![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ದೇಶದ ಜಿಡಿಪಿಗಿಂತ ರಾಜ್ಯದ ಜಿಎಸ್ಡಿಪಿ ಉತ್ತಮವಾಗಿದೆ
Team Udayavani, Jul 6, 2018, 11:57 AM IST
![deshada.jpg](https://www.udayavani.com/wp-content/uploads/2018/07/6/deshada-586x465.jpg)
ಬೆಂಗಳೂರು: ದೇಶದ ಜಿಡಿಪಿಗಿಂತ ರಾಜ್ಯದ ಜಿಎಸ್ಡಿಪಿ ಉತ್ತಮವಾಗಿದೆ ಎಂದು 2018-22 ರ ಮಧ್ಯಮಾವಧಿ ವಿತ್ತೀಯ ಯೋಜನೆ ವರದಿಯಲ್ಲಿ ತಿಳಿಸಲಾಗಿದೆ. ಗುರುವಾರ ವಿಧಾನಸಭೆಯಲ್ಲಿ ಮಂಡಿಸಿರುವ ವರದಿಯಲ್ಲಿ 2017-18 ನೇ ಸಾಲಿಗೆ ದೇಶದ ಜಿಡಿಪಿ 6.7 ಇದ್ದು, ರಾಜ್ಯದ ಜಿಎಸ್ಡಿಪಿ 8.5 ರಷ್ಟಿದ್ದು, ದೇಶದ ಆರ್ಥಿಕ ಬೆಳವಣಿಗೆಗಿಂತ ಉತ್ತಮವಾಗಿದೆ ಎಂದು ಹೇಳಿದೆ.
ವಿತ್ತೀಯ ಮಾನದಂಡಗಳ ಪ್ರಕಾರ ರಾಜ್ಯದ ಆರ್ಥಿಕ ನಿರ್ವಹಣೆಯು ಪರಿಷ್ಕೃತ ಅಂದಾಜುಗಳಲ್ಲಿ ಕಂಡು ಬರುವಂತೆ ರಾಜಸ್ವ ಹೆಚ್ಚವರಿ ಮತ್ತು ವಿತ್ತೀಯ ಕೊರತೆ ವಿತ್ತೀಯ ಹೊಣೆಗಾರಿಕೆ ಅಧಿನಿಯಮದ ಮಿತಿಯೊಳಗೆ ಇರಲಿದೆ ಎಂದು ವರದಿ ತಿಳಿಸಿದೆ.
ರಾಜ್ಯದ ಆರ್ಥಿಕ ಹೊಣೆಗಾರಿಕೆ ಅಧೀನಿಯಮದ ಅಗತ್ಯತೆಗೆ ಅನುಗುಣವಾಗಿ ಮುಖ್ಯ ಕಾರ್ಯದರ್ಶಿ ನೇತೃತ್ವದ ವಿತ್ತೀಯ ನಿರ್ವಹಣೆ ಮತ್ತು ಪರಿಶೀಲನಾ ಸಮಿತಿ ಆರ್ಥಿಕ ಹೊಣೆಗಾರಿಕೆಯ ಮಾನದಂಡಗಳಿಗೆ ಅನುಸಾರವಾಗಿ ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ಸಲಹೆ ನೀಡಿದ್ದು, 6ನೇ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಹೆಚ್ಚಳ, ರೈತರ ಸಾಲ ಮನ್ನಾದಿಂದ ಆರ್ಥಿಕ ಹೊರೆ ಹೆಚ್ಚಾಗಲಿದ್ದು, ಸಂಪನ್ಮೂಲ ಕ್ರೋಢಿಕರಣಕ್ಕೆ ಆದ್ಯತೆ ನೀಡುವಂತೆ ಸಲಹೆ ನೀಡಿದೆ.
ಅಲ್ಲದೇ ಕೇಂದ್ರದಿಂದ ರಾಜ್ಯಕ್ಕೆ ಬರುವ ಅನುದಾನ ಕಡಿಮೆಯಾಗಿದೆ. ಆರ್ಕೆಆರ್ವೈ, ನರೇಗಾ ಮತ್ತು ಆರ್ಎಂಎಸ್ಎ ಯೋಜನೆಗಳಿಂದ ರಾಜ್ಯಕ್ಕೆ ಅರ್ಧಕ್ಕಿಂತ ಕಡಿಮೆ ಹಣ ಬಂದಿದ್ದು, ಅದನ್ನು ಭರಿಸಲು ರಾಜ್ಯ ಸರ್ಕಾರ ಸ್ವಂತ ಸಂಪನ್ಮೂಲಗಳಿಂದ ಹೆಚ್ಚುವರಿ ಖರ್ಚು ಮಾಡುವಂತಾಗಿದೆ. ರಾಜ್ಯ ಸರ್ಕಾರದ ಇಲಾಖೆಗಳು ಕೇಂದ್ರ ಸರ್ಕಾರದ ಅನುದಾನ ಪಡೆಯುವಲ್ಲಿ ಮುತುವರ್ಜಿ ವಹಿಸಿಬೇಕೆಂದು ಸಲಹೆ ನೀಡಿದೆ.
ಜಿಎಸ್ಟಿ ಸಂಗ್ರಹದ ಅನಿಶ್ಚಿತತೆಯಿಂದಾಗಿ 2018-19 ನೇ ಸಾಲಿನ 2ನೇ ತ್ತೈಮಾಸಿಕದಲ್ಲಿಯೂ ಮುಕ್ತ ಮಾರುಕಟ್ಟೆಯಲ್ಲಿ ಸಾಲ ಪಡೆಯಲು ಸಮಿತಿ ಶಿಫಾರಸ್ಸು ಮಾಡಿದೆ. ರಾಜಸ್ವ ಹೆಚ್ಚಳಕ್ಕೆ ಗಣಿ ಮತ್ತು ಖನಿಜಗಳ ಆದಾಯವನ್ನು ಹರಾಜಿನ ಮೂಲಕ ಹೆಚ್ಚಿಸಿಕೊಳ್ಳಬೇಕೆಂದು ಸಲಹೆ ನೀಡಿದೆ.
ಸರ್ಕಾರ ನೀಡುವ ಸಹಾಯಧನವನ್ನು ಫಲಾನುಭವಿಗಳ ಆಧಾರ್ನೊಂದಿಗೆ ಜೋಡಿಸುವುದರಿಂದ ಸೋರಿಕೆ ತಡೆಗಟ್ಟಲು ಸಾಧ್ಯವಾಗುತ್ತದೆ. ಅಲ್ಲದೇ ಬ್ಯಾಂಕುಗಳಲ್ಲಿನ ಸರ್ಕಾರದ ಠೇವಣಿ ಹಣವನ್ನು ಸರಿಯಾಗಿ ನಿರ್ವಹಣೆ ಮಾಡುವಂತೆ ಸಮಿತಿ ಸಲಹೆ ನೀಡಿದೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.