13,764 ಕೋಟಿ ರೂ. ಜಿಎಸ್‌ಟಿ ಪರಿಹಾರ ನೀಡಿ

ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ರಾಜ್ಯ ಸರ್ಕಾರದಿಂದ ಒತ್ತಾಯ ವಿಶೇಷ ವರದಿ ಪ್ರಕಟಿಸಿದ್ದ ಉದಯವಾಣಿ

Team Udayavani, Aug 28, 2020, 2:39 PM IST

13,764 ಕೋಟಿ ರೂ. ಜಿಎಸ್‌ಟಿ ಪರಿಹಾರ ನೀಡಿ

ಬೆಂಗಳೂರು: ಕೇಂದ್ರ ಸರ್ಕಾರ ಕಳೆದ 4 ತಿಂಗಳ ಜಿಎಸ್‌ಟಿ ಪರಿಹಾರ 13,764 ಕೋಟಿ ರೂ.ಗಳನ್ನು ಕೂಡಲೇ ರಾಜ್ಯಕ್ಕೆ ನೀಡಬೇಕು ಎಂದು ರಾಜ್ಯ ಸರ್ಕಾರ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ಒತ್ತಾಯಿಸಿದೆ.

ಗುರುವಾರ ನಡೆದ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಪಾಲ್ಗೊಂಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಒತ್ತಾಯ ಮಾಡಿದ್ದಾರೆ. ಕೋವಿಡ್‌-19 ಹಾವಳಿ ನಡುವೆಯೂ ರಾಜ್ಯದಲ್ಲಿ ಕಳೆದ 4 ತಿಂಗಳಲ್ಲಿ ಜಿಎಸ್‌ಟಿ  ಸಂಗ್ರಹದಲ್ಲಿ ಶೇ.71.61 ಗುರಿ ಸಾಧನೆಯಾಗಿದ್ದು, ಇತರೆ ರಾಜ್ಯಗಳಿಗೆ ಹೋಲಿಸಿದರೆ ತೆರಿಗೆ ಸಂಗ್ರಹ ಉತ್ತಮವಾಗಿದೆ. ಆದರೆ ಕಳೆದ 4 ತಿಂಗಳಿನಿಂದ ಒಟ್ಟು 13,764 ಕೋಟಿ ರೂ. ಜಿಎಸ್‌ಟಿ ಪರಿಹಾರ ರಾಜ್ಯಕ್ಕೆ ಬಿಡುಗಡೆಯಾಗಬೇಕಿದೆ. ಸಂವಿಧಾನದ 101ರ ತಿದ್ದುಪಡಿ ಸೆಕ್ಷನ್‌ 18ರಲ್ಲಿ ಜಿಎಸ್‌ಟಿ ಕೌನ್ಸಿಲ್‌ ರಾಜ್ಯಗಳಿಗೆ ತೆರಿಗೆ ಸಂಗ್ರಹ ಕೊರತೆ ನಿವಾರಿಸುವ ಬಗ್ಗೆ ಸ್ಪಷ್ಟವಾಗಿ ಉಲ್ಲೇಖೀಸಲಾಗಿದೆ‌. ಅದರಂತೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಲಾಗಿದೆ ಎಂದು ಹೇಳಿದ್ದಾರೆ.

