನೂರಾರು ಗಿಡಗಳು ಜೀವ ಕಳೆದುಕೊಂಡಿದ್ದು, ಜನರ ಅನುಕೂಲಕ್ಕಾಗಿ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿದ
ಪಾದಚಾರಿ ಮಾರ್ಗ ಖಾಸಗಿ ವಾಹನಗಳ ನಿಲುಗಡೆ, ಬೀದಿ ವ್ಯಾಪಾರಕ್ಕೆ ಬಳಕೆಯಾಗುತ್ತಿದೆ. ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ವಿಶ್ವೇಶ್ವರಪುರದ ವೈಟ್‌ಟಾಪಿಂಗ್‌ ರಸ್ತೆ ಬದಿ ಹಾಗೂ ಪ್ರಮುಖ ರಸ್ತೆಗಳ ಪಾದಚಾರಿ ಮಾರ್ಗಗಳಲ್ಲಿ ಕಂಡುಬರುವ ದೃಶ್ಯಗಳಿವು.
ಈಗಾಗಲೇ ಸಾಕಷ್ಟು ಅಭಿವೃದ್ಧಿ ಹೊಂದಿರುವ ವಿಶ್ವೇಶ್ವರಪುರ ವಾರ್ಡ್‌ನ ಪ್ರಮುಖ ರಸ್ತೆಗಳಲ್ಲಿ ಗುಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕೈಗೆತ್ತಿಕೊಂಡ ವೈಟ್‌ಟಾಪಿಂಗ್‌ ಕಾಮಗಾರಿಗೆ ಸುಮಾರು 40ಕ್ಕೂ ಹೆಚ್ಚಿನ ಗಿಡ-ಮರಗಳು ಜೀವ ಕಳೆದುಕೊಂಡಿವೆ.
ಇದರೊಂದಿಗೆ ಸಾರ್ವಜನಿಕರ ಅನುಕೂಲಕ್ಕಾಗಿ ಪಾಲಿಕೆಯಿಂದ ಕೋಟ್ಯಂತರ ರೂ. ವೆಚ್ಚ ಮಾಡಿ ಪಾದಚಾರಿ ರಸ್ತೆಗಳ ಮೇಲ್ದರ್ಜೆಗೇರಿಸುವ ವೇಳೆ ಕೆಲ ಸಂಘ ಸಂಸ್ಥೆಗಳು ಸ್ವಂತ ಖರ್ಚಿನಲ್ಲಿ ನೆಟ್ಟು ಪೋಷಿಸಿದ ಗಿಡಗಳನ್ನು ತೆರವುಗೊಳಿಸಲಾಗಿದ್ದು, ಪಾದಚಾರಿ ರಸ್ತೆಗಳು ಗಿಡಗಳಿಲ್ಲದೆ ಬಣಗುಡುತ್ತಿವೆ.
ಪಾಲಿಕೆಯಿಂದ ನಗರದಲ್ಲಿ ಸುಮಾರು 100 ಕಿ.ಮೀ. ವ್ಯಾಪ್ತಿಯಲ್ಲಿ ವೈಟ್‌ಟಾಪಿಂಗ್‌ ಯೋಜನೆ ಅನುಷ್ಠಾನಗೊಳಿಸಲು ಯೋಜನೆ ರೂಪಿಸಲಾಗಿದೆ. ಅದರಂತೆ ಕಾಮಗಾರಿ ಅನುಷ್ಠಾನಗೊಂಡಿರುವ ಬಹುತೇಕ ಕಡೆಗಳಲ್ಲಿ ಗಿಡಗಳಿಗೆ ಹಾನಿಯಾಗುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಯೋಜನೆ ಅನುಷ್ಠಾನ ವೇಳೆ ಗಿಡಗಳ ಸಂರಕ್ಷಣೆಗೆ ಅಧಿಕಾರಿಗಳು ಗಮನ ನೀಡಬೇಕೆಂಬ ಸಲಹೆಯನ್ನು ಪರಿಸರವಾದಿಗಳು ನೀಡಿದ್ದಾರೆ.
ಕಾಮಗಾರಿ ಸ್ಥಳದಲ್ಲಿನ ಗಿಡಗಳು ನಾಶ ವಿ.ವಿ.ಪುರ ಕೆ.ಆರ್‌.ರಸ್ತೆಯಲ್ಲಿ ಪಾಲಿಕೆಯಿಂದ  ಟ್‌ಟಾಪಿಂಗ್‌ ಕಾಮಗಾರಿ
ಕೈಗೆತ್ತಿಕೊಳ್ಳಲಾಗಿದೆ. ಈಗಾಗಲೇ ರಸ್ತೆಯ ಎರಡೂ ಬದಿಯಲ್ಲಿ ಕಾಮಗಾರಿ ಪೂರ್ಣಗೊಂಡಿದ್ದು, ಚರಂಡಿ ಹಾಗೂ ಪಾದಚಾರಿ ಮಾರ್ಗ ನಿರ್ಮಾಣ ಕಾಮಗಾರಿ ನಡೆಸಲಾಗುತ್ತಿದೆ. ಪರಿಣಾಮ ರಸ್ತೆಬದಿಯ ಗಿಡಗಳು ಹಾಗೂ ಲಾನ್‌ ಮೇಲೆಯೇ ಕಾಮಗಾರಿಗೆ ಬಳಸುವ ಪರಿಕರಗಳನ್ನು ಇಡುವ ಮೂಲಕ ಗಿಡಗಳನ್ನು ಹಾಳು ಮಾಡಲಾಗಿದೆ.