ತೆರಿಗೆ ಪರಿಹಾರಕ್ಕಾಗಿ ವಿಧಿಸುವ ಸೆಸ್‌ ಕೇಂದ್ರ ಸರ್ಕಾರದ ಪರಿಹಾರ ಖಾತೆಗೆ ನೇರವಾಗಿ ಜಮೆಯಾಗುತ್ತದೆ. ಇದರಿಂದ ರಾಜ್ಯಗಳು ಸಾಲ ಪಡೆಯಲು ಕಷ್ಟವಾಗುತ್ತದೆ. ಈ ಸಾಲ ಮರು ಪಾವತಿಸಲು ಕೇಂದ್ರ ಸರ್ಕಾರ ವಿಶೇಷ ತೆರಿಗೆ ವಿಧಿಸುವ ಅಧಿಕಾರವಿದ್ದು, 2023ರ ನಂತರ ಅದರ ಅವಧಿ ವಿಸ್ತರಿಸಲು ಅಧಿಕಾರವಿದೆ. ಹಾಗಾಗಿ ಕೇಂದ್ರ ಸರ್ಕಾರ ಸಾಲ ಪಡೆದು ತೆರಿಗೆ ಪರಿಹಾರ ಕೊಡುವುದು ಸೂಕ್ತ ಎಂಬುದಾಗಿಯೂ ಅಭಿಪ್ರಾಯ ಹೇಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಒಟ್ಟು ತೆರಿಗೆ ರಾಜಸ್ವದಲ್ಲಿ 1.80 ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಕೋವಿಡ್‌-19 ಮಹಾಮಾರಿ ಹಾಗೂ ಪ್ರವಾಹದಿಂದ ಇದರಲ್ಲಿ ಕೊರತೆಯಾಗುವ ಎಲ್ಲ ಸಾಧ್ಯತೆಯಿದ್ದು, ಇದರಿಂದ ರಾಜ್ಯ ಆರ್ಥಿಕ ಪ್ರಗತಿ ಕಷ್ಟ. ಕೋವಿಡ್‌-19 ಎದುರಿಸಲು ಹೆಚ್ಚುವರಿ ಹಣಕಾಸಿನ ಅಗತ್ಯವಿದೆ ಎಂಬುದನ್ನು ಕೌನ್ಸಿಲ್‌ನ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ. ಹೆಚ್ಚು ತೆರಿಗೆ ವಿಧಿಸಲು ಸಲಹೆ: ಐಷಾರಾಮಿ ವಸ್ತುಗಳ ಮೇಲೆ ಹಾಗೂ ತಂಬಾಕು, ಪಾನ್‌ ಮಸಾಲ ಮೇಲೆ ಹೆಚ್ಚಿನ ತೆರಿಗೆ ವಿಧಿಸಲು ಅವಕಾಶವಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ ಸದ್ಯದ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಕಂಡುಕೊಳ್ಳುವುದು ಒಕ್ಕೂಟ ವ್ಯವಸ್ಥೆಯಲ್ಲಿ ಅನಿರ್ವಾಯ. ಹೀಗಾಗಿ ರಾಜ್ಯ ಸರ್ಕಾರವೂ ಕೇಂದ್ರ ಸರ್ಕಾರಕ್ಕೆ ಅಗತ್ಯ ಸಹಕಾರ ನೀಡುವುದಾಗಿ ಸಭೆಯಲ್ಲಿ ತಿಳಿಸಲಾಯಿತು ಎಂದು ತಿಳಿಸಿದ್ದಾರೆ.

ಸಭೆ ಅಂತ್ಯದಲ್ಲಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಮಾತನಾಡಿದರು. ಕೇಂದ್ರ ರಾಜ್ಯಗಳಿಗೆ ಯಾವುದೇ ಹೊರೆ ಇಲ್ಲದೆ ಸಾಲ ಪಡೆಯುವ ವ್ಯವಸ್ಥೆ ಕಲ್ಪಿಸಲಿದೆ ಹಾಗೂ ಈ ಸಾಲವನ್ನು 3 ವರ್ಷ ಪರಿಹಾರ ಸೆಸ್‌ ವಿಸ್ತರಿಸುವ ಮುಖಾಂತರ ಸಾಲ ಮರುಪಾವತಿಸಲಾಗುತ್ತದೆ ಎಂದು ಪ್ರಸ್ತಾವನೆ ಮಂಡಿಸಿದರು. ಈ ಬಗ್ಗೆ ಒಪ್ಪಿಗೆ ಸೂಚಿಸಲು ರಾಜ್ಯಗಳಿಗೆ 7ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಹೇಳಿದರು ಎಂಬುದಾಗಿ ಬಸವರಾಜ ಬೊಮ್ಮಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.