ನೆಡಲಾಗಿದ್ದ ಗಿಡಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ನಿರ್ವಹಣೆಯಿಲ್ಲದೆ ಒಣಗಿದ ಲಾನ್‌ ಕೆ.ಆರ್‌.ರಸ್ತೆಯಲ್ಲಿ ಹಾದು ಹೋಗುವ ನಮ್ಮ ಮೆಟ್ರೋ ಮಾರ್ಗದ ಕೆಳಗೆ ಲಾನ್‌ ಹಾಗೂ ಹಲವಾರು ಅಲಂಕಾರಿಕ ಹೂವುಗಳನ್ನು ಬಿಡುವ ಗಿಡಗಳನ್ನು ನೆಡಲಾಗಿದೆ. ಆದರೆ, ಬಿಬಿಎಂಪಿಯಾಗಲಿ, ಬಿಎಂಆರ್‌ಸಿಎಲ್‌ ಆಗಲಿ ಗಿಡಗಳಿಗೆ ನೀರು ಹಾಯಿಸುವ ಕೆಲಸಕ್ಕೆ ಮುಂದಾಗದ ಪರಿಣಾಮ ಮೆಟ್ರೋ ಮಾರ್ಗದ ಕೆಳಗಿನ ಲಾನ್‌ ಹಾಗೂ ಬಹುತೇಕ ಗಿಡಗಳು ಒಣಗಿವೆ.
ಫ‌ುಟ್‌ಪಾತ್‌ ಮೇಲೆ ವ್ಯಾಪಾರ ಜೋರು ವಾರ್ಡ್‌ನ ಮಾಧವ ಕೃಷ್ಣರಾವ್‌ ಉದ್ಯಾನದ ಸುತ್ತಮುತ್ತಲಿನ ರಸ್ತೆಗಳ ಪಾದಚಾರಿ
ಮಾರ್ಗಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಆದರೆ, ಪಾದಚಾರಿಗಳಿಗಿಂತಲೂ ಬೀದಿ ವ್ಯಾಪಾರಿಗಳಿಗೆ ಪಾದಚಾರಿ ಮಾರ್ಗ ಹೆಚ್ಚಿನ ಅನುಕೂಲವಾಗುತ್ತಿದ್ದು, ಮಾರ್ಗದ ಶೇ.75ರಷ್ಟು ಜಾಗವನ್ನು ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಈ ಕುರಿತು ಸಾರ್ವಜನಿಕರಿಂದ ದೂರುಗಳು ಬಂದರೂ ಅಧಿಕಾರಿಗಳು ಮಾತ್ರ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ ಆರೋಪವಿದೆ.
ನಿವೃತ್ತ ಉದ್ಯೋಗಿಯಾಗ ನಾಗರಾಜು ಎಂಬುವವರು ತಮ್ಮ ಪಿಂಚಣಿ ಹಣದಲ್ಲಿ ನಗರದಾದ್ಯಂತ ಸಾವಿರಕ್ಕೂ ಹೆಚ್ಚಿನ ಗಿಡಗಳನ್ನು ನೆಟ್ಟು ಪೋಷಿಸುತ್ತಿದ್ದಾರೆ. ಅದೇ ರೀತಿ ಕೆ.ಆರ್‌. ರಸ್ತೆಯಲ್ಲಿ ಸುಮಾರು 220ಕ್ಕೂ ಹೆಚ್ಚಿನ ಸಸಿಗಳನ್ನು ನೆಟ್ಟು ಕಾಪಾಡಿಕೊಂಡು ಬರಲಾಗುತ್ತಿದೆ. ಆದರೆ, ಪಾಲಿಕೆಯಿಂದ ನಡೆಸಿದ ವೈಟ್‌ಟಾಪಿಂಗ್‌ ಕಾಮಗಾರಿ ಯಿಂದಾಗಿ ಒಂದೂವರೆ ವರ್ಷದ ಸುಮಾರು 30ಕ್ಕೂ ಹೆಚ್ಚು ಗಿಡಗಳು ಜೀವ ಕಳೆದು ಕೊಂಡಿವೆ. ಜತೆಗೆ ಪಾದಚಾರಿ ಮಾರ್ಗ ನಿರ್ಮಾಣಕ್ಕಾಗಿ ಗಿಡ-ಮರಗಳನ್ನು ತೆರವು ಗೊಳಿಸಿದ ಪಾಲಿಕೆಯ ಕ್ರಮ ಖಂಡನಾರ್ಹ.
●ಆನಂದ್‌, ಹಸಿರು ರಥ ಸಂಸ್ಥೆಯ ಸದಸ್ಯ
„ ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.